ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ: ನಿತ್ಯ ಸಂಜೀವಿನಿ ಈ ಎಳನೀರು…


Team Udayavani, Jan 31, 2023, 5:40 PM IST

web—tender-coconut

ಎಳನೀರಿನಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಹಾಗೂ ಖನಿಜಾಂಶಗಳಿದ್ದು, ಇದು ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಳನೀರಿನ ತೆಂಗಿನ ಮರವನ್ನು ಕಲ್ಪವೃಕ್ಷ ಎಂದೂ ಕರೆಯುತ್ತಾರೆ.

ಬೇಸಿಗೆ ಕಾಲ, ಚಳಿಗಾಲ, ಮಳೆಗಾಲ ಹೀಗೆ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದು ಎಂದರೆ ತಪ್ಪಲ್ಲ. ಬೇಸಿಗೆಯಲ್ಲಿ ಬಾಯಾರಿಕೆ ತಣಿಸಿದರೆ, ಚಳಿಗಾಲದಲ್ಲಿ ದೇಹವನ್ನು ಶುಷ್ಕವಾಗದಂತೆ ಕಾಪಾಡುತ್ತದೆ.

ಎಳನೀರು ಸೇವಿಸುವುದರಿಂದ ತಕ್ಷಣವೇ ದೇಹದಲ್ಲಿ ಶಕ್ತಿಸಂಚಯವಾಗುವುದರಿಂದ ಕ್ರೀಡಾ ಕ್ಷೇತ್ರದವರಿಗೆ ಅತೀ ಉತ್ತಮವಾಗಿ ಉಪಯೋಗವಾಗುವ ಪಾನೀಯ. ನಿಯಮಿತವಾಗಿ ವ್ಯಾಯಾಮ ಮಾಡುವವರು ಎಲೆಕ್ಟ್ರೋಲೈಟ್ಸ್​ ಗೆ ಪರ್ಯಾಯವಾಗಿ ಈ ಪಾನಿಯವನ್ನು ಸೇವಿಸಬಹುದು. ಇದರಲ್ಲಿ ಹೇರಳವಾಗಿ ಜೀವಸತ್ವಗಳು ಖನಿಜಗಳು ಲಭ್ಯವಾಗುತ್ತದೆ.

ಎಳನೀರಿನ ಉಪಯೋಗ ಕೇವಲ ಕುಡಿಯುವುದಕ್ಕಾಗಿ ಮಾತ್ರವಲ್ಲದೇ, ಚರ್ಮ ಮತ್ತು ಕೂದಲ ಆರೈಕೆಗೂ ಬಳಸಬಹುದು. ಎಳನೀರಿನ ಉಪಯೋಗಗಳ ಬಗ್ಗೆ ಮೊದಲು ತಿಳಿದುಕೊಳ್ಳೋಣ.

ತೂಕ ಇಳಿಸಿಕೊಳ್ಳಲು ಸಹಕಾರಿ:

ಎಳನೀರಿನಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು, ಕೊಬ್ಬಿನಾಂಶ ಕಡಿಮೆ ಇರುತ್ತದೆ. ಫೈಬರ್ ದೇಹದ ಜೀರ್ಣ ಕ್ರಿಯೆ ನಿಧಾನಗೊಳಿಸಿ, ಹಸಿವನ್ನು ನಿಗ್ರಹಿಸುತ್ತದೆ. ಆದ್ದರಿಂದ ತಾಜಾ ಎಳನೀರು ತೂಕ ನಷ್ಟ ಅಥವಾ ತೂಕ ನಿರ್ವಹಣೆ ಮಾಡಲು ಸಹಕಾರಿಯಾಗಿದೆ. ಒಂದು ಕಪ್ ಎಳನೀರು ಕೇವಲ 48 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

ದೇಹದ ಶಕ್ತಿ ಹೆಚ್ಚಿಸುತ್ತದೆ:

ಎಳನೀರಿನಲ್ಲಿ ವಿವಿಧ ಪೌಷ್ಠಿಕ ಆಹಾರಗಳಿದ್ದು, ಇದು ದಿನಪೂರ್ತಿ ಅಗತ್ಯವಾದ ಶಕ್ತಿ ನೀಡುತ್ತದೆ. ಇದರಲ್ಲಿ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಮತ್ತು ಸೋಡಿಯಂ ಇದ್ದು ಹೆಚ್ಚಿನ ಪ್ರಮಾಣದಲ್ಲಿ ಪೊಟ್ಯಾಶಿಯಂ, ಕ್ಯಾಲ್ಸಿಯಂ ಮತ್ತು ಕ್ಲೋರೈಡ್ ಇವೆ ಎನ್ನಲಾಗುತ್ತದೆ. ಈ ಪ್ರಮಾಣದಲ್ಲಿರುವಾಗ ದೇಹಕ್ಕೆ ಶಕ್ತಿ ಒಮ್ಮೆಲೇ ಬಿಡುಗಡೆಯಾಗದೇ ನಿಧಾನಕ್ಕೆ ಶಕ್ತಿ ಉಡುಗಿದಂತೆ ಪೂರೈಸುತ್ತಾ ಹೋಗುತ್ತದೆ. ಈ ಕಾರಣದಿಂದ ದೈಹಿಕ ಕೆಲಸವನ್ನು ದಿನಪೂರ್ತಿ ಹೆಚ್ಚಿನ ಆಯಾಸವಿಲ್ಲದೇ ನಿರ್ವಹಿಸಲು ಸಾಧ್ಯವಾಗುತ್ತದೆ.

