ಔಷಧೀಯ ಗುಣಗಳ ಕಣಜ…ಜೇನು ತುಪ್ಪ ಸೇವನೆಯಿಂದ ಹಲವು ಆರೋಗ್ಯ ಲಾಭಗಳಿವೆ…

ಕ್ಯಾಲ್ಸಿಯಂ ಮತ್ತು ಅಯೋಡಿನ್ ನಂತಹ ಪೌಷ್ಟಿಕಾಂಶಗಳು ಇದೆ

ಕಾವ್ಯಶ್ರೀ, Mar 9, 2023, 5:40 PM IST

Web-exclusive

ಹಿಂದಿನ ಕಾಲದಿಂದಲೂ ಜೇನುತುಪ್ಪವನ್ನು ಔಷಧವನ್ನಾಗಿ ಹೆಚ್ಚು ಉಪಯೋಗಿಸಲಾಗುತ್ತದೆ. ಜೇನನ್ನು ಎಷ್ಟು ವರ್ಷಗಳ ಕಾಲ ಬೇಕಾದರೂ ಕೆಡದಂತೆ ಶೇಖರಿಸಿಕೊಂಡು ಉಪಯೋಗಿಸಬಹುದು. ಜೇನಿನಲ್ಲಿ ಹಲವು ರೀತಿಯ ಆರೋಗ್ಯ ಲಾಭವಿದೆ.

ಜೇನುಹುಳುಗಳು ಹೂವಿನ ಮಕರಂದ ಹೀರುವ ಮೂಲಕ ಜೇನುತುಪ್ಪ ಉತ್ಪತ್ತಿ ಮಾಡುತ್ತವೆ. ಇದನ್ನು ಸೌಂದರ್ಯವರ್ಧಕ, ಔಷಧಿಗಳು ಹಾಗೂ ಪೋಷಕಾಂಶವರ್ಧಕ ಉತ್ಪನ್ನಗಳ ತಯಾರಿಕೆಯಲ್ಲಿ ಹೆಚ್ಚು ಬಳಸುತ್ತಾರೆ.

ಅಸ್ತಮಾ, ಗಂಟಲು ನೋವು, ಕಣ್ಣಿನ ಸಮಸ್ಯೆ, ಟಿಬಿ, ತಲೆಸುತ್ತು, ಮೂಲವಾಧ್ಯಿ, ಮಲಬದ್ಧತೆ ಮುಂತಾದ ಸಮಸ್ಯೆಗಳಿಗೂ ಇದೊಂದು ಪ್ರಮುಖ ಔಷಧವನ್ನಾಗಿ ಉಪಯೋಗಿಸಹುದು. ಡಯೆಟ್‌ ಗೆ ಸಂಬಂಧಿಸಿದ ಆಹಾರ ಪಾಲಿಸುವವರಿಗೆ ಜೇನುತುಪ್ಪ ಸೇವಿಸುವುದು ಹಲವು ಉಪಯೋಗಗಳಿವೆ.

ಜೇನುತುಪ್ಪದಲ್ಲಿ ವಿಟಮಿನ್ ಎ, ಬಿ, ಸಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಅಯೋಡಿನ್ ನಂತಹ ಪೌಷ್ಟಿಕಾಂಶಗಳು ಇದೆ. ಇದು ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ದೇಹದ ಮೇಲೆ ಬ್ಯಾಕ್ಟೀರಿಯಾ ಬೆಳೆಯಲು ಬಿಡುವುದಿಲ್ಲ. ಏಕೆಂದರೆ ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ.

ಜೇನುತುಪ್ಪ ಆರೋಗ್ಯಕ್ಕೆ ಯಾವುದೆಲ್ಲಾ ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆಂಬ ಬಗ್ಗೆ ತಿಳಿದುಕೊಳ್ಳೋಣ.

ರೋಗನಿರೋಧಕ ಶಕ್ತಿ ಹೆಚ್ಚಳ:

ಪ್ರತಿದಿನ ಜೇನುತುಪ್ಪ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಕೊರತೆ ನೀಗಿಸಿಕೊಳ್ಳಬಹುದು. ಇದರಲ್ಲಿ ಸೋಂಕುಗಳ ವಿರುದ್ಧ ಹೋರಾಡುವ ಗುಣವಿದ್ದು, ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಟೈಪ್‌ 2 ಡಯಾಬಿಟಿಸ್, ಹೃದಯದ ಸಮಸ್ಯೆ, ಬಾಲನೆರೆ ಮುಂತಾದ ಸಮಸ್ಯೆಗೂ ಜೇನುತುಪ್ಪ ಸೇವನೆ ಉತ್ತಮ ಪರಿಹಾರ.

ಹೃದಯದ ಸಮಸ್ಯೆ:

ಹೃದಯದ ಸಮಸ್ಯೆಗಳಿಗೆ ಜೇನುತುಪ್ಪ ಪರಿಹಾರ. ಅಧ್ಯಯನವೊಂದರ ಪ್ರಕಾರ ಇದು ಹೃದಯ ಬಡಿತವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ರಕ್ತದಲ್ಲಿ ಕೊಬ್ಬಿನಂಶ ಹೆಚ್ಚು ಮಾಡುವುದು ಮಾತ್ರವಲ್ಲ, ಉತ್ತಮ ರಕ್ತನಾಳಗಳ ಪುರ್ನಚೇತನಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಸಂಪೂರ್ಣ ದೇಹದ ಆರೋಗ್ಯ ಸುಧಾರಿಸುವ ಜೊತೆಗೆ ಹೃದಯದ ಕಾರ್ಯಚಟುವಟಿಕೆಯೂ ಸುಧಾರಿಸುತ್ತದೆ.

