ಕೋವಿಡ್‌ 19 ಸಮಯದಲ್ಲಿ ತಾಯ್ತನಾ


Team Udayavani, Jun 24, 2020, 4:42 AM IST

covid-taytana

1.ಗರ್ಭಿಣಿಯರಿಗೆ ಈ ಸೋಂಕು ತಗುಲುವ ಸಂಭವ ಹೆಚ್ಚೇ?
ವಿಶೇಷವಾಗಿ, ಇದೇ ಸೋಂಕು ತಗುಲುವ ಸಾಧ್ಯತೆ ಹೆಚ್ಚೇನೂ ಇಲ್ಲ. ಅದರೆ, ಗರ್ಭಿಣಿಯರಲ್ಲಿ ರೋಗ ನಿರೋಧಕ ಶಕ್ತಿಯ ಕೊರತೆಯಿಂದ, ಎಲ್ಲ ಬಗೆಯ ಸೋಂಕು ತಗುಲುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ, ಹೆಚ್ಚಿನ ಕಾಳಜಿ  ಅವಶ್ಯಕ. ಗರ್ಭಿಣಿಯ ಮನೆಯವರು, ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅವರಿಂದ ಸಾಮಾಜಿಕ ಅಂತರವನ್ನು ಮನೆಯಲ್ಲೂ ಪಾಲಿಸಬೇಕಾಗುತ್ತದೆ.

2.ಗರ್ಭಿಣಿಗೆ ಸೋಂಕು ತಗುಲಿದರೆ, ಗರ್ಭದಲ್ಲಿರುವ ಮಗುವಿಗೆ ತೊಂದರೆಗಳು ಕಾಣಿಸಬಹುದೆ? 
ಮೊದಲ ಮೂರು ತಿಂಗಳು ಈ ಸೋಂಕು ಕಾಣಿಸಿದಲ್ಲಿ, ಜ್ವರವು ತೀವ್ರವಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇರುತ್ತದೆ. ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕದ ಮಗು ಹುಟ್ಟುವ ಸಾಧ್ಯತೆ ಇರುತ್ತದೆ. ಜನ್ಮಪಾತ ವೈಪರೀತ್ಯಗಳು, ಈ ಸೋಂಕಿನಿಂದ ಕಂಡುಬಂದಿಲ್ಲ.

3.ತಾಯಿಯಿಂದ ಮಗುವಿಗೆ ಸೋಂಕು ಹರಡುವುದೇ?
ಇಲ್ಲ. ಇದುವರೆಗೆ, ಗರ್ಭದಲ್ಲಿರುವಾಗ ಅಥವಾ ಹೆರಿಗೆ ಸಮಯದಲ್ಲಿ, ಮಗುವಿಗೆ ಸೋಂಕು ತಗುಲಿದ ಉದಾಹರಣೆಗಳು ಇಲ್ಲ.

4.ತಾಯಿಗೆ ಸೋಂಕು ಇರುವಾಗ, ಪ್ರಸೂತಿಯ ಮಾರ್ಗ ಯಾವುದು ಉತ್ತಮ? ಸಿಜೇರಿಯನ್‌ ಅವಶ್ಯಕತೆ ಎಲ್ಲರಲ್ಲೂ ಇರುತ್ತದೆಯೇ?
ಹಾಗೇನೂ ಇಲ್ಲ. ಬೇರೆ ಯಾವ ತೊಂದರೆಗಳೂ ಇಲ್ಲದ್ದಿದ್ದರೆ, ಸಹಜ ಹೆರಿಗೆಯ ಪ್ರಯತ್ನವನ್ನು ಮಾಡಬಹುದು. ಆದರೆ, ಪ್ರಸವಕ್ಕೆ ಸಂಬಂಧಿಸಿದ ತೊಂದರೆ ಕಂಡುಬಂದಲ್ಲಿ ಸಿಜೇರಿಯನ್‌ ಮಾಡಬೇಕಾಗುತ್ತದೆ.

