ರಾಯಚೂರು, ಮಲೆನಾಡಲ್ಲಿ ಭಾರೀ ಮಳೆ


Team Udayavani, Sep 26, 2019, 3:07 AM IST

rayachuru

ಹುಬ್ಬಳ್ಳಿ/ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದ್ದು, ರಾಯಚೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 11ಸೆಂ.ಮೀ. ಮಳೆಯಾಗಿದೆ. ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಬುಧವಾರ ಪುನಃ ಸುರಿಯಲಾರಂಭಿಸಿದೆ. ರಾಯಚೂರು ಜಿಲ್ಲೆಯ ಜನರಿಗೆ ಮಂಗಳವಾರ ರಾತ್ರಿ ಎಡಬಿಡದೆ ಸುರಿದ ಮಳೆ ಆತಂಕ ತಂದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರಾತ್ರಿಯಿಡೀ ಜಾಗರಣೆ ಮಾಡುವಂತಾಯಿತು.

ನಗರದ ಎನ್‌ಜಿಒ ಕಾಲೋನಿಯಲ್ಲಿ ದೇವಸ್ಥಾನದ ಅರ್ಚಕ ಶಂಕರಲಿಂಗ ಎಂಬುವರ ಮನೆ ಗೋಡೆ ಕುಸಿದಿದ್ದು, ಚಿಕ್ಕ ಮಗು ಸೇರಿ ಮನೆಯವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹರಿಜನವಾಡ, ಸಿಯಾತಲಾಬ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಇಡೀ ರಾತ್ರಿ ನಿದ್ದೆ ಇಲ್ಲದೆ ಕಳೆದಿದ್ದಾರೆ. ನೀರಿನಲ್ಲಿ ತೇಲಿ ಹೋಗುತ್ತಿದ್ದ ಸಾಮಗ್ರಿಗಳನ್ನು ಪಾತ್ರೆ- ಪಗಡೆ ಗಳನ್ನು ಹಿಡಿದಿಡಲು ಜನ ಹರಸಾಹಸಪಡಬೇಕಾಯಿತು.

ಗ್ರಾಮೀಣ ಭಾಗದಲ್ಲೂ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ಸಂಚಾರ ಸ್ಥಗಿತಗೊಂಡಿದೆ. ಜೇಗರಕಲ್‌ ಹಳ್ಳ ಭರ್ತಿಯಾದ ಪರಿಣಾಮ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಹತ್ತಿ, ತೊಗರಿ, ಸೂರ್ಯಕಾಂತಿ ಸೇರಿ ಇನ್ನಿತರ ಬೆಳೆಗಳಿಗೆ ಧಕ್ಕೆಯಾಗಿದೆ. ನಗರದ ಇಎಸ್‌ಐಸಿ ಆಸ್ಪತ್ರೆಗೂ ನೀರು ನುಗ್ಗಿ ರೋಗಿಗಳು ಪರದಾಡುವಂತಾಗಿದೆ. ಈಗಷ್ಟೇ ತೊಗರಿ, ಹತ್ತಿ ಬೆಳೆ ಚೇತರಿಸಿಕೊಳ್ಳುತ್ತಿದ್ದು, ಮಳೆ ಇದೇ ರೀತಿ ಸುರಿದಲ್ಲಿ ಬೆಳೆ ಕೊಳೆತು ಹಾಳಾಗುವ ಸಾಧ್ಯತೆಗಳಿವೆ.

ಮಲೆನಾಡಲ್ಲಿ ವರುಣನ ಸಿಂಚನ: ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಬುಧವಾರ ಪುನಃ ಸುರಿಯಲಾರಂಭಿಸಿದೆ. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಬುಧವಾರ ಮಧ್ಯಾಹ್ನ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಶೃಂಗೇರಿ ತಾಲೂಕಿನಲ್ಲಿ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಜೋರಾಗಿ ಮಳೆ ಸುರಿಯಲಾರಂಭಿಸಿದೆ. ಸಂಜೆಯಾದರೂ ಮಳೆ ಪ್ರಮಾಣ ಕಡಿಮೆಯಾಗಿಲ್ಲ.

ಕೊಪ್ಪ ತಾಲೂಕಿನ ವಿವಿಧೆಡೆ ಹಾಗೂ ನರಸಿಂಹರಾಜಪುರ ತಾಲೂಕಿನಲ್ಲೂ ಮಧ್ಯಾಹ್ನದ ನಂತರ ಭಾರೀ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ, ಹೊರನಾಡು, ಕೊಟ್ಟಿಗೆಹಾರ ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಹಾಗೂ ಕಡೂರು ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೃತ್ಯುಂಜಯ ನದಿಯಲ್ಲಿ ಏಕಾಏಕಿ ನೆರೆ: ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಬುಧವಾರ ಸಂಜೆ ಏಕಾಏಕಿ ನೆರೆ ನೀರು ಉಕ್ಕಿ ಹರಿದು ತಟದ ತೋಟಗಳಿಗೆ ನುಗ್ಗಿದೆ. ಆ.9ರ ನೆರೆಯಿಂದ ಸಂತ್ರಸ್ತರಾದವರು ಇನ್ನೇನು ಬದುಕು ಕಟ್ಟಿಕೊಳ್ಳುವಷ್ಟರಲ್ಲೇ ಮತ್ತೆ ನದಿ ಉಕ್ಕಿ ಹರಿದಿರುವುದು ಆತಂಕ ಮೂಡಿಸಿದೆ. ಪಶ್ಚಿಮ ಘಟ್ಟ ಮೇಲ್ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮವಿದು ಎನ್ನಲಾಗಿದೆ. ಚಾರ್ಮಾಡಿ ಗ್ರಾಮದ ಅರಣೆಪಾದೆ -ಅಂತರ ಸಂಪರ್ಕ ಸತತ ನಾಲ್ಕನೇ ಬಾರಿಗೆ ಕಡಿತಗೊಂಡಿದ್ದು, ಕೃಷಿ ಭೂಮಿಗೆ ನೀರು ನುಗ್ಗಿದ್ದರಿಂದ ಪ್ರವಾಹದ ಬಳಿಕ ಕೈಗೊಂಡಿದ್ದ ಶ್ರಮದಾನ ನೀರು ಪಾಲಾಗಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.