ಎಚ್ಡಿಕೆ-ಸಿದ್ದರಾಮಯ್ಯ ಮಾತು ಅನಗತ್ಯ: ಬಾಲಕೃಷ್ಣ
Team Udayavani, Sep 25, 2019, 7:30 PM IST
ಬೆಂಗಳೂರು: ಕುಮಾರಸ್ವಾಮಿ ಅವರು ಅಧಿಕಾರ ಸಿಕ್ಕಾಗ ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದೆ ಈಗ ಮಾತನಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ಇದೀಗ ಕಾಂಗ್ರೆಸ್-ಜೆಡಿಎಸ್ ನಡುವೆ ಡೈವೋರ್ಸ್ ಆಗಿದೆ. ಹಾಗೆ ನೋಡಿದರೆ ಕಾಂಗ್ರೆಸ್ ಶಾಸಕರು ಮಾತ್ರವಲ್ಲ, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರಲ್ಲ, ಅವರೂ ಸಿದ್ದರಾಮಯ್ಯ ಮಾತು ಕೇಳಿ ಕೊಟ್ಟರಾ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವೆ ಹದ್ದು-ಗಿಣಿ ಮಾತುಗಳು ಅನಗತ್ಯ. ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ವೈಯಕ್ತಿಕವಾಗಿ ವಿರೋಧ ಇದ್ದರೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲಾಗಿತ್ತು ಎಂದು ಹೇಳಿದರು.
ಮಹಾಲಕ್ಷ್ಮೀ ಲೇ ಔಟ್ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಒತ್ತಡ ಇದೆಯಾದರೂ ಅದಕ್ಕೆ ನಾನು ಸಿದ್ಧನಿಲ್ಲ ಎಂದರು.