ಮಳೆಗಾಲದಲ್ಲಿ ಯಾವ ಆಹಾರ ದೇಹಕ್ಕೆ ಉತ್ತಮ ಗೊತ್ತಾ?


Team Udayavani, May 4, 2020, 11:58 AM IST

ಮಳೆಗಾಲದಲ್ಲಿ ಯಾವ ಆಹಾರ ದೇಹಕ್ಕೆ ಉತ್ತಮ ಗೊತ್ತಾ?

ಮಳೆಗಾಲ ಬಂತೆಂದರೆ ಸಾಕು ಏನೋ ಅರಿಯದ ಸಂತಸ, ಮನುಷ್ಯನೂ ಸೇರಿದಂತೆ ಎಲ್ಲಾ ಜೀವಿಗಳ ಆರೋಗ್ಯದ ಮೇಲೆ ವರ್ಷ ಋತು ಪರಿಣಾಮ ಬೀರುತ್ತದೆ. ಕಾಲ ಬದಲಾದಂತೆ ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮವೂ ಕೂಡ ಬದಲಾಗಿಸಿಕೊಳ್ಳಬೇಕಾಗುತ್ತದೆ. ಕಾಲ ಬದಲಾದಂತೆ ನಮ್ಮ ಬಾಯಿ ರುಚಿ ಕೂಡ ಬದಲಾಗುತ್ತದೆ. ಬಾಯಿ ರುಚಿಗೆ ಯಾವ ಆಹಾರ ಒಳ್ಳೆಯದು, ಯಾವ ಆಹಾರ ಕೆಟ್ಟದು ಎಂದು ಗೊತ್ತಿರುವುದಿಲ್ಲ. ಅದು ರುಚಿ ರುಚಿಯಾದ ಆಹಾರವನ್ನು ಮಾತ್ರ ಬಯಸುತ್ತದೆ. ಆದರೆ ನಾಲಗೆಯ ರುಚಿಗಿಂತ ಆರೋಗ್ಯಕರ ಆಹಾರ ಮುಖ್ಯ.

ಮಳೆಗಾಲದಲ್ಲಿ ಯಾವ ಆಹಾರ ಆರೋಗ್ಯಕ್ಕೆ ಒಳ್ಳೆಯದು ಯಾವ ಆಹಾರವನ್ನು ಮಿತವಾಗಿ ಬಳಸಹುದು ಎಂಬುದನ್ನು ತಿಳಿದುಕೊಳ್ಳೋಣ:

ಮಳೆಗಾಲದಲ್ಲಿ ಸೇವಿಸಬಹುದಾದ ಆಹಾರಗಳು:
ಈ ಸಮಯದಲ್ಲಿ ಸೋಂಕು ನಿವಾರಕ ಆಹಾರಗಳನ್ನು ಹೆಚ್ಚಾಗಿ ಸೇವಿಸಿ. ಉದಾ: ಬಿನ್ಸ್, ಹಾಗಾಲಕಾಯಿ, ಅರಶಿಣ, ಮೆಂತೆ, ಜೋಳ, ಬಾರ್ಲಿ, ಗೋಧಿ, ಕಿತ್ತಲೆ ಮತ್ತು ನಿಂಬೆ ರಸ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ.
ಬೇಸಿಗೆಯಲ್ಲಿ ತಿನ್ನಲು ಹಿತವೆನ್ನಿಸುವ ಮೊಸರನ್ನು ಮಳೆಗಾಲದಲ್ಲೂ ಬಳಸಿ, ಮೊಸರು ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ. ಶುಂಠಿ ಜೀರ್ಣಕ್ರಿಯೆಗೆ ಸಹಕಾರಿಯಾಗುವುದರಿಂದ ಆಹಾರ ಪದಾರ್ಥಗಳಲ್ಲಿ ಶುಂಠಿ ಸೇರಿಸಿ ಇದರೊಂಗೆ ಶುಂಠಿ ಟೀ ಮಾಡಿ ಕುಡಿಯುವುದು ಉತ್ತಮ. ಶುಂಠಿ ಜೀರ್ಣಕ್ರಿಯೆ ಜೊತೆಗೆ ದೇಹವನ್ನು ಬೆಚ್ಚಗಿಡುತ್ತದೆ. ಶೀತ, ಕೆಮ್ಮು ಇವುಗಳ ವಿರುದ್ದ ಹೋರಾಡುತ್ತದೆ.

