ಸಂಶೋಧನೆ, ಸೌಕರ್ಯಗಳ “ಆರೋಗ್ಯ’ವೇ ಆದ್ಯತೆ

ಈ ಬಾರಿ 2,350 ಕೋಟಿ ರೂ. ಹೆಚ್ಚು ಹಣ, ಬೆಂಗಳೂರಿನ ನಿಮ್ಹಾನ್ಸ್‌ಗೆ 133 ಕೋ.ರೂ.

Team Udayavani, Feb 2, 2023, 7:50 AM IST

ಸಂಶೋಧನೆ, ಸೌಕರ್ಯಗಳ “ಆರೋಗ್ಯ’ವೇ ಆದ್ಯತೆ

ಆಸ್ಪತ್ರೆಗಳ ಮೂಲಸೌಕರ್ಯ, ಹಳೆಯ ಯೋಜನೆಗಳ ಮುಂದುವರಿ ಕೆಯ ಜೊತೆಗೆ ಔಷಧ ರಂಗ, ವೈದ್ಯಕೀಯ ಸಂಶೋಧನೆ, ವೈದ್ಯಕೀಯ ಉಪಕರಣಗಳ ಅಭಿವೃದ್ಧಿ ಹಾಗೂ ಸಿಕಲ್‌ ಸೆಲ್‌ ಅನೀಮಿಯ (ದುಂಡಾಗಿರಬೇಕಾದ ರಕ್ತಕಣಗಳು ಕಡೆಗೋಲಿನ ಆಕಾರದಲ್ಲಿ ಇರುವ ಕಾಯಿಲೆ) ನಿರ್ಮೂಲನೆಯ ಸಂಕಲ್ಪ ಅಮೃತಕಾಲದ ಚೊಚ್ಚಲ ಬಜೆಟ್‌ನಲ್ಲಿ ಅಡಕವಾಗಿದೆ. ಆರೋಗ್ಯ ಕ್ಷೇತ್ರದ ಆದ್ಯ ಅಂಶಗಳಾದ ಮೂಲಸೌಕರ್ಯ, ಸಂಶೋಧನೆ ಮತ್ತು ರೋಗ ನಿರ್ವಹಣೆ ಈ ಮೂರು ಆಯಾಮಗಳಿಗೆ ಬಜೆಟ್‌ನಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಮುಂದಿನ ದಶಕಗಳ ಆರೋಗ್ಯ ರಂಗದ ದಿಕ್ಕುದೆಸೆಗೆ ಮುನ್ನುಡಿ ಬರೆಯಲಾಗಿದೆ.

2023-24ರ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ 88,956 ಕೋಟಿ ರೂಪಾಯಿಗಳನ್ನು ತೆಗೆದಿರಿಸಲಾಗಿದೆ. 2022-23ರ (86,606 ಕೋಟಿ ರೂ.) ಸಾಲಿಗೆ ಹೋಲಿಸಿದರೆ ಮುಂದಿನ ಆರ್ಥಿಕ ವರ್ಷದಲ್ಲಿ 2,350 ಕೋಟಿ ರೂಪಾಯಿ ಹೆಚ್ಚು ಆರೋಗ್ಯ ಕ್ಷೇತ್ರಕ್ಕೆ ವಿನಿಯೋಗವಾಗಲಿದೆ. ಅಂದರೆ ಶೇ. 2.71ರಷ್ಟು ಹೆಚ್ಚು ಹಣ ಬಳಕೆಯಾಗಲಿದೆ. ಆದರೆ 2022-23ರ ಸಾಲಿನ ಬಜೆಟ್‌ ಅಂದಾಜಿನಲ್ಲಿ 86,606 ಕೋಟಿ ರೂ. ಆರೋಗ್ಯ ಕ್ಷೇತ್ರಕ್ಕೆ ನಿಗದಿ ಆಗಿದ್ದರೂ ಆ ಬಳಿಕದ ಪರಿಷ್ಕೃತ ಅಂದಾಜಿನಲ್ಲಿ 77,351 ಕೋಟಿ ರೂಪಾಯಿಗಳನ್ನು ಮಾತ್ರ ನೀಡಲಾಗಿತ್ತು. ಈ ಬಾರಿ ಆ ರೀತಿ ಆಗದೇ ಬಜೆಟ್‌ ಅಂದಾಜಿನ ಹಣ ಪೂರ್ಣಪ್ರಮಾಣದಲ್ಲಿ ವಿನಿಯೋಗ ಆಗಲಿ ಎಂಬ ಆಶಯವನ್ನು ಆರೋಗ್ಯ ತಜ್ಞರು ವ್ಯಕ್ತಪಡಿಸುತ್ತಾರೆ.

