ರೈತನ ಬಾಳಿಗೆ ಕೊಳ್ಳಿ ಇಟ್ಟ ಮಳೆ : ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆ


Team Udayavani, Jan 10, 2021, 11:42 AM IST

ರೈತನ ಬಾಳಿಗೆ ಕೊಳ್ಳಿ ಇಟ್ಟ ಮಳೆ : ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆ

ಮುಧೋಳ: ನಿರಂತರವಾಗಿ ರೈತನ ಬಾಳಿನಲ್ಲಿ ಚೆಲ್ಲಾಟವಾಡುತ್ತಿರುವ ಮಳೆರಾಯ ತನ್ನ ಕರಾಳ ಛಾಯೆಯನ್ನು
ಮುಂದುವರಿಸುತ್ತಿದ್ದಾನೆ.

ಕಳೆದ ಮುಂಗಾರು ಅವಧಿಯಲ್ಲಿ ಹೊಲದಲ್ಲಿನ ಬೆಳೆ ಇನ್ನೇನು ಕೈಗೆ ಬಂದು ನಮ್ಮೆಲ್ಲ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಸುಗ್ಗಿ ಕಾಲದಲ್ಲಿ ಸುರಿದ ಅತಿಯಾದ ಮಳೆ ಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು. ಮುಂಗಾರು ಅವಧಿಯಲ್ಲಿ ಮಳೆರಾಯ ನೀಡಿದ್ದ ಬರೆಯ ಗಾಯದ ನೋವಿನಿಂದ ಹೊರಬಂದು ಈ ಬಾರಿಯಾದರೂ ಬೆಳೆ ಕೈಗೆ ಸಿಗುತ್ತದೆ ಎಂಬ ನಿರೀಕ್ಷೆಗೆ ಮಳೆರಾಯ ಮತ್ತೆ ತಣ್ಣೀರೆರಚಿದ್ದಾನೆ.

ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ತಾಲೂಕಿನ ಬಹುತೇಕ ಬೆಳೆಗಳು ಹಾನಿಯಾಗುವ ಮುನ್ಸೂಚನೆ ಮೂಡಿದೆ. ನಿತ್ಯ ಮೂರು ದಿನದಿಂದ ನಿತ್ಯ ಸಂಜೆ ವೇಳೆ ಜಿಟಿಜಿಟಿ ಮಳೆ ಹಾಗೂ ಬೆಳಗ್ಗೆ ಸಮಯದಲ್ಲಿ ಸುರಿಯುತ್ತಿರುವ ಮಂಜು ರೈತರನ್ನು ಕಂಗಾಲಾಗಿಸಿದೆ.

ಜೋಳದ ಜಿಗಿ ನಾಶ: ಹಿಂಗಾರಿ ಬೆಳೆಯಾದ ಬಿಳಿಜೋಳ ಅಕಾಲಿಕ ಮಳೆಯಿಂದಾಗಿ ಬೆಳೆಯ ಇಳುವರಿ ಕುಂಠಿತಗೊಳ್ಳುವ
ಭೀತಿ ಎದುರಾಗಿದೆ. ಅಕಾಲಿಕ ಮಳೆಯಿಂದಾಗಿ ಜೋಳದ ಜಿಗಿ ಆರುತ್ತದೆ. ಇದರಿಂದಾಗಿ ಬೆಳೆ ಹುಲುಸಾಗದೆ ಕಾಳು ಕಪ್ಪಿಟ್ಟುವ
ಸಂಭವ ಹೆಚ್ಚಾಗುತ್ತದೆ. ತಾಲೂಕಿನಲ್ಲಿ ಒಟ್ಟು 4119 ಹೆಕ್ಟೇರ್‌ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಮಾಡಲಾಗಿದೆ. ಬಿತ್ತನೆ ಬಳಿಕ
ಸಕಾಲಕ್ಕೆ ಮಳೆಯಾಗದ ಕಾರಣ ಬೆಳೆ ಕುಂಠಿತಗೊಂಡಿತ್ತು. ಕೆಲವೊಂದಿಷ್ಟು ರೈತರು ನೀರಾವರಿ ಮೂಲಕ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಇದೀಗ ಅಕಾಲಿಕವಾಗಿಸುರಿದ ಮಳೆ ಹಾಗೂ ಅನಿಶ್ಚಿತ ವಾತಾವರಣದಿಂದಾಗಿ ರೈತರಿಗೆ
ಇನ್ನಿಲ್ಲದ ಚಿಂತೆ ಕಾಡತೊಡಗಿದೆ.

