ಹೆಬ್ರಿ ಆಸ್ಪತ್ರೆ: ವೈದ್ಯರ ಸಹಿತ 7 ಸಿಬಂದಿಗೆ ಬಾಧೆ!
Team Udayavani, Jun 28, 2020, 9:00 AM IST
ಹೆಬ್ರಿ : ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಸಹಿತ 7 ಸಿಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶನಿ ವಾರ ಆಸ್ಪತ್ರೆಯನ್ನು, ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ ಸಿಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಹೆಬ್ರಿ ತಾಲೂಕಿನ ಪ್ರಮುಖ ಸರಕಾರಿ ಆಸ್ಪತ್ರೆ ಇದಾಗಿದ್ದು, ದಿನನಿತ್ಯ ನೂರಾರು ರೋಗಿಗಳು ಬರುತ್ತಾರೆ. 2 ದಿನಗಳಿಂದ ಪರಿಸರದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಗೂ ಆರೋಗ್ಯ ತಪಾಸಣೆಯನ್ನು ಇದೇ ಸಿಬಂದಿ ಮಾಡಿದ್ದು, ಮಕ್ಕಳ ಪೋಷಕರು ಭೀತರಾಗಿದ್ದಾರೆ.
ಪಲಿಮಾರು: 4 ಮನೆ ಸೀಲ್ಡೌನ್
ಪಡುಬಿದ್ರಿ: ಹೆಬ್ರಿಯ ಸಮು ದಾಯ ಆರೋಗ್ಯ ಕೇಂದ್ರದಲ್ಲಿ ಐಸಿಟಿಸಿ ಕೌನ್ಸೆಲರ್ ಆಗಿರುವ 33ರ ಹರೆಯದ ಮಹಿಳೆ ಕೋವಿಡ್ ಬಾಧೆಗೊಳಗಾಗಿದ್ದಾರೆ. ಪಲಿಮಾರಿನ ಮನೆಯಿಂದ ದಿನಾಲೂ ಹೋಗಿ ಬರುತ್ತಿದ್ದ ಅವರನ್ನು ಇಂದು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಾಸವಿದ್ದ ಪಲಿಮಾರು ದರ್ಕಾಸ್ತಿನ 3 ಮನೆಗಳು ಹಾಗೂ ನಾಡ್ಪಾಲು ಗ್ರಾಮದ ಎನ್.ಎಸ್. ರಸ್ತೆಯ ಮನೆಯೊಂದನ್ನು ಸೀಲ್ಡೌನ್ ಮಾಡಲಾಗಿದೆ.
ವೈದ್ಯೆಯ ಮನೆ ಸೀಲ್ಡೌನ್
ಕೋಟ: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯುಷ್ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿರುವ ಸಾಲಿಗ್ರಾಮ ಕಾರ್ಕಡದ ನಿವಾಸಿಗೆ ಸೋಂಕು ಬಾಧಿಸಿರುವ ಕಾರಣ ಅವರು ವಾಸವಿರುವ ಕಾರ್ಕಡದ ಮನೆಯನ್ನು ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ ಹಾಗೂ ಮನೆಯವರನ್ನು ಹೌಸ್ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