ಕರಾವಳಿಯ ಹಲವೆಡೆ ಸಿಡಿಲು ಸಹಿತ ಗಾಳಿ ಮಳೆ

ಕೆಲವೆಡೆ ಹಾನಿ, ಕೊಡಗಿನಲ್ಲಿ ಬಿದ್ದ ಭಾರೀ ಗಾತ್ರದ ಆಲಿಕಲ್ಲುಗಳು

Team Udayavani, May 5, 2022, 2:48 AM IST

ಕರಾವಳಿಯ ಹಲವೆಡೆ ಸಿಡಿಲು ಸಹಿತ ಗಾಳಿ ಮಳೆ

ಸುಳ್ಯ/ ಪುತ್ತೂರು/ ಮೂಡುಬಿದಿರೆ: ಸುಳ್ಯ, ಕಡಬ, ಪುತ್ತೂರು, ಮೂಡುಬಿದಿರೆ ತಾಲೂಕಿನ ವಿವಿಧೆಡೆ ಬುಧವಾರ ಅಪರಾಹ್ನ ಗುಡುಗು- ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಕೆಲವೆಡೆ ಕೂಡ ಮಳೆಯಾದ ವರದಿಯಾಗಿದೆ.

ಸುಳ್ಯ, ಕಡಬ ಭಾಗದಲ್ಲಿ ಅಪರಾಹ್ನ 3ರ ಬಳಿಕ ಮಳೆ ಆರಂಭವಾಗಿದ್ದು, ಸುಮಾರು ಒಂದು ತಾಸು ಸುರಿದಿದೆ. ಭಾರೀ ಗಾಳಿಯೂ ಇತ್ತು. ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಕೋಟೆ ಮುಂಡುಗಾರು, ಎಣ್ಮೂರು, ಕಲ್ಮಡ್ಕ, ಬೆಳ್ಳಾರೆ, ಕಾವಿನಮೂಲೆ, ಪಂಜ, ಪೆಲತ್ತಡ್ಕ, ಪಂಜಿಕಲ್ಲು ಸಹಿತ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಮಂಗಳವಾರ ರಾತ್ರಿಯೂ ಗುಡುಗು ಸಹಿತ ಮಳೆಯಾಗಿತ್ತು. ಬುಧವಾರ ಮದ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು, ಬಳಿಕ ಮಳೆಯಾಗಿದೆ. ಕೆಲವು ದಿನಗಳಿಂದ ಭಾರೀ ಸೆಕೆ ಇತ್ತು. ಈಗ ಉತ್ತಮ ಮಳೆಯಾಗಿ ಭೂಮಿ ತಂಪಾಗಿದ್ದು, ಕೃಷಿಗೆ ಲಾಭವಾಗಿದೆ.

ಪುತ್ತೂರು: ಧಾರಾಕಾರ ಮಳೆ
ಪುತ್ತೂರು: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಉತ್ತಮ ಮಳೆಯಾಗಿದ್ದು, ಗಾಳಿ, ಸಿಡಿಲಿನ ಅಬ್ಬರ ಬಿರುಸಾಗಿತ್ತು.

ಬುಧವಾರ ಅಪರಾಹ್ನ 3ರಿಂದ ಮಳೆ ಆರಂಭ ವಾಗಿತ್ತು. ಸಂಪ್ಯ ಸಮೀಪ ಶರೀಫ್‌ ಅವರ ಮನೆ ಎದುರಿನ ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದ್ದು, ಸಾಕಷ್ಟು ಹೊತ್ತು ಉರಿಯುತ್ತಲೇ ಇತ್ತು. ಸಿಡಿಲಿನಿಂದ ಮನೆಯ ವಿದ್ಯುತ್‌ ಉಪಕರಣಗಳಿಗೆ ಹಾನಿ ಆಗಿದೆ.

ಉಪ್ಪಿನಂಗಡಿ ಭಾಗದಲ್ಲಿ ರಾ.ಹೆ. ಚತುಷ್ಪಥ ಕಾಮಗಾರಿ ಅರ್ಧದಲ್ಲೆ ನಿಂತಿದ್ದು, ಬುಧವಾರ ಸುರಿದ ಮಳೆಗೆ ಅಂಗಡಿ, ಹೊಟೇಲ್‌ಗ‌ಳಿಗೆ ನೀರು ನುಗ್ಗಿ ನಷ್ಟ ಸಂಭವಿಸಿದೆ.

ಕೊಡಗಿನ ವಿವಿಧೆಡೆ ಮಳೆ ಅನಾಹುತ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಕೆಲವು ದಿನಗಳಿಂದ ಅಕಾಲಿಕ ಗಾಳಿ ಮಳೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಮಂಗಳವಾರ ರಾತ್ರಿ ಕುಶಾಲನಗರ ಬಳಿಯ ಹಾರಂಗಿ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಸುರಿದಿದ್ದು, ಕೆಲವು ಮನೆಗಳು ಜಖಂಗೊಂಡಿವೆ.

ಹಾರಂಗಿ ಆಸುಪಾಸಿನಲ್ಲಿ ರಾತ್ರಿ ಏಕಾಏಕಿ ಭಾರೀ ಗಾಳಿಯೊಂದಿಗೆ ಮಳೆ ಸುರಿದಿರುವುದಲ್ಲದೆ, ಸುಮಾರು 6 ಕೆ.ಜಿ.ಯಷ್ಟು ತೂಕದ ಬೃಹದ್ಗಾತ್ರದ ಆಲಿಕಲ್ಲುಗಳು ಬಿದ್ದಿವೆ. ಬಡ ಕುಟುಂಬಗಳ ಹಲವು ಮನೆಗಳು ಜಖಂಗೊಂಡಿವೆ. ಕೂಡು ಮಂಗಳೂರು ಗ್ರಾ.ಪಂ ಉಪಾಧ್ಯಕ್ಷ ಭಾಸ್ಕರ್‌ ನಾಯ್ಕ ಅವರು ಸ್ಥಳ ಪರಿಶೀಲನೆ ನಡೆಸಿದರು.

