ಎಚ್ಡಿಕೆ ದೆಹಲಿ ಪ್ರವಾಸ ರದ್ದು


Team Udayavani, May 22, 2019, 6:00 AM IST

z-43

ಬೆಂಗಳೂರು: ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿಯವರು ಮಂಗಳವಾರ ದಿಢೀರ್‌ ದೆಹಲಿ ಪ್ರವಾಸ ರದ್ದುಗೊಳಿಸಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಸಮಾಲೋಚನೆ ನಡೆಸಿದರು. ದೆಹಲಿಯಲ್ಲಿ ಬಿಜೆಪಿಯೇತರ ಪಕ್ಷಗಳು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಬೇಕಿದ್ದ ಕುಮಾರಸ್ವಾಮಿ ಬೆಳಗ್ಗೆ ಪ್ರವಾಸ ರದ್ದುಪಡಿಸಿ ಪಕ್ಷದ ಶಾಸಕರ ಜತೆ ಆಂತರಿಕ ಸಮಾಲೋಚನೆ ನಡೆಸಿ ನಂತರ ಪದ್ಮನಾಭನಗರದಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ರೋಷನ್‌ಬೇಗ್‌ ಹೇಳಿಕೆ, ಅದರಿಂದ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ತಲ್ಲಣ, ಬಿಜೆಪಿಯ ಆಪರೇಷನ್‌ ಕಮಲ ಪ್ರಯತ್ನ, ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ಎದುರಾಗಬಹುದಾದ ಸನ್ನಿವೇಶಗಳ ಬಗ್ಗೆ ದೇವೇಗೌಡರ ಜತೆ ಚರ್ಚಿಸಿದ ಕುಮಾರಸ್ವಾಮಿ, ಅಲ್ಲಿಂದಲೇ ಕಾಂಗ್ರೆಸ್‌ ಹೈಕಮಾಂಡ್‌ ಜತೆಗೂ ದೂರವಾಣಿ ಮೂಲಕ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಕೆಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿರುವ ಬಗ್ಗೆಯೂ ಗುಪ್ತದಳ ಮಾಹಿತಿಯಿದ್ದು ಫ‌ಲಿತಾಂಶ ಹೊರಬಿದ್ದ ದಿನವೇ ಕೆಲವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು ಅದರ ಬಗ್ಗೆ ದೇವೇಗೌಡರ ಜತೆ ಮಾತನಾಡಿದರು ಈ ಸಂದರ್ಭದಲ್ಲಿ ದೇವೇಗೌಡರು ಕೆಲವು ಸಲಹೆ ನೀಡಿದರು ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಿದ್ದ ಕುಮಾರಸ್ವಾಮಿಯವರು ನಂತರ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು. ಆದರೆ, ರಾಹುಲ್ಗಾಂಧಿಯವರು ನೀವು ದೆಹಲಿಗೆ ಬರುವುದು ಬೇಡ, ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದು ನಿಮ್ಮ ಜತೆ ಚರ್ಚಿಸಲಿದ್ದಾರೆ. ನೀವು ಬೆಂಗಳೂರಿನಲ್ಲೇ ಇದ್ದು ಶಾಸಕರು ಬಿಜೆಪಿಯತ್ತ ಹೋಗದಂತೆ ನಿಗಾ ವಹಿಸಿ ಎಂದು ಸೂಚನೆ ನೀಡಿದರು. ಹೀಗಾಗಿ, ದೆಹಲಿ ಪ್ರವಾಸ ರದ್ದಗೊಂಡಿತು ಎಂದು ಹೇಳಲಾಗಿದೆ.

ತಂತ್ರನಾ?: ಮತ್ತೂಂದು ಮೂಲದ ಪ್ರಕಾರ, ದೆಹಲಿಯಲ್ಲಿ ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದೆ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ದೆಹಲಿ ಪ್ರವಾಸ ರದ್ದುಗೊಳಿಸಲಾಯಿತು ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ದೆಹಲಿ ಪ್ರವಾಸ ರದ್ದುಪಡಿಸಿದ್ದರಿಂದ ಜೆಡಿಎಸ್‌ ಕಾಂಗ್ರೆಸ್‌ ಸಂಬಂಧ ಕಡಿದುಕೊಂಡು ಬಿಜೆಪಿ ಜತೆ ಹೋಗಬಹುದು ಎಂಬ ಗುಸು ಗುಸು ಪ್ರಾರಂಭವಾಗಿದೆ. ಆದರೆ, ಜೆಡಿಎಸ್‌ ಮೂಲಗಳು ಇದನ್ನು ನಿರಾಕರಿಸಿವೆ.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.