ಹೆಮ್ಮಾಡಿ : ಬ್ಯಾಂಕ್ವೊಂದರ ಸಿಬಂದಿಗೆ ಪಾಸಿಟಿವ್ ವದಂತಿ
Team Udayavani, Jul 11, 2020, 8:00 AM IST
ಕುಂದಾಪುರ: ಹೆಮ್ಮಾಡಿಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ವೊಂದರ ಸಿಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುಳ್ಳು ವದಂತಿ ಶುಕ್ರವಾರ ಎಲ್ಲೆಡೆ ಹಬ್ಬಿತ್ತು. ಆದರೆ ಅಲ್ಲಿನ ಯಾವ ಸಿಬಂದಿಗೂ ಈವರೆಗೆ ಪಾಸಿಟಿವ್ ಬಂದಿಲ್ಲ.
ಈ ಸುದ್ದಿ ಎಲ್ಲೆಡೆ ಹಬ್ಬಿದ್ದು, ಇದರಿಂದ ಶುಕ್ರವಾರ ಗ್ರಾಹಕರು ಬ್ಯಾಂಕಿನತ್ತ ಸುಳಿಯಲೇ ಇಲ್ಲ. ಈ ಕಾರಣಕ್ಕೆ ಬೆಳಗ್ಗೆ 11 ಗಂಟೆಯಿಂದ ಬಂದ್ ಮಾಡಲಾಯಿತು.
ಆಗಿದ್ದೇನು?
ಇದೇ ಬ್ಯಾಂಕಿನ ಶಿರೂರು ಶಾಖೆಯ ಮ್ಯಾನೇಜರ್ ಒಬ್ಬರಿಗೆ ಪಾಸಿಟಿವ್ ಬಂದಿದ್ದು, ಅಲ್ಲಿನ ಮಹಿಳಾ ಸಿಬಂದಿಯೊಬ್ಬರು ಗುರುವಾರ ಒಂದು ದಿನದ ಮಟ್ಟಿಗೆ ಬದಲಿಯಾಗಿ ಹೆಮ್ಮಾಡಿಯ ಶಾಖೆಗೆ ಕೆಲಸಕ್ಕೆ ಬಂದಿದ್ದಾರೆ. ಆದರೆ ಆ ಸಿಬಂದಿಗೆ ಕೊರೊನಾ ಇರುವುದು ದೃಢವಾಗಿಲ್ಲ. ಹಾಗಾಗಿ ಆತಂಕ ಪಟ್ಟುಕೊಳ್ಳಬೇಕಾದ ಅಗತ್ಯವಿಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಸುಳ್ಳು ಸಂದೇಶವನ್ನು ರವಾನಿಸಿದ್ದು ಗೊಂದಲಕ್ಕೆ ಕಾರಣವಾಗಿದೆ.
ಸೀಲ್ಡೌನ್ ಗೊಂದಲ?
ಇಲ್ಲಿ ಸದ್ಯ ಐವರು ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಎರಡನೇ ಸಂಪರ್ಕ ಆಗಿರುವುದರಿಂದ ಸೀಲ್ಡೌನ್ ಮಾಡಬೇಕೆ ? ಅಥವಾ ಬೇಡವೇ ಎನ್ನುವ ಗೊಂದಲ ಉಂಟಾಗಿದ್ದು, ಈ ಬಗ್ಗೆ ತಾಲೂಕು ಆಡಳಿತದ ಆದೇಶಕ್ಕೆ ಕಾಯುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