ನಿಂಬೆ ಹಣ್ಣಿನಿಂದ ಆರೋಗ್ಯ ವೃದ್ಧಿ
ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್ ನಿವಾರಿಸುವಲ್ಲಿ ಸಹಕರಿಸುತ್ತದೆ
Team Udayavani, Nov 27, 2020, 11:00 AM IST
ನಿಂಬೆ ಹಣ್ಣನ್ನು ನಮ್ಮ ದಿನನಿತ್ಯದ ಅಡುಗೆಯಲ್ಲಿ ಹೆಚ್ಚಾಗಿ ಬಳಸುವುದರಿಂದ ಅದರಲ್ಲಿರುವ ಆರೋಗ್ಯಕರ ಗುಣಗಳು ನಮ್ಮ ಆರೋಗ್ಯವನ್ನು ಕಾಪಾಡುವುದರ ಜತೆಗೆ ಕಾಯಿಲೆ ಮುಕ್ತರನ್ನಾಗಿಸುತ್ತದೆ.
ಚಿಕಿತ್ಸಾ ಗುಣಗಳು:
ನೆಗಡಿ ಮತ್ತು ಫೂ ಶಮನಕಾರಿ: ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ಸೋಂಕು ತಗುಲದಂತೆ ನೋಡಿಕೊಳ್ಳುತ್ತದೆ ಮತ್ತು ನೆಗಡಿಯಿಂದ ನಮ್ಮನ್ನು ರಕ್ಷಿಸುತ್ತದೆ.
ದೊಡ್ಡ ಕರುಳನ್ನು ಸ್ವತ್ಛಗೊಳಿಸುತ್ತದೆ: ನಿಂಬೆ ಸೇವನೆಯಿಂದ ಕರುಳಿನಲ್ಲಿ ತ್ಯಾಜ್ಯದ ಸುಲಭ ಚಲನೆಗೆ ಸಹಕಾರಿ. ನಿಂಬೆ ರಸವನ್ನು ಪ್ರತಿದಿನ ಬೆಳಗ್ಗೆ ನೀರಿನೊಂದಿಗೆ ಸೇರಿಸಿ ಕುಡಿದರೆ ಇನ್ನಷ್ಟು ಉತ್ತಮ.
ಕ್ಯಾನ್ಸರ್ ದೂರಗೊಳಿಸಲು ಸಹಕಾರಿ: ನಿಂಬೆ ಹಣ್ಣು 22 ಕ್ಯಾನ್ಸರ್ ಪ್ರತಿಬಂಧಕ ಸಂಯುಕ್ತಗಳನ್ನು ಹೊಂದಿದೆ.
ಲಿವರ್ ಸಮಸ್ಯೆಗೆ ರಾಮಬಾಣ: ಒಂದು ಲೋಟ ನೀರಿಗೆ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಲಿವರ್ ಆರೋಗ್ಯ ಕಾಪಾಡಬಹುದು.
ಸಮತೋಲನ ಕಾಪಾಡುತ್ತದೆ: ನಿಂಬೆ ಹಣ್ಣು ಆಮ್ಲಿàಯವಾಗಿದ್ದು, ಅದು ದೇಹದ ಪಚನ ಕ್ರಿಯೆಯಲ್ಲಿ ಪಾತ್ರವಹಿಸುತ್ತದೆ. ದೇಹದ ವಿವಿಧ ದ್ರವಗಳ ಮೆಲೆ ಪ್ರತ್ಯಾಮ್ಲಿàಯ ಪರಿಣಾಮವನ್ನು ಉಂಟು ಮಾಡುತ್ತದೆ.
ಅಲರ್ಜಿಯಿಂದ ಮುಕ್ತಿ: ನಿಂಬೆ ಹಣ್ಣು ಅಲರ್ಜಿಯನ್ನು ದೂರಗೊಳಿಸುವ ಶಕ್ತಿಯನ್ನು ಹೊಂದಿದೆ.
ನರಸಂಬಂಧಿ ರೋಗ ಮುಕ್ತಿ: ನಿಂಬೆ ಹಣ್ಣಿನ ಸಿಪ್ಪೆಯಲ್ಲಿ ಅತಿಯಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಿದುಳಿಗೆ ಸಂಬಂಧಿಸಿದ ದೋಷಗಳನ್ನು ಕಡಿಮೆಗೊಳಿಸಿ ಉತ್ತಮ ಆರೋಗ್ಯವನ್ನು ನೀಡುತ್ತದೆ.
ಕಣ್ಣಿನ ವ್ಯಾಧಿಗಳು: ನಿಂಬೆ ಹಣ್ಣಿನಲ್ಲಿರುವ ರುಟಿನ್ ಎಂಬ ಅಂಶವು ಡಯಾಬೆಟಿಕ್ ರೆಟಿನೋಪತಿಯನ್ನು ಒಳಗೊಂಡಿರುವುದರಿಂದ, ಅನೇಕ ಕಣ್ಣಿನ ರೋಗಗಳನ್ನು ನಿವಾರಿಸುತ್ತದೆ.
ಡಯಾಬಿಟಿಸ್ ನಿಯಂತ್ರಣ: ನಿಂಬೆ ಹಣ್ಣಿನಲ್ಲಿರುವ ಹೆಸ್ಪರ್ಟೈನ್ ಎಂಬ ರಾಸಾಯನಿಕವು ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಕಡಿಮೆ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಿಸುವಲ್ಲಿ ಸಹಕರಿಸುತ್ತದೆ.
ಕಿಡ್ನಿಯಲ್ಲಿನ ಕಲ್ಲುಗಳು: ನಿಂಬೆ ಹಣ್ಣಿನಲ್ಲಿರುವ ಸಿಟ್ರಿಕ್ ಆಮ್ಲವು ಕಿಡ್ನಿಯಲ್ಲಿರುವ ಕಲ್ಲುಗಳನ್ನು ಕರಗಿಸಿ ಕಿಡ್ನಿಸ್ಟೋನ್ ನಿವಾರಿಸುವಲ್ಲಿ ಸಹಕರಿಸುತ್ತದೆ.
ತಾರುಣ್ಯವನ್ನು ಕಾಪಾಡುತ್ತದೆ: ನಿಂಬೆ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹದಲ್ಲಿ ರಾಡಿಕಲ್ಸ್ಗಳನ್ನು ತಟಸ್ಥಗೊಳಿಸುತ್ತದೆ. ಇದರಿಂದ ನಮ್ಮ ತಾರುಣ್ಯ ಇನ್ನಷ್ಟು ಹೆಚ್ಚುತ್ತದೆ.
ಸಿಟ್ರಿಕ್ ಆ್ಯಸಿಡ್ ಇರುವುದರಿಂದ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ನಿಂಬೆ ರಸವನ್ನು ದಿನನಿತ್ಯ ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ಮೊಡವೆಯಿಂದ ಮುಕ್ತಿ: ಪ್ರತಿ ದಿನ ನಿಂಬೆ ರಸ ಮುಖಕ್ಕೆ ಹಚ್ಚಿ 5 ನಿಮಿಷದ ಬಳಿಕ ಮುಖ ತೊಳೆಯುವುದರಿಮದ ಮೊಡವೆ ಸಮಸ್ಯೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ
MUST WATCH
ಹೊಸ ಸೇರ್ಪಡೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