ತಜ್ಞರ ಸಮಿತಿ ರಚನೆ ಆದೇಶಕ್ಕೆ ಹೈಕೋರ್ಟ್ ನಕಾರ
ಕೋವಿಡ್-19 ನಿರ್ವಹಣೆ ಮೇಲ್ವಿಚಾರಣೆ
Team Udayavani, May 3, 2020, 5:35 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ನಿರ್ವಹಣೆಗಾಗಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಮೇಲ್ವಿಚಾರಣೆಗೆ ತಜ್ಞರ ಸಮಿತಿ ರಚಿಸುವ ಸಂಬಂಧ ಆದೇಶ ನೀಡಲು ನಿರಾಕರಿಸಿರುವ ಹೈಕೋರ್ಟ್, ಈ ವಿಚಾರದಲ್ಲಿ ಅಗತ್ಯ ಸಲಹೆ ನೀಡಲು ತಜ್ಞರು ಯಾರಾದರೂ ಸ್ವಯಂಪ್ರೇರಿತವಾಗಿ ಮುಂದೆ ಬಂದರೆ ಅವರ ಸಲಹೆಯನ್ನು ಸರಕಾರ ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದೆ.
ಧಾರವಾಡದ ಎ-ಫೋರಂ ಸಲ್ಲಿಸಿದ್ದ ಪಿಐಎಲ್ನ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.ಕೋವಿಡ್-19 ಹರಡುವಿಕೆ ತಡೆಗೆ ದೀರ್ಘಕಾಲಿಕ ಪರಿಹಾರ ಕಂಡುಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಗತ್ಯ ಸಂಶೋಧನೆ ನಡೆಸುತ್ತಿದ್ದು, ಈ ವಿಚಾರದಲ್ಲಿ ಸರಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಹೇಳಲು ಸಾಧ್ಯ
ವಿಲ್ಲ. ಈ ಹಂತದಲ್ಲಿ ತಜ್ಞರ ಸಮಿತಿ ರಚನೆ ಮಾಡಿದರೆ ಸರಕಾರದ ಕಾರ್ಯಗಳಿಗೆ ಅಡ್ಡಿಪಡಿಸಿದಂತಾಗುತ್ತದೆ. ಸರಕಾರ ಕಾಲಕಾಲಕ್ಕೆ ಕೈಗೊಂಡಿರುವ ಕ್ರಮಗಳಲ್ಲಿ ಮಧ್ಯ ಪ್ರವೇಶ ಮಾಡಿದಂತಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿತು.
ಹೆಚ್ಚವರಿ ಪ್ರಯೋಗಾಲಯ ಸ್ಥಾಪನೆ ಮತ್ತು ತಜ್ಞರ ಬಳಕೆ ಸಂಬಂಧ ಅರ್ಜಿದಾರರು ಒಪ್ಪಬಹುದಾದ ಸಲಹೆಗಳನ್ನು ನೀಡಿದ್ದರೆ ಸರಕಾರಗಳು ಪರಿಗಣಿಸಬಹುದು. ಜತೆಗೆ ಕೋವಿಡ್-19 ಪ್ರಕರಣಗಳ ಸಂಬಂಧ ಅಗತ್ಯ ಸಲಹೆ ನೀಡಲು ತಜ್ಞರು ಸ್ವಯಂಪ್ರೇರಿತವಾಗಿ ಮುಂದೆ ಬಂದರೆ ಅವರ ಸಲಹೆಯನ್ನು ಸರಕಾರ ಅದನ್ನು ಪರಿಗಣಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ ಅರ್ಜಿ ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