ಬರದ ಬಳಿಕ ಜಾನುವಾರುಗಳಿಗೆ ನೆರೆಯ ಬರೆ


Team Udayavani, Aug 12, 2019, 3:10 AM IST

barada

ಬೆಂಗಳೂರು: ಬರದಿಂದ ತತ್ತರಿಸಿ ಹೋಗಿದ್ದ ಜಾನುವಾರುಗಳಿಗೆ ಈಗ ನೆರೆ ಸಂಕಷ್ಟ ತಂದೊಡ್ಡಿದೆ. ಪ್ರವಾಹ ಪೀಡಿತ ಪ್ರದೇಶಗಳ ಜಾನುವಾರುಗಳಲ್ಲಿ ಮಾರಣಾಂತಿಕ ಕಾಯಿಲೆಗಳ ಭೀತಿ ಎದುರಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಜಾನುವಾರುಗಳು ಮಾರಕ ಗಳಲೆ ರೋಗ ಅಥವಾ ಗಂಟಲು ಬೇನೆ, ಚಪ್ಪೆ ರೋಗ, ನೆರಡಿ (ಅಂಥ್ತ್ಯಾಕ್ಸ್‌) ತುತ್ತಾಗುವ ಸಾಧ್ಯತೆಗಳಿದ್ದು, ಸರ್ಕಾರ ಹಾಗೂ ಇಲಾಖೆ ಸಕಾಲದಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗಬಹುದು.

ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗ ಸೇರಿ ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಭೀಕರ ಪ್ರವಾಹ ಉಂಟಾಗಿದೆ. ಇಲ್ಲಿ ಯಾವ ರೀತಿ ಜನರ ಬದುಕು ದುಸ್ತರವಾಗಿದೆಯೋ ಅದೇ ರೀತಿ ಜಾನುವಾರುಗಳ ಸ್ಥಿತಿಯೂ ಅದಕ್ಕಿಂತಲೂ ದುರ್ಬರವಾಗಿದೆ. ಬರದ ಹಿನ್ನೆಲೆಯಲ್ಲಿ ಮೇವು, ಕುಡಿಯುವ ನೀರಿನ ಅಲಭ್ಯತೆಯಿಂದ ಸಾಕಷ್ಟು ತೊಂದರೆಗೆ ಸಿಲುಕಿಕೊಂಡಿದ್ದ ಜಾನುವಾರುಗಳಿಗೆ ಈಗ ಮಳೆ ಹಾಗೂ ನೆರೆ ಕಂಗಾಲಾಗಿಸಿದೆ.

ಮಳೆಗಾಲ, ವಾತಾವಾರಣದಲ್ಲಿನ ತೇವಾಂಶ, ಚಳಿ, ಕಲುಷಿತ ನೀರು ಮತ್ತು ಆಹಾರ ಸೇವನೆಯಿಂದ, ಸಮರ್ಪಕ ಗಾಳಿ-ಬೆಳಕು ಇಲ್ಲದ ಕೊಟ್ಟಿಗೆಗಳು, ಹವಾಮಾನ ವೈಪರಿತ್ಯ, ಆಯಾಸ ಮತ್ತು ಬಳಲಿಕೆಯಿಂದಾಗಿ ವಿವಿಧ ಬಗೆಯೆ ಸೋಂಕು ರೋಗಗಳು ಜಾನುವಾರುಗಳಿಗೆ ಬಾಧಿಸುತ್ತವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಈ ರೋಗಗಳು ಬಾಧಿಸದಂತೆ ಹಾಗೂ ಅವು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಇದಕ್ಕಾಗಿ ಪಶುಸಂಗೋಪನಾ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ನಿಯಮಿತವಾಗಿ ಕಾಯಿಲೆ ತಪಾಸಣೆ, ಅಗತ್ಯ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಪ್ರವಾಹದಿಂದಾಗಿ ಅನೇಕ ಕಡೆ ರಸ್ತೆ, ವಿದ್ಯುತ್‌ ಹಾಗೂ ದೂರವಾಣಿ ಸಂಪರ್ಕ ಕಡಿತವಾಗಿ ರುವುದರಿಂದ ಸಂಪರ್ಕ ಮತ್ತು ಸಂವಹನದಲ್ಲಿ ಅಡಚಣೆ ಉಂಟಾಗುತ್ತಿದೆ ಎಂದು ಇಲಾಖೆ ಅಧಿಕಾರಿಗಳು ಅಸಹಾಯತೆ ತೋಡಿಕೊಳ್ಳುತ್ತಿದ್ದಾರೆ.

