ಕಲಬುರಯಲ್ಲಿ ವ್ಯಾಪಕ ಮಳೆ: ಜಲಾಶಯಗಳಿಂದ ನೀರು ಬಿಡುಗಡೆ! ಜನರು ಎಚ್ಚರಿಕೆಯಿಂದಿರಲು ಸೂಚನೆ
Team Udayavani, Oct 14, 2020, 12:26 PM IST
ಕಲಬುರಗಿ: ಜಿಲ್ಲಾದ್ಯಂತ ಮಂಗಳವಾರ ತಡರಾತ್ರಿ ವ್ಯಾಪಕ ಮಳೆ ಸುರಿದ ಪರಿಣಾಮ ಜಿಲ್ಲೆಯ ಬಹುತೇಕ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ನದಿಗೆ ನೀರು ಹರಿಬಿಡಲಾಗುತ್ತಿದೆ.
ಬುಧವಾರ ಬೆಳಿಗ್ಗೆ 8 ಗಂಟೆಗೆ ಗಂಡೋರಿ ನಾಲಾ ಜಲಾಶಯಕ್ಕೆ ಒಳಹರಿವು 35,000 ಕ್ಯುಸೆಕ್ ನೀರು ಇದ್ದು, 30,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಾಲಿಂಗೆ ತಿಳಿಸಿದ್ದಾರೆ.
ಆಳಂದ ತಾಲೂಕಿನ ಅಮರ್ಜಾ ಜಲಾಶಯಕ್ಕೆ ಒಳಹರಿವು 15,000 ಕ್ಯುಸೆಕ್ ನೀರು ಇದ್ದು, 13,000 ಕ್ಯುಸೆಕ್ ನೀರನ್ನು ಬಿಡಲಾಗಿದೆ.
ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ಒಳಹರಿವು 70,000 ಕ್ಯುಸೆಕ್ ನೀರು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಭೀಮಾ ನದಿಗೆ ಬಿಡಲಾಗಿದೆ.
ಇದನ್ನೂ ಓದಿ:ವಿಜಯಪುರದಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ, ತುಂಬಿ ಹರಿಯುತ್ತಿರುವ ನದಿ-ಹಳ್ಳಗಳು !
ಬೆಣ್ಣೆತೋರಾ ಜಲಾಶಯಕ್ಕೆ ಒಳಹರಿವು 80,510 ಕ್ಯುಸೆಕ್ ಇದ್ದು, 59,350 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ. ಲೋವರ್ ಮುಲ್ಲಾಮಾರಿ ಜಲಾಶಯಕ್ಕೆ 38,500 ಕ್ಯುಸೆಕ್ ನೀರು ಒಳಹರಿವಿದ್ದು, 57,000 ಕ್ಯುಸೆಕ್ ನೀರು ಹೊರಬಿಡಲಾಗಿದೆ.
ಚಿಂಚೋಳಿ ತಾಲೂಕಿನ ಚಂದ್ರಮಪಳ್ಳಿ ಜಲಾಶಯದ ಒಳ ಹರಿವು 6,395 ಕ್ಯುಸೆಕ್ ಇದ್ದರೆ, ಹೊರ ಹರಿವು 6,125 ಕ್ಯುಸೆಕ್ ಇದೆ. ಅಪ್ಪರ ಮುಲ್ಲಾಮಾರಿ ಜಲಾಶಯದಲ್ಲಿ 13,020 ಕ್ಯುಸೆಕ್ ನೀರು ಒಳ ಹರಿವಿದ್ದು, ಅಷ್ಟೆ ಪ್ರಮಾಣದ ನೀರು ಹೊರ ಬಿಡಲಾಗಿದೆ.
ಇದನ್ನೂ ಓದಿ:ಅಂಜನಾದ್ರಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾರಿಂದ ನಿರಾತಂಕವಾಗಿ ಪೂಜೆ ಆರಂಭ
ಮುಂದಿನ 3-4 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ನದಿ ಪಾತ್ರದ ಜನರು ನದಿ ಕಡೆಗೆ ಹೋಗಬಾರದು. ತಮ್ಮ ಜಾನುವಾರಗಳನ್ನು ಸಹ ನದಿ ದಂಡೆಗೆ ಬಿಡದಂತೆ ಹಾಗೂ ತುಂಬಾ ಎಚ್ಚರಿಕೆಯಿಂದಿರುವಂತೆ ಜಗನ್ನಾಥ ಹಾಲಿಂಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…