ನಿಮ್ಹಾನ್ಸ್‌ಗೆ 133 ಕೋ.ರೂ.: ಬೆಂಗಳೂರಿನಲ್ಲಿರುವ ನಿಮ್ಹಾನ್ಸ್‌ನ ಮೂಲಕ ನಡೆಯುವ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ 133.73 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಕಳೆದ ವರ್ಷದ ಬಜೆಟ್‌ನಲ್ಲಿ 121 ಕೋಟಿ ರೂ. ನೀಡಲಾಗಿತ್ತು. ಈ ಬಾರಿ ಅನುದಾನದಲ್ಲಿ ಶೇ.10ರ ಹೆಚ್ಚಳವಾಗಿದೆ. ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ಟೆಲಿ ಮೆಡಿಸಿನ್‌ ಮತ್ತು ಆಪ್ತ ಸಮಾಲೋಚನೆಯ ಮಹತ್ವವನ್ನು ಮನಗಂಡಿರುವ ಸರಕಾರ ಭವಿಷ್ಯದಲ್ಲಿಯೂ ಟೆಲಿ ಮೆಡಿಸಿನ್‌ಗೆ ಪ್ರೋತ್ಸಾಹ ನೀಡುವ ಇಂಗಿತ ಹೊಂದಿರುವುದು ಸ್ಪಷ್ಟ.

ಆಯುಷ್ಮಾನ್‌ ಭಾರತ್‌ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ 7,200 ಕೋಟಿ ರೂಪಾಯಿ ಪ್ರಕಟಿಸಲಾಗಿದ್ದು ಕಳೆದ ಬಜೆಟ್‌ಗಿಂತ 743 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಪ್ರಧಾನ ಮಂತ್ರಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಮೂಲಸೌಕರ್ಯ ಯೋಜನೆಗೆ 4,200 ಕೋಟಿ ರೂಪಾಯಿ ನೀಡಲಾಗಿದ್ದು ಕಳೆದ ಸಾಲಿಗೆ ಹೋಲಿಸಿದರೆ 23 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಆದರೆ ರಾಷ್ಟ್ರೀಯ ಆರೋಗ್ಯ ಯೋಜನೆಗೆ ಅನುದಾನದಲ್ಲಿ ತುಸು ಇಳಿಕೆ ದಾಖಲಾಗಿದೆ. ಈ ಬಜೆಟ್‌ನಲ್ಲಿ 36,785 ಕೋ.ರೂ. ಪ್ರಕಟಿಸಲಾಗಿದ್ದು ಕಳೆದ ಬಜೆಟ್‌ಗಿಂತ 375 ಕೋ.ರೂ. ಕಡಿತವಾಗಿದೆ.

“ಸಿಕಲ್‌ ಸೆಲ್‌’ ಅನೀಮಿಯ ನಿರ್ಮೂಲನೆಗೆ ಸಂಕಲ್ಪ
ಸಿಕಲ್‌ ಸೆಲ್‌ ಅನೀಮಿಯವನ್ನು 2047ರ ಹೊತ್ತಿಗೆ ನಿರ್ಮೂಲನೆ ಮಾಡುವ ಸಂಕಲ್ಪವನ್ನು ಸರಕಾರ ಕೈಗೊಂಡಿದೆ. ವಂಶಪಾರಂಪರ್ಯವಾಗಿ ಹಿಮೋಗ್ಲೊಬಿನ್‌ನ ಅಸಹಜತೆ ಯಿಂದ ಬರುವ ಈ ಕಾಯಿಲೆ ಬುಡಕಟ್ಟು ಜನಾಂಗದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ದೇಶದಲ್ಲಿ ಒಟ್ಟು 17 ಕೋಟಿ ಜನರು ಸಿಕಲ್‌ ಸೆಲ್‌ ಅನೀಮಿಯದಿಂದ ನರಳುತ್ತಿದ್ದಾರೆ. ಸಿಕಲ್‌ ಸೆಲ್‌ ಬಾಧಿತ ಪ್ರದೇಶಗಳ 40 ವರ್ಷದೊಳಗಿನ ಬುಡಕಟ್ಟು ಜನರ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಯೋಜನೆ ಹಮ್ಮಿಕೊಳ್ಳುವುದು ಈ ಯೋಜನೆಯ ಉದ್ದೇಶ. ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ರಾಜ್ಯದಲ್ಲಿ ಸುಮಾರು 3 ಲಕ್ಷ ಸಿಕಲ್‌ ಸೆಲ್‌ ಅನಿಮಿಯಾ ಪೀಡಿತರಿದ್ದಾರೆ. ಗುಡ್ಡಗಾಡು ಪ್ರದೇಶ ಹೊಂದಿರುವ ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಕಲ್‌ ಸೆಲ್‌ ಅನೀಮಿಯ ಪೀಡಿತರು ಹೆಚ್ಚು ಸಂಖ್ಯೆಯಲ್ಲಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.