ಜಿಲ್ಲೆಗೊಬ್ಬ ಅಧಿಕಾರಿ: ಜಾನುವಾರುಗಳ ರಕ್ಷಣೆ, ಚಿಕಿತ್ಸೆಯ ದೃಷ್ಟಿಯಿಂದ ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲೆಗಳಿಗೆ ಇಲಾಖೆ ಕೇಂದ್ರ ಕಚೇರಿಯಿಂದ ಪ್ರತಿ ಜಿಲ್ಲೆಗೆ ಒಬ್ಬೊಬ್ಬ ಅಧಿಕಾರಿಯನ್ನು ನಿಯೋಜಿ ಸಲಾಗಿದೆ. ಇವರೆಗೆ ರಾಜ್ಯದಲ್ಲಿ 180ಕ್ಕೂ ಹೆಚ್ಚು ಗೋಶಾಲೆಗಳನ್ನು ತೆರೆಯಲಾಗಿದ್ದು, ಪ್ರವಾಹ ಪೀಡಿತ ಜಿಲ್ಲೆಗಳ ಗೋಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಆಶ್ರಯ ನೀಡಲಾಗಿದೆ.

ಅಲ್ಲಿ ಮೇವು, ಸೂಕ್ತ ಔಷಧಿಗಳ ವ್ಯವಸ್ಥೆ ಸಹ ಮಾಡಲಾಗಿದೆ. ಪಶು ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸದ್ಯ ಎಲ್ಲೆಲ್ಲಿ ಎಷ್ಟು ಜಾನುವಾರುಗಳಿಗೆ, ಅವುಗಳಲ್ಲಿ ಎಷ್ಟು ಜಾನುವಾರುಗಳಿಗೆ ಯಾವ್ಯಾವ ಕಾಯಿಲೆಗಳ ಲಕ್ಷಣಗಳು ಕಂಡು ಬಂದಿವೆ, ರೋಗ ಬಾಧಿಸಿದೆ ಎಂಬ ಮಾಹಿತಿ ಇನ್ನೂ ಕಲೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್‌ ಸಿಂಗ್‌ ಹೇಳಿದ್ದಾರೆ.

ಕಾಣಿಸಿಕೊಳ್ಳುವ ರೋಗಗಳು: ಸಾಮಾನ್ಯವಾಗಿ ಮಳೆಗಾಲದಲ್ಲಿ ಜಾನುವಾರುಗಳಲ್ಲಿ ಗಳಲೆ ರೋಗ (ಗಂಟಲು ಬೇನೆ), ಚಪ್ಪೆ ರೋಗ (ಬ್ಲಾಕ್‌ ಕ್ವಾರ್ಟರ್‌), ನೆರಡಿ ರೋಗ (ಅಂಥ್ತ್ಯಾಕ್ಸ್‌), ಕಾಲು ಬಾಯಿ ಜ್ವರ ಸೇರಿದಂತೆ ಬ್ರೂಸೆಲ್ಲೋಸಿಸ್‌ (ಕಂದು ಹಾಕುವ ರೋಗ), ಕೆಚ್ಚಲು ಬಾವು ರೋಗಗಳು ಬಾಧಿಸುತ್ತವೆ. ಕೆಲವೊಮ್ಮೆ ಇಲಿ ಜ್ವರ ಸಹ ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಪ್ಯಾಶ್ಚುರೆಲ್ಲಾ ಮಲ್ಟೊಸಿಡಾ ಬ್ಯಾಕ್ಟೀರಿಯಾದಿಂದ ಹರಡುವ ಗಳಲೆ ರೋಗ, ಕ್ಲಾಸ್ಟ್ರೀಡಿಯಂ ಚವೈ ರೋಗಾಣುನಿಂದ ಹರಡುವ ಚಪ್ಪೆ ರೋಗ, ಬ್ಯಾಲಾಸಿಸ್‌ ಅಂತ್ರಾಸಿಸ್‌ ವೈರಸ್‌ನಿಂದ ಉಲ್ಬಣಿಸುವ ನೆರಡಿ ರೋಗ, ಬ್ರುಸಲ್ಲಾ ಅಬಾರ್ಟಸ್‌ ವೈರಸ್‌ನಿಂದ ಬರುವ ಕಂದು ಹಾಕುವ ರೋಗ, ಸಾಮಾನ್ಯವಾಗಿ ದನ, ಹಸು, ಎಮ್ಮೆ, ಕುರಿ, ಮೇಕೆ ಹಾಗೂ ಹಂದಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ಪ್ರವಾಹ ಪೀಡಿತ ಪ್ರದೇಶಗಳ ಜಾನುವಾರುಗಳ ಆರೋಗ್ಯ ರಕ್ಷಣೆ ಸೇರಿದಂತೆ ಅವುಗಳಿಗೆ ಸೂಕ್ತ ಔಷಧಿ, ಮೇವು ಹಾಗೂ ಇತರ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಲು ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಜಿಲ್ಲಾ ಹಂತದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಕೇಂದ್ರ ಕಚೇರಿಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ.
-ಪಿ. ಮಣಿವಣ್ಣನ್‌, ಕಾರ್ಯದರ್ಶಿ (ಪ್ರಭಾರ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.