ಹಿಜಾಬ್ ಸಂಘರ್ಷ: ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ
Team Udayavani, Feb 20, 2022, 2:11 PM IST
ಬೆಳಗಾವಿ: ಇಲ್ಲಿಯ ಸದಾಶಿವ ನಗರದ ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿವರೆಗೆ ರಜೆ ನೀಡಲಾಗಿದೆ. ಈ ಬಗ್ಗೆ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಪಾಟೀಲ, ಹಿಜಾಬ್ ಧರಿಸಿಕೊಂಡು ವಿದ್ಯಾರ್ಥಿನಿಯರು ಬರುತ್ತಿದ್ದಾರೆ. ಹೈಕೋರ್ಟ್ ಮಧ್ಯಂತರ ತೀರ್ಪು ಪಾಲನೆ ಮಾಡಬೇಕಾದ ಅಗತ್ಯವಿದೆ. ಹೀಗಾಗಿ ಅನಿರ್ದಿಷ್ಟಾವಧಿವರೆಗೆ ರಜೆ ನೀಡಲಾ ಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಕೆಲ ದಿನಗಳ ನಂತರ ಎಂದಿನಂತೆ ತರಗತಿಗಳು ಆರಂಭವಾಗಲಿವೆ. ಸದ್ಯಕ್ಕೆ ಆನ್ಲೈನ್ ಕ್ಲಾಸ್ಗಳು ಇಲ್ಲ. ಕಾಲೇಜು ಮರಳಿ ಆರಂಭವಾದ ಬಳಿಕ ಹೆಚ್ಚುವರಿ ಕ್ಲಾಸ್ಗಳನ್ನು ತೆಗೆದುಕೊಳ್ಳಲಾಗುವುದು. ಯಾವುದೇ ಮಕ್ಕಳಿಗೂ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ರಜೆ ನೀಡಲಾಗಿದೆ ಎಂದು ತಿಳಿಸಿದರು.
ಮನವೊಲಿಕೆ ಯತ್ನ ವಿಫಲ: ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ದಿನದಿಂದ ದಿನಕ್ಕೆ ಹಿಜಾಬ್ ಸಂಘರ್ಷ ಹೆಚ್ಚಾಗುತ್ತಿದ್ದು, ಶನಿವಾರವೂ ವಿದ್ಯಾರ್ಥಿನಿಯರು ಬುರ್ಖಾ ಹಾಗೂ
ಹಿಜಾಬ್ ಧರಿಸಿಕೊಂಡು ಬಂದಿದ್ದರು. ಈ ವೇಳೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ವಿದ್ಯಾರ್ಥಿನಿಯರನ್ನು ಮನವೊಲಿಸಲು ಯತ್ನಿಸಿದರು. ಆದರೆ ವಿದ್ಯಾರ್ಥಿನಿಯರು ಪಟ್ಟು ಸಡಿಲಿಸಲಿಲ್ಲ. ನಂತರ ಕಾಲೇಜು ಹೊರಗೆ ಬಂದು 12 ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಎರಡು ದಿನಗಳಿಂದ ಬೇರೆಯವರಿಗೆ ತರಗತಿಗಳು ನಡೆದಿವೆ. ನಾವು ತರಗತಿಗೆ ಹಾಜರಾಗಿಲ್ಲ. ನಮಗೆ ತೊಂದರೆ ಆಗುತ್ತಿದೆ ಹೊರತು ಅನ್ಯ ವಿದ್ಯಾರ್ಥಿನಿಯರಿಗಲ್ಲ. ಟಿಕ್ಟಾಕ್, ಇನ್ಸ್ಟಾಗ್ರಾಂ ರೀಲ್ಸ್ ಮಾಡುವಾಗ ಹಿಜಾಬ್ ತೆಗೆಯುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಹಪಾಠಿಗಳನ್ನು ವಿಚಾರಿಸಲು ವಿದ್ಯಾರ್ಥಿನಿಯರು ಗೇಟ್ ಬಳಿ ನಿಂತಿದ್ದರು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆ ಪ್ರಾಚಾರ್ಯರು ರಜೆ ನೀಡಿದ್ದಾರೆ. ಪ್ರಾಚಾರ್ಯರು ರಜೆ ಘೋಷಿಸುತ್ತಿದ್ದಂತೆ ಪ್ರತಿಭಟನಾನಿರತ ವಿದ್ಯಾರ್ಥಿನಿಯರು, ಲಿಖೀತ ಆದೇಶ
ನೀಡಬೇಕು. ಮೊನ್ನೆ ರಜೆ ಎಂದು ಘೋಷಿಸಿ ಬೇರೆಯವರಿಗೆ ತರಗತಿ ತೆಗೆದುಕೊಂಡಿದ್ದಾರೆ. ಈಗ ನಮಗೆ ಲಿಖೀತ ಆದೇಶ ನೀಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹಾಗೂ ಬೇರೆಯ ವರು ಕಾಲೇಜು ಬಳಿ ಬಾರದಂತೆ ತಡೆಯಲು ಪೊಲೀ ಸರು ನಿಗಾ ಇಟ್ಟಿದ್ದಾರೆ. ನಾಲ್ವರು ಮಹಿಳಾ ಪೇದೆ ಸೇರಿ 10 ಜನ ಪೊಲೀಸರು ಸ್ಥಳದಲ್ಲಿ ಭದ್ರತೆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