ಉಕ್ಕಿ ಹರಿಯುತ್ತಿದೆ ಕುಮಾರಧಾರಾ; ಕೃಷಿ ಭೂಮಿ ಮುಳುಗಡೆ
Team Udayavani, Aug 7, 2019, 9:51 AM IST
ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ ಹಾಗೂ ಇದೀಗ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ನದಿ ಪಾತ್ರದಲ್ಲಿ ಬರುವ ಹಲವು ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ. ಜನವಸತಿ ಪ್ರದೇಶಗಳತ್ತ ನೀರು ಹರಿದು ಬರುತ್ತಿರುವುದರಿಂದ ಈ ಪ್ರದೇಶಗಳಲ್ಲಿರುವ ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಬೇಕಾಗದ ಪರಿಸ್ಥಿತಿ ಎದುರಾಗಿದೆ.
ಸುಬ್ರಹ್ಮಣ್ಯ ಪರಿಸರದಲ್ಲಿ ಮಂಗಳವಾರ ರಾತ್ರಿ ಮಳೆ ಕಡಿಮೆ ಇತ್ತು. ಆದರೆ ಬುಧವಾರ ಬೆಳಿಗ್ಗೆಯಿಂದ ಮಳೆ ಮತ್ತೆ ತೀವ್ರಗೊಂಡಿದೆ. ಕುಮಾರಧಾರ ಸ್ನಾನ ಘಟ್ಟ ಪ್ರದೇಶ ಮುಳುಗಡೆ ಸ್ಥಿತಿಯಲ್ಲಿದೆ.