ಸಿಇಟಿ ಮೇಲ್ಮನವಿ: ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
Team Udayavani, Sep 15, 2022, 9:58 PM IST
ಬೆಂಗಳೂರು: 2022ನೇ ಸಾಲಿನ ಸಿಇಟಿ ರ್ಯಾಂಕ್ ಪ್ರಕಟಿಸಲು 2021ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ಅಭ್ಯರ್ಥಿಗಳ ಅಂಕಗಳನ್ನು ಪರಿಗಣಿಸಬೇಕೆಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿತು.
ಏಕಸದಸ್ಯ ನ್ಯಾಯಪೀಠ ಸಲ್ಲಿಸಿರುವ ಮೇಲ್ಮನವಿಯು ಹಂಗಾಮಿ ಮುಖ್ಯ ನ್ಯಾ| ಆಲೋಕ್ ಆರಾಧೆ ಹಾಗೂ ನ್ಯಾ| ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಮೇಲ್ಮನವಿಗೆ ಸಂಬಂಧಿಸಿದಂತೆ ಕೆಲವು ಕೋರ್ಟ್ ಕಚೇರಿ ಆಕ್ಷೇಪಣೆಗಳಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.19(ಸೋಮವಾರ)ಕ್ಕೆ ಮುಂದೂಡಿತು.
2020-21ನೇ ಸಾಲಿನ ಪಿಯುಸಿ ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ತಿಳಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜು.30ರಂದು ಹೊರಡಿಸಿದ್ದ ಟಿಪ್ಪಣಿ ಪ್ರಶ್ನಿಸಿ 40ಕ್ಕೂ ಅಧಿಕ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಸೆ.3ರಂದು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠ, ಕೆಇಎ ಹೊರಡಿಸಿದ್ದ ಟಿಪ್ಪಣಿ ರದ್ದುಪಡಿಸಿತ್ತಲ್ಲದೆ, ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಹಾಗೂ ಸಿಇಟಿಯ ತಲಾ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಪ್ರಾಧಿಕಾರಕ್ಕೆ ಆದೇಶಿಸಿತ್ತು. ಈ ತೀರ್ಪು ರದ್ದುಪಡಿಸುವಂತೆ ಕೋರಿ ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್