ಹೈಕಮಾಂಡ್ ಬುಲಾವ್; ಡಿ.ಕೆ.ಶಿವಕುಮಾರ್ ದಿಲ್ಲಿಗೆ
Team Udayavani, Mar 12, 2022, 11:35 PM IST
ಬೆಂಗಳೂರು: ಪಂಚರಾಜ್ಯಗಳ ಫಲಿತಾಂಶದ ಹಿನ್ನೆಲೆಯಲ್ಲಿ ಆತ್ಮಾವಲೋಕನ ಬೆನ್ನಲ್ಲೇ ಹೈಕಮಾಂಡ್ ಬುಲಾವ್ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಿಲ್ಲಿಗೆ ತೆರಳಿದ್ದಾರೆ.
ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯನ್ನು ಡಿ.ಕೆ.ಶಿವಕುಮಾರ್ ಅವರು ದಿಲ್ಲಿಗೆ ಕೊಂಡೊಯ್ದಿದ್ದು ಹೈಕಮಾಂಡ್ ಒಪ್ಪಿಗೆ ಪಡೆಯಲಿದ್ದಾರೆ.
ಬಹುತೇಕ ಮುಂದಿನ ವಾರ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ. ಅವಕಾಶ ಸಿಕ್ಕರೆ ಸೋನಿಯಾ, ರಾಹುಲ್ ಸೇರಿ ವರಿಷ್ಠರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಯುಪಿಯಲ್ಲಿ ಹೀನಾಯ ಸೋಲು: ಮಾಧ್ಯಮಗಳ ಮುಂದೆ ಬರಲ್ಲ ಎಂದ ಮಾಯಾವತಿ