ಇನ್ನು ವಿಶೇಷವಾಗಿ ಮಳೆಗಾಲದ ಆರಂಭದಲ್ಲಿ ಭೂಮಿಯಲ್ಲಿ ಕಾಣ ಸಿಗುವ ಪೌಷ್ಠಿಕಾಂಶಗಳನ್ನು ಹೊಂದಿರುವ ಆಹಾರ ಪದಾರ್ಥವೆಂದರೆ ಅಣಬೆ ಇದರ ಸೇವನೆಯೂ ಆರೋಗ್ಯಕರವಾದುದು.

ಸೊಪ್ಪಿನ ಆಹಾರ ಸೇವನೆ ಎಲ್ಲಾ ಸಮಯದಲ್ಲೂ ಆರೋಗ್ಯಕರವಾಗಿರುತ್ತದೆ ಆದರೆ, ಮಳೆಗಾಲದಲ್ಲಿ ಸೊಪ್ಪನ್ನುಶುಚಿ ಮಾಡುವಾಗ ತುಂಬಾನೆ ಜಾಗರೂಕರಾಗಿರಬೇಕು ಸೊಪ್ಪು ಪದಾರ್ಥಗಳಲ್ಲಿ ಕೀಟಾಣುಗಳು ಅಧಿಕ ಪ್ರಮಾಣದಲ್ಲಿ ಇರುತ್ತದೆ. ಆದ್ದರಿಂದ ತಾಜಾ ಸೊಪ್ಪನ್ನೆ ತಿನ್ನಿ.

ಆರೋಗ್ಯದ ರಕ್ಷಣೆಗೆ ಮುಖ್ಯವಾಗಿ ಬೇಕಾಗಿರುವುದು ಶುದ್ದವಾದ ನೀರು. ಅನೇಕ ಕಾಯಿಲೆಗಳು ನೀರಿನಿಂದ ಬರುತ್ತದೆ ಆದ್ದರಿಂದ ನೀರನ್ನು ಕುದಿಸಿ ಕುಡಿಯಿರಿ.

ಬೀದಿ ಬದಿಯ ಆಹಾರಕ್ಕೆ ಬ್ರೇಕ್: ನಮ್ಮ ನಾಲಗೆಯು ಬೀದಿ ಬದಿಯ ಆಹಾರವನ್ನೇ ಹೆಚ್ಚು ಬಯಸುತ್ತದೆ. ಆದರೆ, ಇದಕ್ಕೆ ಕಡಿವಾಣ ಹಾಕುವುದು ಎತ್ತಮ ಏಕೆಂದರೆ ಈ ಸಮಯದಲ್ಲಿ ಬೀದಿ ಬದಿಯ ಆಹಾರವನ್ನು ತಿಂದರೆ ಫುಡ್ ಪಾಯಿಸನ್ನಂತಹ ತೊಂದರೆಗಳು ಕಂಡು ಬರುತ್ತದೆ. ಆದ್ದರಿಂದ ಇದಕ್ಕೆ ಬ್ರೇಕ್ ಹಾಕುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.
ನಾನ್ವೇಜ್ ತಿನ್ನುವುದನ್ನು ಕಮ್ಮಿ ಮಾಡಿ. ತಿನ್ನುವುದಾದರೆ ತಾಜಾ ಮೀನು ಮತ್ತು ಮಾಂಸವನ್ನು ಮಿತವಾಗಿ ತಿನ್ನಿ. ಶೀತಲೀಕರಣ ಮಾಡಿದ ಆಹಾರಗಳನ್ನು ದೂರವಿಡಿ.

ಆಹಾರ ಉಳಿದರೆ ಫ್ರಿಜ್ನಲ್ಲಿ ಇಟ್ಟು ಮತ್ತೆ ತಿನ್ನುವಾಗ ಬಿಸಿ ಮಾಡಿ ತಿನ್ನಿ. ಹೂಕೋಸು, ಬಟಾಣಿ, ಬೆಂಡೆಕಾಯಿ, ಮೊಳಕೆ ಬರಿಸಿದ ಕಾಳುಗಳು , ಆಲೂಗಡ್ಡೆ ಇವುಗಳನ್ನು ಮಿತವಾಗಿ ಬಳಸಿ. ಈ ಆಹಾರ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ತರಬಹುದು.
ಮಳೆಗಾಲದಲ್ಲಿ ಆದಷ್ಟೂ ಮನೆಯನ್ನುಶುಚಿಯಾಗಿಡಿ, ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ ಇದರೊಂದಿಗೆ ನಮ್ಮ ಆರೋಗ್ಯದ ರಕ್ಷಣೆಯನ್ನು ನಾವು ಮಾಡಿಕೊಳ್ಳೋಣ.

– ಮಹೇಶ್

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.