Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಮೂರು ದಿನ "ಎಲ್ಲೋ ಅಲರ್ಟ್‌'; ಗುಡುಗು ಸಹಿತ ಗಾಳಿ-ಮಳೆ ಸಂಭವ

Team Udayavani, May 25, 2024, 12:33 AM IST

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಮಂಗಳೂರು/ಉಡುಪಿ: ಬಂಗಾಲ ಕೊಲ್ಲಿಯಲ್ಲಿ ಉಂಟಾದ ನಿಮ್ನ ಒತ್ತಡವು ಚಂಡ ಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

ಮೇ 24ರಂದು ನಿಮ್ನ ಒತ್ತಡ ನಿರ್ಮಾಣಗೊಂಡು ತೀವ್ರತೆ ಪಡೆದಿದೆ. ಮೇ 25ರಂದು ಚಂಡ ಮಾರುತವಾಗಿ ಪರಿವರ್ತನೆಯಾಗಲಿದ್ದು, ಮೇ 26ರಂದು ಮತ್ತಷ್ಟು ತೀವ್ರತೆ ಪಡೆಯಲಿದೆ. ಮೇ ಅಂತ್ಯದವರೆಗೆ ಇದರ ಪ್ರಭಾವ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದ.ಕ.: ಕೆಲವೆಡೆ ಭಾರೀ ಮಳೆ
ದ.ಕ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ಸಹಿತ, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮೂಲ್ಕಿ, ಸುರತ್ಕಲ್‌ ಪರಿಸರದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ.

ಮುಕ್ಕ: ಮನೆಗಳು ಜಲಾವೃತ
ರಾತ್ರಿ ವೇಳೆ ಭಾರೀ ಮಳೆ ಸುರಿದ ಪರಿಣಾಮ ಮುಕ್ಕದ ಮಿತ್ರಪಟ್ಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ತೋಡು ಮುಚ್ಚಿ ಹೋದ ಕಾರಣ ಇಲ್ಲಿ ದಿಢೀರ್‌ ನೀರು ಏರಿಕೆಯಾಯಿತು.

ಇಳಿಕೆಯಾದ ತಾಪಮಾನ
ಮಂಗಳೂರಿನಲ್ಲಿ ತಾಪಮಾನದಲ್ಲಿ ಅಲ್ಪ ಇಳಿಕೆಯಾಗಿದೆ. ಶುಕ್ರವಾರ 30 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 3.3 ಡಿ.ಸೆ. ಮತ್ತು 24.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿದೆ.

ಚೆಂಬು: ಅತ್ಯಾಡಿಯಲ್ಲಿ ಮರಬಿದ್ದು ರಸ್ತೆ ತಡೆ
ಅರಂತೋಡು: ಚೆಂಬು ಗ್ರಾಮದ ಅತ್ಯಾಡಿಯಲ್ಲಿ ಭಾರೀ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ತಡೆ ಉಂಟಾಯಿತಲ್ಲದೇ ಹಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಯಿತು. ಆಬಳಿಕ ಸ್ಥಳೀಯರು ಸೇರಿ ಮರವನ್ನು ತೆರವು ಗೊಳಿಸಿದರು. ಈ ಸಂದರ್ಭ ರಸ್ತೆಯ ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಮೂರು ದಿನ ಎಲ್ಲೋ ಅಲರ್ಟ್‌

