ಆರೋಗ್ಯ ಸಚಿವರು ಮಾತು ಮರೆತಂತಿದೆ: ಶಾಸಕ ಮಂಜುನಾಥ್ ಬೇಸರ

ಉಸ್ತುವಾರಿಯೂ ನಾಪತ್ತೆ, ಅನುದಾನವೂ ಅಷ್ಟಕಷ್ಟೆ

Team Udayavani, Feb 2, 2023, 10:28 PM IST

1-sadsad

ಹುಣಸೂರು: ಈ ಬಿಜೆಪಿ ಸರಕಾರವು ಕಾಂಗ್ರೆಸ್ ಶಾಸಕನೆಂಬ ಕಾರಣಕ್ಕೆ ಅನುದಾನ ಬಿಡುಗಡೆಗೂ ಅಲಕ್ಷ್ಯ, ಯಾವುದೇ ಜಲ್ವಂತ ಸಮಸ್ಯೆಗಳ ಮನವಿಗೂ ಸ್ಪಂದಿಸದೆ ಮಲತಾಯಿ ದೋರಣೆ ಅನುಸರಿಸುತ್ತಿದೆ ಎಂದು ಶಾಸಕ ಎಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದರು.

ನಗರಸಭೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಅವರು ಅಲೆಮಾರಿ ಸಮುದಾಯಗಳಿಗೆ 3.75 ಲಕ್ಷರೂ ವೆಚ್ಚದ ಮನೆ ನಿರ್ಮಿಸಿ ಕೊಡುವುದಾಗಿ ಘೋಷಿಸಿ ಹಕ್ಕುಪತ್ರ ವಿತರಿಸಿರುವ ಮುಖ್ಯಮಂತ್ರಿಗಳು, ಇದೀಗ ಕೇವಲ 1.75 ಲಕ್ಷಗಳಿಗೆ ನಿಗದಿಪಡಿಸಿರುವುದು ಸರಕಾರ ಅಲೆಮಾರಿಗಳಿಗೆ ಮಾಡಿರುವ ದ್ರೋಹ, ಇನ್ನು ಸಿದ್ದರಾಮಯ್ಯರ ಅವಧಿಯಲ್ಲಿ ಮಂಜೂರಾಗಿದ್ದ 918 ಜಿ.ಪ್ಲಸ್ 2 ಮನೆಗಳನ್ನು ಹಾಗೂ ಶಾಸಕರ ಮೂಲಕ ಮಂಜೂರು ಮಾಡಿದ್ದ 820 ಮನೆಗಳನ್ನು ಹಿಂಪಡೆದಿರುವುದು ರಾಜಕೀಯ ದುರುದ್ದೇಶದಿಂದ ಎಂದು ಆರೋಪಿಸಿದರು.

ಸಚಿವರು ಕೊಟ್ಟ ಮಾತು ಮರೆತರೇ?
ಸಿದ್ದರಾಮಯ್ಯರ ಅವಧಿಯಲ್ಲಿ ಮಂಜೂರಾದ ಹೈಟೆಕ್ ಆಸ್ಪತ್ರೆ ಪೂರ್ಣಗೊಳಿಸಲು ಉಳಿಕೆ ಅನುದಾನ ಬಿಡುಗಡೆ ಮಾಡುವಂತೆ ಮೂರು ಬಾರಿ ಸದನದಲ್ಲಿ ಚರ್ಚಿಸಿದ್ದರೂ ಆರೋಗ್ಯ ಸಚಿವ ಡಾ.ಸುಧಾಕರ್‌ರವರೇ ಖುದ್ದಾಗಿ ಭೇಟಿಯಿತ್ತು. ಅಗತ್ಯ ಅನುದಾನ ಬಿಡುಗಡೆ ಮಾಡುವ, ಡಿಸೆಂಬರ್-೨೦೨೨ ಅಂತ್ಯದಲ್ಲಿ ಸೇವೆಗೆ ಸಮರ್ಪಿಸುವ ಭರವಸೆಯಿತ್ತು ಯಾವುದೇ ಕ್ರಮವಹಿಸಿಲ್ಲ. ಸಚಿವರು ತಮ್ಮ ಮಾತನ್ನೇ ಮರೆತಂತಿದೆ ಎಂದು ಟೀಕಿಸಿದರು.

