ಇಂದಿನಿಂದ ಗಡಿಯಲ್ಲಿ ಬಿಗಿ ತಪಾಸಣೆ: ದಕ್ಷಿಣ ಕನ್ನಡ ಪ್ರವೇಶಿಸುವವರ ಮೇಲೆ ನಿಗಾ!


Team Udayavani, Feb 22, 2021, 5:45 AM IST

ಇಂದಿನಿಂದ ಗಡಿಯಲ್ಲಿ ಬಿಗಿ ತಪಾಸಣೆ: ದಕ್ಷಿಣ ಕನ್ನಡ ಪ್ರವೇಶಿಸುವವರ ಮೇಲೆ ನಿಗಾ!

ಮಹಾನಗರ: ಕೊರೊನಾ ಲಾಕ್‌ಡೌನ್‌ ಸಂದರ್ಭ ಭಾಗಶಃ ಕೇರಳ-ಕರ್ನಾಟಕ ಗಡಿ ಬಂದ್‌ ಮಾಡಿದ್ದ ಮಾದರಿಯಲ್ಲಿಯೇ ಮತ್ತೂಮ್ಮೆ ಫೆ. 22ರಿಂದ ಗಡಿ ಬಂದ್‌ ಆರಂಭವಾಗಲಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಇರುವ ಒಟ್ಟು ಗಡಿಗಳ ಪೈಕಿ 4 ಗಡಿಗಳಲ್ಲಿ (ನೆಗೆಟಿವ್‌ ವರದಿ ಕಡ್ಡಾಯ) ಮಾತ್ರ ಪ್ರವೇಶಿಸಲು ಜಿಲ್ಲಾಡಳಿತ ಅವಕಾಶ ನೀಡಿದೆ.

ಇನ್ನು, ಮುಂದೆ ಕೇರಳದಿಂದ ಕರ್ನಾಟಕಕ್ಕೆ ಬರುವವರು “ಕೊರೊನಾ ನೆಗೆಟಿವ್‌’ ವರದಿ ತರುವುದು ಕಡ್ಡಾಯ. ಇದಕ್ಕಾಗಿ ಫೆ. 22ರಿಂದ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಯಲಿದೆ. ಇದೇ ಕಾರಣಕ್ಕೆ ಚೆಕ್‌ಪೋಸ್ಟ್‌ಗಳಲ್ಲಿ ಆರೋಗ್ಯ ಇಲಾಖೆಯ 2 ತಂಡಗಳು ಕಾರ್ಯನಿರ್ವಹಿಸಲಿವೆ. ಕೇರಳ ಭಾಗದಿಂದ ಉದ್ಯೋಗಕ್ಕೆಂದು ದ.ಕ. ಜಿಲ್ಲೆಗೆ ದಿನನಿತ್ಯ ಬಂದು ಹೋಗುವವರು ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಬೇಕು.

ಫೆ. 22ರಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 1ರಿಂದ ಸಂಜೆ 5ರ ವರೆಗೆ ಲ್ಯಾಬ್‌ ಟೆಕ್ನಿಶನ್‌, ಆರೋಗ್ಯ ಇಲಾಖೆ ಅಧಿಕಾರಿಗಳು ಕೇರಳದಿಂದ ಬರುವ ನೆಗೆಟಿವ್‌ ಪ್ರಮಾಣ ಪತ್ರ ಹೊಂದಿರದ ಪ್ರಯಾಣಿಕರಿಗೆ ರ್ಯಾಟ್‌, ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಲಿದ್ದಾರೆ. ಆದರೆ ಕರ್ನಾಟಕಕ್ಕೆ ಪ್ರವೇಶಿಸಲು ವರದಿ ಬರುವಲ್ಲಿವರೆಗೆ ಕಾಯುವುದು ಅನಿವಾರ್ಯ. ಪೊಲೀಸ್‌ ಇಲಾಖೆಯಿಂದ ಮೂರು ಪಾಳಿಯಲ್ಲಿ ತಲಾ ಎರಡು ಸಿಬಂದಿ ತಂಡವನ್ನು ನಿಯೋಜಿಸಿ ಕಚೇರಿಗೆ ವರದಿ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಬಸ್‌ ಪ್ರಯಾಣಿಕರ ಗಮನಕ್ಕೆ
ಕೇರಳದಿಂದ ಬಸ್‌ಗಳ ಮೂಲಕ ಪ್ರಯಾಣಿಸುವವರು 72 ಗಂಟೆಗಳ ಒಳಗೆ ನಡೆಸಲಾದ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರುವ ಬಗ್ಗೆ ಖಚಿತಗೊಳಿಸಿದ ಬಳಿಕವೇ ಬಸ್‌ಗಳಲ್ಲಿ ಪ್ರಯಾಣಿಸಲು ಅನುವು ಮಾಡಲು ಆಯಾ ಬಸ್‌ಗಳ ನಿರ್ವಾಹಕರು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ಈಗಾಗಲೇ ನಿರ್ದೇಶನ ನೀಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ತಪಾಸಣೆ
ಕೆಲವು ಕಡೆಗಳಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿರುವ ಪರಿಣಾಮ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸುವ ಕಾರ್ಯ ಫೆ. 22ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ.
ಪ್ರಯಾಣಿಕರು ನೆಗೆಟಿವ್‌ ವರದಿಯನ್ನು ತಂದು ಬರಬೇಕು. ಜತೆಗೆ ಮಂಗಳೂರಿಗೆ ಬಂದ ಬಳಿಕ ಕೂಡ ಪರೀಕ್ಷೆ ನಡೆಸಬೇಕಿದೆ.

ಕೊರೊನಾ ಎಚ್ಚರಿಕೆ ಅಗತ್ಯ
ದ.ಕ. ಜಿಲ್ಲೆಯಲ್ಲಿ ಕೊರೊನಾ ಸ್ವಲ್ಪಮಟ್ಟಿ ನಲ್ಲಿ ನಿಯಂತ್ರಣ ದಲ್ಲಿದೆ ಯಾದರೂ ಮೈಮರೆಯುವಂತಿಲ್ಲ. ಆದರೂ ನಗರದಲ್ಲಿ ಬಹುತೇಕ ಮಂದಿ ಮಾಸ್ಕ್ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ. ಬಹುತೇಕ ಬಸ್‌ಗಳಲ್ಲಿ, ಹೊಟೇಲ್‌, ಸಭೆ, ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಸಹಿತ ಕೊರೊನಾ ಮಾರ್ಗಸೂಚಿ ಸಮರ್ಪಕವಾಗಿ ಪಾಲನೆ ಯಾಗುತ್ತಿಲ್ಲ. ರಾಜ್ಯಕ್ಕೆ ಕೊರೊನಾ ಎರಡನೇ ಅಲೆಯ ಆತಂಕವಿದ್ದು, ಸ್ವಯಂ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.