ಕಡಲೆಗೆ ಹುಳಿ ಮುರಿಯುವ ಭೀತಿ: ತಾಲೂಕಿನ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಲಾಗಿದೆ. ಆದರೆ ಇದೀಗ ಸುರಿದ ಅಕಾಲಿಕ ಮಳೆಯಿಂದಾಗಿ ಕಡಲೆ ಇಳುವರಿಯೂ ಕುಂಠಿತಗೊಳ್ಳು ಸಂಭವ ಹೆಚ್ಚಿದೆ. ಸದ್ಯ ಕಡಲೆ ಬೆಳೆ ಹುಳಿಹಚ್ಚುವ ಸಮಯ. ಸೂಕ್ತ ರೀತಿಯಲ್ಲಿ ಕಡಲೆ ಹುಳಿಹಚ್ಚಿದರೆ ಮುಂದೆ ಇಳುವರಿ ಹೆಚ್ಚಿನ ಪ್ರಮಾಣದಲ್ಲಿ ಬರುತ್ತದೆ. ಆದರೆ ಸದ್ಯ ಸುರಿದ ಅಕಾಲಿಕ ಮಳೆಯಿಂದ ಹುಳಿಯೆಲ್ಲ ತೊಳೆದು ಹೋಗುತ್ತದೆ. ಇದರಿಂದಾಗಿ ಕಡಲೆ ಕಾಯಿಕಟ್ಟುವ ವೇಳೆಯಲ್ಲಿ ಜೊಳ್ಳಾಗುವ ಸಂಭವ ಹೆಚ್ಚಿರುತ್ತದೆ. ಇದರಿಂದಾಗಿ ಇಳುವರಿಯಲ್ಲಿಯೂ ಕುಂಠಿತಗೊಳ್ಳಲಿದೆ ಎಂಬುದು ರೈತರ ಅಭಿಪ್ರಾಯ.

ತಾಲೂಕಿನ 4541 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಲಾಗಿದೆ. ಕಳೆದೆರಡು ದಿನದಿಂದ ಸುರಿದ ಅಕಾಲಿಕ ಮಳೆಯಿಂದ ಕಡಲೆ ಬೆಳೆಗಾರರಿಗೂ ಆತಂಕ ಎದುರಾಗಿದೆ.

ಗೋಧಿಗೂ ಕಾದಿದೆ ಆಪತ್ತು: ಅಕಾಲಿಕ ಮಳೆಯಿಂದ ಗೋಧಿ ಬೆಳೆಗೂ ಆಪತ್ತು ಎದುರಾಗುವ ಸಂಭವವಿದೆ. ಅಕಾಲಿಕ
ಮಳೆಯಿಂದಾಗಿ ಗೋ  ಬೆಳೆಗೆ ಇಟ್ಟಂಗಿ ರೋಗದ ಭಿತಿ ಎದುರಿಸುತ್ತಿದೆ. ಮೇಲಿನ ಬೆಳೆಗಳು ಮಾತ್ರವಲ್ಲದೆ ದ್ವಿದಳ ಧಾನ್ಯಗಳು
ಸಹ ಅಕಾಲಿಕ ಮಳೆಗೆ ತುತ್ತಾಗಿ ಇಳುವರಿ ಕುಂಠಿತಗೊಳ್ಳುವ ಸಂಭವವಿರುವುದರಿಂದ ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ.

– ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.