ಅರಸು ಭವನಕ್ಕೆ ಗ್ರಹಣ
ಅರಸುಭವನ ಕಾಮಗಾರಿ ಪೂರ್ಣಗೊಳಿಸಲು ಇರುವ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡದೆ ದೇವರಾಜಅರಸರಿಗೆ ಅವಮಾನ ಮಾಡುತ್ತಿದೆ. ಇನ್ನು ನೀರಾವರಿ ಇಲಾಖೆ ಸೇರಿದಂತೆ ಬಹುತೇಕ ಇಲಾಖೆಗಳಿಗೆ ನಿಗಧಿತ ಅನುದಾನ ಬಿಡುಗಡೆ ಮಾಡಿಲ್ಲಾ. ಇನ್ನು ಅನುದಾನ ಬಿಡುಗಡೆಯಲ್ಲೂ ತಾರತಮ್ಯವೆಸಗಿದ್ದು. ರಾಜ್ಯದ ಎಲ್ಲಾ ಬಿ.ಜೆ.ಪಿ. ಕ್ಷೇತ್ರಗಳಿಗೆ ತಲಾ 70 ಕೋಟಿ, ಜೆಡಿಎಸ್ ಕ್ಷೇತ್ರಗಳಿಗೆ 40ಕೋಟಿ, ಹುಣಸೂರು ಕ್ಷೇತ್ರಕ್ಕೆ ಮಾತ್ರ ಹತ್ತು ಕೋಟಿ ಅನುದಾನ ನೀಡುವ ಮೂಲಕ ಅನ್ಯಾಯವೆಸಗಿದೆ.

ದಿನಾಂಕ ನಿಗದಿ ಪಡಿಸಿದ್ದ ಸಚಿವರೂ ನಾಪತ್ತೆ!
ನಗರದ ಸ್ಲಂಬೋರ್ಡ್ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಸಚಿವರು ದಿನಾಂಕ ನಿಗದಿಪಡಿಸಿ ಕ್ಷೇತ್ರಕ್ಕೆ ಬಾರದೆ ಪಕ್ಕದ ಕ್ಷೇತ್ರಕ್ಕೆ ಆದ್ಯತೆ ನೀಡಿ ಸ್ಲಂನಿವಾಸಿಗಳಿಗೆ ಘೋರ ಅನ್ಯಾಯ ಮಾಡಿದ್ದಾರೆ. ಇಂತಹ ತಾರತಮ್ಯ ನೀತಿಯ ಸರಕಾರದಿಂದಾಗಿ ತಾಲೂಕಿನ ಜನತೆಗೆ ದೊಡ್ಡಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ತಾಲೂಕಿಗೆ 2640 ಕೋಟಿ ಅನುದಾನ ಬಿಡುಗಡೆಯಾಗಿತ್ತು, ಆವೇಳೆ ನೀರಾವರಿ, ಶಿಕ್ಷಣ ಹಾಗೂ ರಸ್ತೆ ಅಭಿವೃದ್ದಿ ಸೇರಿದಂತೆ ತಾಲೂಕಿನ ಸಮಗ್ರ ಅಭಿವೃದ್ದಿ ಪರ್ವವೇ ನಡೆದಿತ್ತೆಂದು ಸ್ಮರಿಸಿದರು.

ರಾಗಿ ಖರೀದಿಗೆ ಸರ್ವರ್ ಪ್ರಾಬ್ಲಂ?
ಸರಕಾರ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ವಾರವೂ ಕಳೆದಿಲ್ಲ. ಇನ್ನೂ ಖರೀದಿ ಕೇಂದ್ರ ಆರಂಭವಾಗಿಲ್ಲ. ಸರ್ವರ್ ಪ್ರಾಬ್ಲಂ ಸಮಸ್ಯೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಕನಿಷ್ಟ ಸರಿಪಡಿಸುವಲ್ಲಿ ವಿಫಲವಾಗಿದ್ದು, ಇದರಿಂದಾಗಿ ಮಧ್ಯವರ್ತಿಗಳಿಗೆ ಅನುಕೂಲವಾಗಿದೆ. ತಾಲೂಕಿನಾದ್ಯಂತ ಬಸ್‌ಗಳ ಸಮಸ್ಯೆ ಸಾಕಷ್ಟಿದ್ದು, ಸರಿಪಡಿಸಲು ಸೂಚಿಸಿದ್ದರೂ ಕ್ರಮಕೈಗೊಳ್ಳದ ಕುರಿತು ಡಿಪೋಮ್ಯಾನೇಜರ್ ವಿರುದ್ಧ ಅಸಮದಾನ ವ್ಯಕ್ತಪಡಿಸಿದರು.