ವಸಡಿನ ಸಮಸ್ಯೆಗೆ

ಜೇನುತುಪ್ಪದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಹಾಗೂ ನಂಜು ನಿವಾರಕ ಗುಣ ಹಲವು ಚಿಕಿತ್ಸೆಗಳಿಗೆ ಉಪಯೋಗವಾಗಲಿದೆ. ಇದು ಗಾಯಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ. ವಸಡಿನಲ್ಲಿ ಕೀವು, ರಕ್ತ ಸೋರುವುದು ಮುಂತಾದ ಹಲ್ಲು ಹಾಗೂ ವಸಡಿನ ಸಮಸ್ಯೆಗೆ ಪರಿಹಾರ ಜೇನುತುಪ್ಪ. ಇದನ್ನು ಪ್ರತಿನಿತ್ಯ ಬಳಸುವುದರಿಂದ ವಸಡಿನ ಹಲವು ಸಮಸ್ಯೆ ನಿವಾರಿಸುತ್ತದೆ.

ನೆನಪಿನ ಶಕ್ತಿಯನ್ನು ಸುಧಾರಿಸುತ್ತದೆ

ಹಲವು ಔಷಧೀಯ ಗುಣಗಳನ್ನು ಹೊಂದಿರುವ ಜೇನುತುಪ್ಪ ನೆನಪಿನ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಗಮನಶಕ್ತಿ ಹೆಚ್ಚಾಗಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಮೆದುಳಿನ ಆರೋಗ್ಯ ಸುಧಾರಿಸುವುದು ಮಾತ್ರವಲ್ಲ, ಆರೋಗ್ಯ ಸುಧಾರಣೆಗೆ ಇದನ್ನು ಸೇವಿಸಬಹುದು. ಇದು ಚಯಾಪಚಯ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ

ಜೇನುತುಪ್ಪದಲ್ಲಿನ ಮಾಯಿಶ್ಚರೈಸರ್‌ ಹಾಗೂ ಪೋಷಣೆಯ ಗುಣದ ಕಾರಣದಿಂದ ಪ್ರತಿನಿತ್ಯ ಚರ್ಮಕ್ಕೆ ಹಚ್ಚಿಕೊಳ್ಳುವುದರಿಂದ ಹಲವು ಚರ್ಮದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.  ಒಣಚರ್ಮದ ಸಮಸ್ಯೆ ಹೊಂದಿರುವವರಿಗೆ ಇದು ಉತ್ತಮ ಮಾಯಿಶ್ಚರೈಸರ್‌ ರೂಪದಲ್ಲಿ ಕೆಲಸ ಮಾಡುತ್ತದೆ. ಕಚ್ಚಾ ಜೇನುತುಪ್ಪುವು ಚರ್ಮದ ರಂಧ್ರಗಳನ್ನು ತೆರವು ಮಾಡಲು ಸಹಾಯ ಮಾಡುತ್ತದೆ. ಒಡೆದ ಹಿಮ್ಮಡಿ ಹಾಗೂ ತುಟಿಗಳಿಗೂ ಇದನ್ನು ಹಚ್ಚಬಹುದು. ಯಾವುದೇ ರೀತಿಯ ಗಾಯ, ಸುಟ್ಟ ಗಾಯದ ಉರಿ ಕಡಿಮೆ ಮಾಡಲು, ಸುಟ್ಟ ಗಾಯ ಗುಣಪಡಿಸಲು ಹಾಗೂ ಸೋಂಕುಗಳನ್ನು ನೈಸರ್ಗಿಕವಾಗಿ ಗುಣಪಡಿಸುವ ಅಂಶ ಇದರಲ್ಲಿದೆ.

ಜೇನುತುಪ್ಪವನ್ನು ಸೇವಿಸುವಾಗ ಮಿತವಾದ ಅಭ್ಯಾಸ ಮಾಡುವುದು ಮುಖ್ಯ. ಪ್ರತಿದಿನ ಸುಮಾರು 50 ಮಿಲಿ ಜೇನುತುಪ್ಪ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ ತಜ್ಞರು.

-ಕಾವ್ಯಶ್ರೀ

ಟಾಪ್ ನ್ಯೂಸ್

crypto ಕರೆನ್ಸಿ ಅಕ್ರಮ ವಹಿವಾಟು; 20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ; ಕೇಂದ್ರ ಸರ್ಕಾರ

crypto ಕರೆನ್ಸಿ ಅಕ್ರಮ ವಹಿವಾಟು; 20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ; ಕೇಂದ್ರ ಸರ್ಕಾರ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

web-health

ಎಚ್ಚರ…ಬಿಸಿಲ ಬೇಗೆಗೆ ನಿರ್ಜಲೀಕರಣ ಸಮಸ್ಯೆ ಹೆಚ್ಚಳ; ಅಗತ್ಯವಾಗಿ ಈ ಆಹಾರ ಸೇವಿಸಿ

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

1-sdsa-dsd

ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

crypto ಕರೆನ್ಸಿ ಅಕ್ರಮ ವಹಿವಾಟು; 20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ; ಕೇಂದ್ರ ಸರ್ಕಾರ

crypto ಕರೆನ್ಸಿ ಅಕ್ರಮ ವಹಿವಾಟು; 20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿ; ಕೇಂದ್ರ ಸರ್ಕಾರ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್