5.ತಾಯಿಗೆ ಸೋಂಕು ಇರುವಾಗ, ಎದೆಹಾಲು ಕುಡಿಸಬಹುದೇ ?
ಕುಡಿಸಬಹುದು. ಅದರೆ ಕುಡಿಸುವಾಗ ಬಹಳ ಎಚ್ಚರಿಕೆ ವಹಿಸಬೇಕಾಗುತ್ತದೆ. ತಾಯಿ, ತನ್ನ ಕೈಗಳನ್ನು ಸ್ವತ್ಛವಾಗಿ ತೊಳೆದುಕೊಂಡು, ಮಾಸ್ಕ್‌ ಧರಿಸಿ, ಮಗುವಿನ ಮುಖಕ್ಕೆ ತನ್ನ ಉಸಿರು  ತಾಗದಂತೆ ಕುಡಿಸಬೇಕು. ತಾಯಿಯು ತೀವ್ರತರದ  ಸೋಂಕಿನಿಂದ ಬಳಲುತ್ತಿದ್ದರೆ, ಹಾಲನ್ನು ತಾಯಿಯ ಎದೆಯಿಂದ ತೆಗೆದು ಕುಡಿಸಬಹುದು. ತಾಯಿಯ ಎದೆ ಹಾಲಿನಿಂದ ಮಗುವಿಗೆ ಸೋಂಕು ತಗುಲುವುದಿಲ್ಲ. ಬದಲಾಗಿ, ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

6.ಪ್ರಸವ ಪೂರ್ವ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆ ಏನು?
ಈ ಸ್ತ್ರೀಯರಲ್ಲಿ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಇರುವು  ದರಿಂದ ಆಸ್ಪತ್ರೆಯ ಭೇಟಿಗಳನ್ನು ಕಡಿಮೆ  ಮಾಡಬೇಕಾಗುತ್ತದೆ. ಮೊದಲ ಮೂರು ತಿಂಗಳಲ್ಲಿ ಒಂದು ಸಾರಿ, ಐದನೇ ತಿಂಗಳಿನಲ್ಲಿ ಒಂದು ಸಾರಿ, ಎಂಟನೇ ತಿಂಗಳಿನಲ್ಲಿ ಒಂದು ಸಾರಿ ರಕ್ತಪರೀಕ್ಷೆ ಹಾಗೂ ಸ್ಕ್ಯಾನಿಂಗ್‌ ಮಾಡಿಸಬೇಕಾದ ಅವಶ್ಯಕತೆ ಇರುತ್ತದೆ. ಈ ಮೂರು ಭೇಟಿಗಳು ಅತ್ಯವಶ್ಯಕ. ಸಮಯಕ್ಕೆ ಕೈತೊಳೆಯುವುದು  ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಉಳಿದಂತೆ,  ವೈದ್ಯರನ್ನು ಫೋನಿನಲ್ಲಿ ಸಂಪರ್ಕಿಸಿ ಸಲಹೆಗಳನ್ನು ತೆಗೆದುಕೊಳ್ಳಬಹುದು.

7.ಪ್ರಸವದ ನಂತರದ ಆರೈಕೆಯಲ್ಲಿ, ಏನಾದರೂ ಬದಲಾವಣೆಗಳಿರುವುವೇ? 
ವಿಶೇಷವಾಗಿ ಏನೂ ಇಲ್ಲ. ಅದರೆ, ಅಸ್ಪತ್ರೆ ಯಿಂದ ಇವರನ್ನು ಬೇಗನೆ ಬಿಡುಗಡೆ ಮಾಡಬೇಕಾಗುತ್ತದೆ. ಇವರು ಆಸ್ಪತ್ರೆಯಲ್ಲಿ ಇರುವವರೆಗೂ, ಅವರೊ ಡನೆ ಇರುವ ಸಂಬಂ ಧಿಕರ ಸಂಖ್ಯೆ ಕಡಿಮೆಯಾದಷ್ಟೂ ಒಳ್ಳೇದು.

* ಡಾ. ವನಮಾಲಾ, ಪ್ರಸೂತಿ ತಜ್ಞರು

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.