ಮಳೆಗೆ ನೆಲ ಕಚ್ಚಿದ ಭತ್ತದ ಫಸಲು! ನಷ್ಟದಲ್ಲಿವೆ ಸಾವಿರಾರು ರೈತ ಕುಟುಂಬಗಳು
Team Udayavani, Oct 28, 2020, 10:35 AM IST
ಮುಂಡಗೋಡ: ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಭತ್ತದ ಬೆಳೆಗೆ ಹಾನಿಯಾಗಿ ರೈತರು ಅಪಾರ ಹಾನಿ ಸಂಭವಿಸಿದ್ದಾರೆ. ಸರಕಾರ ಪರಿಹಾರ ಘೋಷಣೆ ಮಾಡುವಂತೆ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.
ತಾಲೂಕಾದ್ಯಂತ ರೈತರು ಭತ್ತ, ಮೆಕ್ಕೆಜೋಳ, ಹತ್ತಿ, ಕಬ್ಬು ಬೆಳೆಯಲಾಗಿದೆ. ರೈತರು ಉಳುಮೆ, ಬೀಜ ಬಿತ್ತನೆ, ಗೊಬ್ಬರ, ಔಷ ಧ, ಕಳೆ ತೆಗೆಯುವ ಮುಂತಾದ ಬೇಸಾಯ ಚಟುವಟಿಕೆಗೆ ಸಹಕಾರಿ ಸಂಘ, ಸೊಸೈಟಿ ಮತ್ತು ಕೈಸಾಲ ಮಾಡಿಕೊಂಡು ಬೆಳೆ ಬೆಳೆದಿರುವ ರೈತರಿಗೆ ಅಕಾಲಿಕ ಮಳೆ ಮತ್ತು ಪ್ರಕೃತಿ ವಿಕೋಪದಿಂದ ಬಹುತೇಕ ಕಡೆಗಳಲ್ಲಿ ಭತ್ತದ ಬೆಳೆ ನಾಶಕ್ಕೆ ಕಾರಣವಾಗಿದೆ.
ಶೇ.65 ರಷ್ಟು ರೈತರು ತಾಲೂಕಾದ್ಯಂತ ಗಂಭೀರ ಸ್ವರೂಪದ ನಷ್ಟಕ್ಕೆ ಒಳಗಾಗಿದ್ದಾರೆ. ಮಳೆಗಾಲದ ಅತೀವೃಷ್ಟಿಯಿಂದ ಅಲ್ಪಸ್ವಲ್ಪ ಉಳಿಸಿಕೊಂಡ ಬೆಳೆಯನ್ನು ಕೆಲವರು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ, ಇನ್ನೂ ಕೆಲವರು ಕಟಾವು ಮಾಡಿ ಹಾಕಿದ್ದು ಮತ್ತೆ ಕೆಲವರು ಕಟಾವ್ ಮಾಡಬೇಕು ಎನ್ನುವ ಹಂತದಲ್ಲಿದ್ದಾಗ ಅಕಾಲಿಕ ದೀರ್ಘಕಾಲದ ಮಳೆಯಿಂದ ಭತ್ತದ
ಕದರುಗಳು ಉದುರಿ, ಗದ್ದೆಯಲ್ಲಿ ನೀರು ನಿಂತು ಸಂಪೂರ್ಣವಾಗಿ ಭತ್ತದ ಪೈರು ನೀರಿನಲ್ಲಿ ಮಣ್ಣಿಗೆ ಅಂಟಿಕೊಂಡಿದ್ದು, ಇಂದು ರೈತರು ಭತ್ತದ ಬೆಳೆಯ ಆಶೆಯನ್ನು ಸಂಪೂರ್ಣ ಕೈಚಲ್ಲಿ ಚಿಂತಾಕ್ರಾಂತರಾಗಿದ್ದಾರೆ. ವರ್ಷವಿಡಿ ಕಷ್ಟಪಟ್ಟು ಬೆಳೆದ ಬೆಳೆ ಮಳೆಗೆ ಹಾನಿಯಾಗಿದ್ದು ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಸರಕಾರ ತಕ್ಷಣ ಪರಿಹಾರ ನೀಡಲಿ: ಕೃಷಿಯಿಂದಲೇ ಜೀವನ ನಡೆಸುವ ಸಾವಿರಾರು ಕುಟುಂಬಗಳು ಇದೀಗ ಮಳೆಯಿಂದ ಬೆಳೆ ಹಾನಿ ಮಾಡಿಕೊಂಡು ನಷ್ಟದಲ್ಲಿವೆ. ಆದ್ದರಿಂದ ಇಂತಹ ಕುಟುಂಬಗಳಿಗೆ ಸರಕಾರ ಬೆಳೆ ಹಾನಿ ಪರಿಹಾರವನ್ನು ಕೂಡಲೇ
ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಇಂತಹ ಸ್ಥಿತಿ ಎದುರಾಗಿ ದೇಶದಲ್ಲಿ ಶೇ.9.7ರಷ್ಟು ರೈತರು ಆತ್ಮಹತ್ಯೆ
ಮಾಡಿಕೊಂಡಿದ್ದು ಅದರಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿತ್ತು. ಇಂತಹ ಸ್ಥಿತಿ ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