ಅಕ್ರಮ ಮದ್ಯನಿಲ್ಲಿಸಿ
ತಾಲೂಕಿನ ಎಲ್ಲೆಡೆ ಅಕ್ರಮ ಮದ್ಯ ಮಾರಾಟದ ದೂರುಗಳಿದ್ದು, ಕ್ರಮವಹಿಸುವಂತೆ ಅಬಕಾರಿ ಇನ್ಸ್ಪೆಕ್ಟರ್ ನಾಗಲಿಂಗಸ್ವಾಮಿಗೆ ಶಾಸಕರು ತಾಕೀತು ಮಾಡಿದರು.

ಬಹುತೇಕ ಇಲಾಖೆಗಳಿಗೆ ಅನುದಾನ ಬಾರದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸದೆ ಕೇವಲ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ತಾ.ಪಂ. ಆಡಳಿತಾಧಿಕಾರಿ ನಂದ, ಇಒ.ಮನು ಬಿ.ಕೆ, ತಹಶೀಲ್ದಾರ್ ಡಾ.ಅಶೋಕ್, ನಗರಸಭೆ ಆಯುಕ್ತೆ ಮಾನಸ, ಕೆ.ಡಿ.ಪಿ. ಸದಸ್ಯರಾದ ಬಸವರಾಜೇಗೌಡ, ಕಾಂತರಾಜ್, ಸತೀಶ್, ಮಂಜುಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲವೇ, ಸರ್ವೇಯರ್‌ಗೆ ತರಾಟೆ
ವಿಕಲಚೇತನ ರೈತ ಆಡಿಗನಹಳ್ಳಿಯ ನಿಂಗಯ್ಯರಿಂದ ಕೋರ್ಟ್ ಆದೇಶದಂತೆ ಭೂಮಿ ಸರ್ವೆ ಮಾಡಿಕೊಡಲು 15 ಸಾವಿರ ರೂ ಲಂಚ ಕೇಳಿದ್ದ ಸರ್ವೇಯರ್ ಜಯಕುಮಾರ್‌ರನ್ನು ಸಭೆಗೆ ಕರೆಸಿ, ಛೀಮಾರಿ ಹಾಕಿ ಎರಡು ದಿನದಲ್ಲಿ ದಾಖಲಾತಿ ಮಾಡಿಕೊಡುವಂತೆ ಎಚ್ಚರಿಸಿದರು.

ಕ್ಷೇತ್ರದ ಅಭಿವೃದ್ದಿಗೆ ಸರಕಾರದ ಸ್ಪಂದಿಸುತ್ತಿಲ್ಲವೆಂದು ಶಾಸಕರು ಮಾಡುತ್ತಿದ್ದ ಆರೋಪದ ವಿರುದ್ದ ಕೆಡಿಪಿ ಸದಸ್ಯ ಕಾಂತರಾಜ್ ಪ್ರಶ್ನಿಸಿದರು. ಇದಕ್ಕೆ ಶಾಸಕರು ಸಮಜಾಯಿಸಿ ನೀಡುತ್ತಿದ್ದಂತೆ ಸುಮ್ಮನಾದರು. ಸಭೆಯಲ್ಲಿ ಕಳೆದ ಬಾರಿಯ ಅನುಪಾಲನಾ ವರದಿ ಮಂಡಿಸದಿರುವುದಕ್ಕೆ ಶಾಸಕರು ಅಸಮಾದಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

2-Hunsur

ಹುಣಸೂರು: ಒಂಟಿ ಸಲಗ ದಾಳಿ; ರೈತ ಪ್ರಾಣಾಪಾಯದಿಂದ ಪಾರು

ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್