ಕಿಡ್ನಿಸ್ಟೋನ್ಸ್ ನಿಯಂತ್ರಣಕ್ಕೆ ಸಹಕಾರಿ:

ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯಲ್ಲಿರುವ ಕಲ್ಲು ಹೊರ ಬರುತ್ತದೆ ಎಂದು ಹೇಳಲಾಗುತ್ತದೆ. ಕಿಡ್ನಿಸ್ಟೋನ್ಸ್ ಸಮಸ್ಯೆಯಿಂದ ಬಳಲುವವರು ನೀರು ಹೆಚ್ಚಾಗಿ ಕುಡಿಯುವುದರಿಂದ ಕಿಡ್ನಿಯಲ್ಲಿರುವ ಕಲ್ಲುಗಳು ನಿಯಂತ್ರಣವಾಗುತ್ತದೆ. ಮೂತ್ರಪಿಂಡಗಳಲ್ಲಿ ಸಂಗ್ರಹಗೊಳ್ಳುವ ಲವಣಾಂಶಗಳನ್ನು ಮೂತ್ರದ ಮೂಲಕ ಹೊರ ಹಾಕಲು ಎಳನೀರು ಸಹಾಯ ಮಾಡುತ್ತದೆ. ಎಳನೀರನ್ನು ಮಧ್ಯಮ ಪ್ರಮಾಣದಲ್ಲಿ ಕುಡಿದರೆ ಮೂತ್ರಪಿಂಡದ ಕಲ್ಲುಗಳ ರಚನೆ ತಡೆಯಲು ಸಹಕಾರಿ.

ಮಧುಮೇಹ ನಿಯಂತ್ರಣ:

ಎಳನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಮತ್ತು ಮಧುಮೇಹ ರೋಗಲಕ್ಷಣಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ:

ಎಳನೀರಿನಲ್ಲಿ ಪೊಟ್ಯಾಸಿಯಮ್ ಹೆಚ್ಚಾಗಿರುವುದರಿಂದ ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚರ್ಮದ ಆರೈಕೆಗೂ ಉತ್ತಮ:

ಮುಖದಲ್ಲಿರುವ ಮೊಡವೆಗಳನ್ನು ನಿವಾರಿಸಲು ಸಹಕರಿಯಾಗಿದೆ. ತೆಂಗಿನ ಕಾಯಿ ನೀರನ್ನು ಮೊಡವೆ, ಕಲೆಗಳು, ಸುಕ್ಕುಗಳು ಇರುವ ಜಾಗಗಳಿಗೆ ನಿರಂತರವಾಗಿ ಎರಡರಿಂದ ಮೂರು ವಾರಗಳ ಕಾಲ ರಾತ್ರಿ ಹಚ್ಚಿ ಮಲಗಿದರೆ ತ್ವಚೆ ಸ್ವಚ್ಛವಾಗುತ್ತದೆ ಹಾಗೂ ಕಾಂತಿಯುತವಾಗುತ್ತದೆ. ಎಳನೀರು ಹೆಚ್ಚಾಗಿ ಕುಡಿಯುತ್ತಿರುವುದರಿಂದ ಚರ್ಮದಲ್ಲಿರುವ ಹೆಚ್ಚಿನ ಎಣ್ಣೆ ಅಂಶ ಕಡಿಮೆಯಾಗುತ್ತದೆ.

ಕೂದಲ ಸಮಸ್ಯೆ:

ಎಳನೀರಿನಲ್ಲಿರುವ ವಿವಿಧ ವಿಟಮಿನ್ ಮತ್ತು ವಿಶೇಷವಾಗಿ ವಿಟಮಿನ್ ಕೆ ಮತ್ತು ಕಬ್ಬಿಣದ ಅಂಶ ಕೂದಲಿಗೆ ಸಹಕಾರಿಯಾಗಿದೆ. ಕೂದಲನ್ನು ಕೊಂಚ ಎಳನೀರಿನಿಂದ ಮಸಾಜ್ ಮಾಡುವುದರಿಂದ ತಲೆಯ ಚರ್ಮದಲ್ಲಿ ರಕ್ತಸಂಚಾರ ಹೆಚ್ಚುತ್ತದೆ. ಇದರ ಪರಿಣಾಮ ಕೂದಲ ಬುಡ ಹೆಚ್ಚು ಶಕ್ತಿಯುತವಾಗುತ್ತವೆ. ಕೂದಲು ಉದುರುವುದು ಕಡಿಮೆಯಾಗಿ ಕೂದಲ ಹೊಳಪು ಹೆಚ್ಚುತ್ತದೆ. ಕೂದಲು ಮೃದುವಾಗಿಸುವಲ್ಲಿ ಕೂಡಾ ಸಹಾಯ ಮಾಡುತ್ತದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.