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮೇ 25ರಿಂದ 27ರ ವರೆಗೆ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, “ಎಲ್ಲೋ ಅಲರ್ಟ್‌’ ಘೊಷಿಸಲಾಗಿದೆ. ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಉಡುಪಿ ಜಿಲ್ಲೆಯಲ್ಲಿಯೂ ಉತ್ತಮ ಮಳೆ
ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ವೇಳೆಗೆ ಉತ್ತಮ ಮಳೆ ಸುರಿದಿದೆ. ಹಗಲಿನಲ್ಲಿ ವಿವಿಧೆಡೆ ಸಾಧಾರಣ ಮಳೆಯಾಗಿತ್ತು. ಉಡುಪಿ, ಮಣಿಪಾಲ, ಕಾಪು, ಉಚ್ಚಿಲ, ಪಡುಬಿದ್ರಿ ಪರಿಸರದಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಗುರುವಾರ ತಡರಾತ್ರಿಯಿಂದ ಸುರಿದ ಮಳೆಗೆ ಒಟ್ಟು 9,42,000 ರೂ.ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರ ಮತ್ತು ಕಾರ್ಕಳ ತಾಲೂಕಿನಲ್ಲಿ ಕೂಡ ಸಾಧಾರಣ ಮಳೆಯಾಗಿದೆ. ಬಜೆ ಅಣೆಕಟ್ಟು ಪರಿಸರದಲ್ಲಿ ಸಾಧಾರಣ ಮಳೆಯಾಗಿದ್ದು, ಇನ್ನು ಒಂದೆರಡು ದಿನಗಳಲ್ಲಿ ನೀರು ಹರಿದು ಬರುವ ನಿರೀಕ್ಷೆ ಇದೆ. ನೀರು ತುಂಬಿದ ಕೂಡಲೇ ಉಡುಪಿ ನಗರದ ನೀರಿನ ರೇಶನಿಂಗ್‌ ಸ್ಥಗಿತವಾಗಲಿದೆ.

ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಕುಂದಾಪುರದಲ್ಲಿ 11 ಮನೆಗಳಿಗೆ ಭಾಗಶಃ ಹಾನಿ ಯಾಗಿದ್ದು, 2 ಕೊಟ್ಟಿಗೆಗಳಿಗೆ ಹಾನಿಯಾಗಿವೆ. ಬ್ರಹ್ಮಾವರದಲ್ಲಿ ಎರಡು ಮನೆಗಳು ಹಾನಿಯಾಗಿವೆ.

ಬೈಂದೂರು ತಾ|: ಗಾಳಿ-ಮಳೆ; ಭಾರೀ ಹಾನಿ
ಬೈಂದೂರು: ಬೈಂದೂರು ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಮತ್ತು ರಾತ್ರಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಯಿಂದ ಭಾರೀ ಹಾನಿ ಸಂಭವಿಸಿದೆ. ಬೈಂದೂರು ಮೆಸ್ಕಾಂ ಸ್ಟೇಷನ್‌ ಟ್ರಾನ್ಸ್‌ ಫಾರ್ಮರ್‌ ಮೇಲೆ ಮರಬಿದ್ದು 50 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ಇದರಿಂದಾಗಿ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದ್ದು, ಶುಕ್ರವಾರ ರಾತ್ರಿಯ ವೇಳೆ ದುರಸ್ತಿಯಾಯಿತು.

ತಾಲೂಕಿನಲ್ಲಿ ಹಲವು ಮನೆ, ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದೆ. ಬೈಂದೂರಿನಲ್ಲಿ ಹಲವು ಮನೆಗಳಿಗೆ ಸಿಡಿಲು ಹಾಗೂ ಗಾಳಿಯಿಂದ ಮರಬಿದ್ದು ಹಾನಿಯಾಗಿವೆ. ಗಾಳಿಯ ರಭಸಕ್ಕೆ ಹಲವು ಮನೆಗಳ ಮೇಲ್ಛಾವಣಿ ಹಾರಿ ಹೋಗಿದೆ.

ವಿದ್ಯುತ್‌ ವ್ಯತ್ಯಯ: ವಿವಿಧೆಡೆ ವಿದ್ಯುತ್‌ ಕಂಬಗಳು ಮುರಿದು ಬಿದ್ದುದರಿಂದ ಮತ್ತು ಸಬ್‌ ಸ್ಟೇಶನ್‌ ಮೇಲೆ ಮರ ಬಿದ್ದು, ಶುಕ್ರವಾರ ಹಗಲಿಡೀ ವಿದ್ಯುತ್‌ ಇಲ್ಲದೆ ಜನರು ಪರದಾಡುವಂತಾಯಿತು. ವಿದ್ಯುತ್‌ ಇಲ್ಲದೆ ಕೆಲವೆಡೆ ಇಂಟರ್‌ನೆಟ್‌ ಸೇವೆ ಕೂಡ ಸ್ಥಗಿತಗೊಂಡಿತು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.