ವಿದ್ಯುತ್‌ ವ್ಯತ್ಯಯ
ದಕ್ಷಿಣ ಕೊಡಗಿನ ವಿರಾಜಪೇಟೆ, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ ಭಾಗದಲ್ಲಿ ಗಾಳಿ ಮಳೆಯಾದ ಕಾರಣ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಎರಡು ದಿನಗಳಿಂದ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದು, ಗ್ರಾಮಗಳು ಕಾರ್ಗತ್ತಲಿನಲ್ಲಿವೆ.

ಮಡಿಕೇರಿ ತಾಲ್ಲೂಕಿನ ವಿವಿಧೆಡೆ ಬುಧವಾರ ಸಂಜೆಯೂ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ನಗರದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ಮಳೆ ನೀರು ಹರಿದು ವಾಹನಗಳು ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಪಣಪಿಲದಲ್ಲಿ ರೊಟ್ಟಿ ಕಾರ್ಖಾನೆ ಮೇಲೆ ಉರುಳಿದ ತೆಂಗಿನ ಮರ
ಮೂಡುಬಿದಿರೆ: ಬುಧವಾರ ಮೂಡು ಬಿದಿರೆಯಾದ್ಯಂತ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಳೆ ಸುರಿದಿದೆ. ದರೆಗುಡ್ಡೆ ಪಂ. ವ್ಯಾಪ್ತಿಯ ಪಣಪಿಲದ ಉಮಿಲುಕ್ಕು ಎಂಬಲ್ಲಿ ಗಾಳಿ ಜೋರಾಗಿ ಬೀಸಿದ್ದು, ಸದಾನಂದ ಪೂಜಾರಿ ಅವರ ಮನೆಗೆ ಹೊಂದಿಕೊಂಡಂತಿರುವ ಅವರ ರೊಟ್ಟಿ ಕಾರ್ಖಾನೆಯ ಮೇಲೆ ಬೃಹತ್‌ ತೆಂಗಿನ ಮರ ಬಿದ್ದು ಭಾರೀ ಹಾನಿ ಉಂಟಾಗಿದೆ. ಕಾರ್ಖಾನೆಯಲ್ಲಿ ಮಾಲಕ ಸದಾನಂದ ಪೂಜಾರಿ ಮತ್ತು ಅವರ ಪತ್ನಿ ಕೆಲಸ ಮಾಡುತ್ತಿದ್ದು, ಇವರಿಬ್ಬರಿಗೂ ಗಾಯಗಳಾಗಿವೆ. ಹತ್ತಿರವೇ ಇರುವ ಅವರು ವಾಸ್ತವ್ಯವಿರುವ ಮನೆಗೂ ಹಾನಿಯಾಗಿದೆ.
ಸ್ಥಳಕ್ಕೆ ದರೆಗುಡ್ಡೆ ಗ್ರಾಮ ಪಂ. ಅಧ್ಯಕ್ಷೆ ತುಳಸಿ ಮೂಲ್ಯ, ಗ್ರಾಮಲೆಕ್ಕಿಗರಾದ ಉಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ: ಮುಂಜಾನೆ, ರಾತ್ರಿ ಲಘು ಮಳೆ
ಉಡುಪಿ: ನಗರದಲ್ಲಿ ಬುಧವಾರ ಮುಂಜಾನೆ ತುಂತುರು ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಗಾಳಿ ಸಹಿತ ಸ್ವಲ್ಪ ಕಾಲ ಮಳೆಯಾಗಿದ್ದು, ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಬುಧವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಬುಧವಾರ ರಾತ್ರಿಯ ಹೊತ್ತು ಮಣಿಪಾಲ, ಉಡುಪಿ ಆಸುಪಾಸಿನಲ್ಲಿ ಲಘು ಮಳೆಯಾಗಿದೆ. ಕುಂದಾಪುರ ತಾಲೂಕಿನ ಕೋಟೇಶ್ವರ, ಬೀಜಾಡಿ, ಗೋಪಾಡಿ ಪರಿಸರದಲ್ಲಿಯೂ ಮಳೆಯಾಗಿದೆ.

ಎರಡು ದಿನ ಮಳೆ ಸಾಧ್ಯತೆ
ಮಂಗಳೂರು: ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ ಎ. 5-6ರಂದು ಕರಾವಳಿಯ ವಿವಿಧೆಡೆ ಸಿಡಿಲು, ಗಾಳಿ ಸಹಿತ ಮಳೆಯಾಗಲಿದೆ.

ಮಂಗಳೂರು ನಗರದಲ್ಲಿ ಮಂಗಳವಾರ ತಡ ರಾತ್ರಿ ಉತ್ತಮ ಮಳೆಯಾಗಿದೆ. ಬುಧವಾರ 33.3 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಬಂಟ್ವಾಳ: ಸಿಡಿಲಿನಿಂದ ಹಾನಿ
ಬುಧವಾರ ಸಂಜೆ ಮಳೆ ಸುರಿದ ವೇಳೆ ಬಂಟ್ವಾಳ ಕಸಬಾ ಗ್ರಾಮದ ಆದಂ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್‌ ಪರಿಕರಗಳಿಗೆ ಹಾನಿಯಾಗಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.