ಹುಬ್ಬಳ್ಳಿಯಲ್ಲಿ ಹೆದ್ದಾರಿಗೆ ನುಗ್ಗಿದ ಹಳ್ಳದ ನೀರು! ಕೆಲಕಾಲ ಸಂಚಾರ ಸ್ಥಗಿತ
Team Udayavani, Oct 6, 2020, 11:30 AM IST
ಹುಬ್ಬಳ್ಳಿ: ಕುಂದಗೋಳ ಹಾಗೂ ಶಿಗ್ಗಾವಿ ಸುತ್ತಮುತ್ತ ಸೋಮವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ನಗರದ ಹೊರ ವಲಯದ ಕುಂದಗೋಳ ಕ್ರಾಸ್ ಬಳಿಯ ಹಳ್ಳ ತುಂಬಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ಕ್ಕೆ ನೀರು ನುಗ್ಗಿದ ಪರಿಣಾಮ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು.
ಈ ಪ್ರದೇಶಗಳಲ್ಲಿ ಸುರಿದ ಮಳೆಯಿಂದ ರಭಸವಾಗಿ ಹರಿದು ಬಂದು ಹಳ್ಳದ ನೀರು ಕುಂದಗೋಳ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಬಂದಿದೆ. ಈ ಹೆದ್ದಾರಿಯಲ್ಲಿ ಷಟ್ಪಥ ರಸ್ತೆ ಹಾಗೂ ಹಳ್ಳದ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹಳ್ಳದ ನೀರೆಲ್ಲ ರಾಷ್ಟ್ರೀಯ ಹೆದ್ದಾರಿ ಮಾರ್ಗ ಆವರಿಸಿತ್ತು. ಇದರಿಂದ ಹುಬ್ಬಳ್ಳಿ-ಹಾವೇರಿ ನಡುವಿನ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಹೆದ್ದಾರಿಯ ಎರಡು ಬದಿಯಲ್ಲಿ ಸುಮಾರು 3-4 ಕಿಮೀ ದೂರದಷ್ಟು ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಸವಾರರು ಹಾಗೂ ಪ್ರಯಾಣಿಕರು ಸಮಸ್ಯೆ ಅನುಭವಿಸಬೇಕಾಯಿತು.
ಇದನ್ನೂ ಓದಿ :ನನ್ನ ಸ್ಟಾಫ್ ಗೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆಶಿ ಗಂಭೀರ ಆರೋಪ
ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಗಳ ಚಾಲಕರು ಸಹಿತ ವಾಹನಗಳು ಸಾಲುಗಟ್ಟಿ ನಿಂತಿದ್ದಕ್ಕೆ ಮುಂದೆ ಸಾಗಲಾಗದೆ ಪರಿತಪಿಸಬೇಕಾಯಿತು. ಹಳ್ಳದ ನೀರಿನ ಹರಿವು ಕ್ರಮೇಣ ಕಡಿಮೆಯಾಗುತ್ತಿದ್ದಂತೆ ಒಂದೊಂದಾಗಿ ವಾಹನಗಳು ಮುಂದೆ ಸಾಗಿದವು. ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ತೆರಳಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