ಭಾರೀ ಮಳೆ: ಕಾಸರಗೋಡಿನಲ್ಲಿ ವ್ಯಾಪಕ ಹಾನಿ


Team Udayavani, May 5, 2020, 5:42 AM IST

ಭಾರೀ ಮಳೆ: ಕಾಸರಗೋಡಿನಲ್ಲಿ ವ್ಯಾಪಕ ಹಾನಿ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮೇ 4ರಂದು ರಾತ್ರಿ ಸುರಿದ ಗಾಳಿ, ಗುಡುಗು ಸಹಿತ ಮಳೆಗೆ ವ್ಯಾಪಕ ನಷ್ಟ ಸಂಭವಿಸಿದೆ. ಮಡಿಕೈ ಪುದಿಯ ಕಂಡತ್ತಿಲ್‌ನಲ್ಲಿ ಸಾವಿರಾರು ಬಾಳೆ, ಕಂಗು, ತೆಂಗು ಮರಗಳು ನೆಲಕಚ್ಚಿವೆ.

ಮಾವುಂಗಾಲ್‌, ಅರಯಿ, ಕುಳಿಯಂಗಾಲ್‌, ಅಲಾಮಿಪಳ್ಳಿ, ಕೋಯಮ್ಮಲ್‌, ವಿಷ್ಣುಮಂಗಲಂ, ಮಾಣಿಕೋತ್‌, ಅದಿಂಞಾಲ್‌, ಬೇಕಲ ಮೊದಲಾದೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು, ಕಟ್ಟಡದ ಮೇಲ್ಛಾವಣಿ ಧರೆಗುರುಳಿವೆ. ಮಡಿಕೈ ಕಣಿಯಿಲ್‌ ಪದ್ಮನಾಭ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಗೀಡಾಗಿದೆ.

ಅದಿಂಞಾಲ್‌ನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದಿದ್ದು, ಈ ಸಂದರ್ಭ ಬೇಕಲದಲ್ಲಿ ಡ್ನೂಟಿ ಮುಗಿಸಿ ಕಾಂಞಂಗಾಡ್‌ಗೆ ತೆರಳುತ್ತಿದ್ದ ಪೊಲೀಸರಾದ ರಂಜಿತ್‌ ಮತ್ತು ಅಜಯನ್‌ ಅದೃಷ್ಟವಶಾತ್‌ ಅಪಾಯದಿಂದ ಪಾರಾದರು. ಇವರ ಹೆಲ್ಮೆಟ್‌ಗೆ ವಿದ್ಯುತ್‌ ತಂತಿ ಬಡಿದರೂ ಅಪಾಯದಿಂದ ಪಾರಾದರು. ಬೇಕಲದಲ್ಲಿ ಲಾರಿ ಅಪಘಾತದಿಂದ ಲಾರಿಯಲ್ಲಿ ಸಿಲುಕಿಕೊಂಡ ಚಾಲಕನನ್ನು ಕಾಂಞಂಗಾಡ್‌ನ‌ ಅಗ್ನಿಶಾಮಕ ದಳ ರಕ್ಷಿಸಿತು. ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತು.

ಚೆಮ್ಮಟಂವಯಲ್‌ ಕಾಲಿಚ್ಚಾನಡ್ಕಂ ರಸ್ತೆಯಲ್ಲಿ ನಾದಪುರಂ ಕುನ್ನಿಲ್‌ನಲ್ಲಿ ಎಚ್‌.ಟಿ. ಲೈನ್‌ ಕಡಿದು ಬಿದ್ದು ಸಂಚಾರ ಸ್ಥಗಿತಗೊಂಡಿತು.ಮೈಲಾಟಿ – ಕಾಂಞಂಗಾಡ್‌ 110 ಕೆ.ವಿ. ಲೈನ್‌ ಹಾನಿಗೀಡಾಗಿದ್ದು, ವಿವಿಧೆಡೆ ವಿದ್ಯುತ್‌ ಕಡಿತವಾಗಿದೆ. ತಳಂಗರೆಯಲ್ಲಿ ತೆಂಗಿನ ಮರ ಉರುಳಿ ವಿದ್ಯುತ್‌ ಕಂಬದ ಮೇಲೆ ಬಿದ್ದು ವಿದ್ಯುತ್‌ ಸ್ಥಗಿತವಾಗಿದೆ. ಕಾಸರಗೋಡು ಸಮುದ್ರ ಕಿನಾರೆಯಲ್ಲಿ ಹಲವು ಮನೆಗಳು ಹಾನಿಗೀಡಾದವು. ಕಾಸರಗೋಡು ಕಡಪುರದಲ್ಲಿ ಮರು ಬಿದ್ದು ಶಿವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್‌ ಕಂಬ ಹಾಗೂ ಮರ ಬಿದ್ದು ಕಾಸರಗೋಡು ಕಡಪ್ಪುರದ ಗಂಗಾನಗರದ ಕೊಗ್ಗು ಮತ್ತು ರಾಜೀವನ್‌ ಅವರ ಮನೆಗಳು ಹಾನಿಗೀಡಾಗಿವೆ. ಲೈಟ್‌ ಹೌಸ್‌ ಪರಿಸರದಲ್ಲಿ ಮರ ಉರುಳಿ ಬಿದ್ದು ಮನೆಗೆ ಹಾನಿಯಾಗಿದೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.