ಕಲಿಸಿದ ಶಾಲೆಯ ಋಣ ತೀರಿಸಿದ ಮುಖ್ಯಶಿಕ್ಷಕ

2 ಲಕ್ಷ ರೂ. ಠೇವಣಿ ಮಾಡಿ ಕಡು ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ; ನಿವೃತ್ತಿ ದಿನವೇ ಮಹತ್ವದ ನಿರ್ಧಾರ

Team Udayavani, Jun 5, 2022, 5:42 PM IST

18

ಮಹಾಲಿಂಗಪುರ: ಸಮೀಪದ ಮದಭಾಂವಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾಗಿ 9 ವರ್ಷ 9 ತಿಂಗಳ ಸೇವೆ ಸಲ್ಲಿಸಿ, ವೃತ್ತಿಯಾದ ಕೆ.ಎಂ.ಬಿಜಾಪುರ ಅವರು ನಿವೃತ್ತಿ ದಿನ ಕೈಗೊಂಡ ನಿರ್ಧಾರ, ಬಡ ಮಕ್ಕಳ ಕುರಿತಾದ ಕಾಳಜಿ ತಾವು ಕಲಿಸಿದ ಸರ್ಕಾರಿ ಶಾಲೆಯ ಮೇಲಿನ ಪ್ರೀತಿ, ಅಭಿಮಾನಕ್ಕೆ ಸಾಕ್ಷಿಯಾಗಿದೆ.

ಹೌದು. ಬಿಜಾಪುರ ಅವರು ಮದಭಾಂವಿ ಸರ್ಕಾರಿ ಪ್ರೌಢ ಶಾಲೆಯ 10ನೇ ವರ್ಗದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2ಲಕ್ಷ ರೂ. ಗಳನ್ನು ಠೇವಣಿ ಮಾಡಿ, ಪ್ರತಿವರ್ಷ ಆ ಠೇವಣಿಯಿಂದ ಬರುವ ಬಡ್ಡಿ ಹಣದಲ್ಲಿ ಕಡು ಬಡವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯ ನೀಡುವುದಾಗಿ ಘೋಷಿಸಿದ್ದಾರೆ. ಸೇವಾವಧಿ ಮುಗಿದ ನಂತರ ಇಷ್ಟೊಂದು ಬೃಹತ್‌ ಮೊತ್ತ ಶಾಲೆಗೆ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮದಭಾಂವಿ ಗ್ರಾಮಸ್ಥರು, ಎಸ್‌ ಡಿಎಂಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರಿಂದ ಶಾಲೆಯ ಎಸ್‌ ಡಿಎಂಸಿ ಪದಾಧಿಕಾರಿಗಳಾದ ರವಿ ಕಲ್ಲೋಳ್ಳಿ (ಅಧ್ಯಕ್ಷ), ಪರಪ್ಪ ಉರಭಿನವರ(ಉಪಾಧ್ಯಕ್ಷ), ಮಹ್ಮದ ಹೂಲಿಕಟ್ಟಿ, ಮಲ್ಲಪ್ಪ ಅರಭಾಂವಿ, ಮಹಾಲಿಂಗ ಇಟ್ನಾಳ, ಸುರೇಶ ಸುತಾರ, ಶಂಕರ ವಗ್ಗರ, ಮುತ್ತವ್ವ ಮಾಂಗ, ಮಹಾದೇವಿ ಮಾಂಗ, ಗ್ರಾಮದ ಹಿರಿಯರಾದ ಬಸಪ್ಪ ವಗ್ಗರ, ವಿನೋದ ಉಳ್ಳಾಗಡ್ಡಿ, ಎಂ.ಬಿ.ನಾಯಕ, ಸದಾಶಿವ ಕೋಳೆಕಾರ, ಸತ್ಯಪ್ಪ ಮುಧೋಳ ಸೇರಿದಂತೆ ಗ್ರಾಮಸ್ಥರು ಊರಲ್ಲಿ ಬ್ಯಾನರ್‌ ಕಟ್ಟಿ, ಕೆ.ಎಂ.ಬಿಜಾಪೂರ ದಂಪತಿಯನ್ನು ಚಕ್ಕಡಿ ಬಂಡಿಯಲ್ಲಿ ಕುಳ್ಳಿರಿಸಿ ಗ್ರಾಮದ ತುಂಬಾ ಮೆರವಣಿಗೆ ಮಾಡಿದ್ದಾರೆ. ಪ್ರೀತಿ, ಅಭಿಮಾನದಿಂದ ಸನ್ಮಾನಿಸಿ-ಬೀಳ್ಕೊಟ್ಟಿದ್ದಾರೆ.

ನಮ್ಮ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಕೆ.ಎಂ.ಬಿಜಾಪುರ ಅವರು ತಮ್ಮ ಸೇವಾ ನಿವೃತ್ತಿ ದಿನವೇ, ಶಾಲೆಯ ಬಡಮಕ್ಕಳ ಶೈಕ್ಷಣಿಕ ನೆರವಿಗಾಗಿ 2 ಲಕ್ಷ ರೂ.ಠೇವಣಿ ಇಡುವುದಾಗಿ ಘೋಷಿಸಿರುವುದು ಅವರಲ್ಲಿನ ಶೈಕ್ಷಣಿಕ ಕಾಳಜಿ, ಬಡಮಕ್ಕಳ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ. ಅವರು ಮಾದರಿಯಾಗಿದ್ದಾರೆ. -ಆಯ್‌.ಎಸ್‌.ಪಾಟೀಲ, ಸಹಶಿಕ್ಷಕರು

„ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.