ಮೊದಲ ದಿನವೇ ಕರೆಗಳ ಮಹಾಪೂರ! ಹೊರನಾಡ ಕನ್ನಡಿಗರ “ಸಹಾಯವಾಣಿ’
Team Udayavani, Apr 29, 2020, 6:30 AM IST
ಸಾಂದರ್ಭಿಕ ಚಿತ್ರ..
ಮಂಗಳೂರು: ಲಾಕ್ಡೌನ್ನಿಂದಾಗಿ ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ಸಮಸ್ಯೆಗಳನ್ನು ಆಲಿಸಲು ರಾಜ್ಯ ಸರಕಾರ ಆರಂಭಿಸಿರುವ “ಸಹಾಯವಾಣಿ’ಗೆ ಮೊದಲ ದಿನವೇ ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ 600ಕ್ಕೂ ಅಧಿಕ ಕರೆಗಳು ಬಂದಿವೆ
ಕರೆಗಳ ಆಧಾರದಲ್ಲಿ ಸಂಬಂಧಪಟ್ಟ ರಾಜ್ಯದ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಿ ತತ್ಕ್ಷಣಕ್ಕೆ ಬೇಕಾದ ತುರ್ತು ಸಹಾಯವನ್ನು ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಈ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಿದ್ದರು.
ಮೊದಲ ದಿನ ಹೆಚ್ಚಾಗಿ ಹೊರ ರಾಜ್ಯಗಳಿಂದ ಊರಿಗೆ ಯಾವ ರೀತಿ ಬರಬಹುದು, ಅದಕ್ಕೆ ಅವಕಾಶ ಇದೆಯೇ, ಎಲ್ಲಿ ಪಾಸ್ ನೀಡಲಾಗುತ್ತದೆ. ತುರ್ತು ವೈದ್ಯಕೀಯ ಹಿನ್ನೆಲೆಯಲ್ಲಿ ಬರುವುದಾದರೆ ಏನು ಮಾಡಬೇಕು, ಪಾಸ್ಗೆ ಬೇಡಿಕೆ ಸಲ್ಲಿಸಲು ಏನೇನು ಕಾಗದಪತ್ರಗಳು ಬೇಕು, ಎಲ್ಲೆಲ್ಲಿಯ ಅನುಮತಿ ಬೇಕು ಎಂಬ ಪ್ರಶ್ನೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು ಎಂದು ಸಹಾಯವಾಣಿ ಕೇಂದ್ರದ ಮೂಲಗಳು ತಿಳಿಸಿವೆ.
ಇನ್ನು ಕೆಲವರು ನಮಗೆ ಬೇಕಾದ ಆಹಾರ ಸಿಗುತ್ತಿಲ್ಲ.. ತಾವಿರುವಲ್ಲಿ ಸರಿಯಾದ ವಸತಿ ವ್ಯವಸ್ಥೆಯೂ ಇಲ್ಲ. ಮೂಲ ಸೌಕರ್ಯಗಳಿಲ್ಲ, ಸ್ವತ್ಛತೆಯತ್ತ ಹೆಚ್ಚಿನ ಗಮನ ನೀಡುವುದಕ್ಕೂ ಆಗುತ್ತಿಲ್ಲ ಎಂಬ ದೂರುಗಳಿದ್ದವು.ಕೋವಿಡ್ 19 ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್ಡೌನ್ನಿಂದಾಗಿ ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಆಪ್ತ ಸಹಾಯವಾಣಿಯೊಂದನ್ನು ಸ್ಥಾಪಿಸುವ ತುರ್ತು ಆವಶ್ಯಕತೆಯ ಬಗ್ಗೆ ಇತ್ತೀಚೆಗೆ “ಉದಯವಾಣಿ’ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರ
ಜತೆ ಆಯೋಜಿಸಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಗಮನ ಸೆಳೆಯಲಾಗಿತ್ತು. ಇದರಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಮೇರೆಗೆ ರಾಜ್ಯ ಸರಕಾರ ದಿನದ 24 ಗಂಟೆ ಕಾರ್ಯಾಚರಿಸುವ ಈ ಸಹಾಯವಾಣಿ ಕೇಂದ್ರವನ್ನು ಆರಂಭಿಸಿದೆ.
ಸಹಾಯವಾಣಿ ಸಂಖ್ಯೆ: 080 22636800
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