ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ
Team Udayavani, Dec 7, 2021, 7:40 AM IST
ಸಾಂದರ್ಭಿಕ ಚಿತ್ರ.
ಕಾಸರಗೋಡು: ಶಬರಿಮಲೆ ಪರಿಸರದಲ್ಲಿ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು, ಭಕ್ತರ ಯಾತ್ರೆಗೆ ಅಡ್ಡಿಯಾಗಿ ಪರಿಣಮಿಸಿದೆ.
ಪಂಪಾ ನದಿಯಲ್ಲಿ ತೀರ್ಥಸ್ನಾನ ಮಾಡಿ ಭಕ್ತರು ಮಲೆ ಏರುವುದು ರೂಢಿ. ಆದರೆ ಭಾರೀ ಮಳೆಯ ಕಾರಣ ಪಂಪಾ ನದಿ ಉಕ್ಕಿ ಹರಿಯುತ್ತಿದ್ದು, ಯಾರಿಗೂ ಸ್ನಾನಕ್ಕೆ ಅವಕಾಶವಿಲ್ಲ.
ಶಬರಿಮಲೆ ಸನ್ನಿಧಾನ, ಪಂಪಾ ಗಣಪತಿ ಸನ್ನಿಧಾನ ಸೇರಿದಂತೆ ಎಲ್ಲಿಯೂ ಭಕ್ತರಿಗೆ ತಂಗಲು ಅವಕಾಶವಿಲ್ಲ. ಸಂಜೆ 7ರಿಂದ ರಾತ್ರಿ 1ರ ತನಕ ನೀಲಕ್ಕಲ್ಲಿನಿಂದ ಪಂಪಾ ಕಡೆಗೆ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಭಕ್ತರು ಆನ್ಲೈನ್ ಟಿಕೆಟ್ ಮತ್ತು ಕೋವಿಡ್ 2 ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಅಥವಾ RT PCR Negative ವರದಿಯನ್ನು ಹೊಂದಿರುವುದು ಕಡ್ಡಾಯ.
ಇದನ್ನೂ ಓದಿ:ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ; ಪತ್ನಿ ಆರೋಗ್ಯ ಏರುಪೇರು; ಡಿಸಿಯಿಂದಲೇ ಚಿಕಿತ್ಸೆ
ನೀಲಕ್ಕಲ್ನಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಭಕ್ತರಿಗೆ ಶಬರಿಮಲೆಗೆ ಹೋಗಲು ಅನುಮತಿ ನೀಡಲಾಗುತ್ತದೆ.
ನೀಲಕ್ಕಲ್ ಮಹಾದೇವ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ 12.30ರಿಂದ ಅನ್ನದಾನದ ವ್ಯವಸ್ಥೆಯನ್ನು ದೇವಸ್ಥಾನ ಹಾಗೂ ತಿರುವಾಂಕೂರು ದೇವಸ್ವಂ ಬೋರ್ಡ್ ವತಿಯಿಂದ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