ಹಿಂದೂಗಳ ಧ್ವನಿ ಹತ್ತಿಕ್ಕಲಾಗದು: ಡಾ| ಭರತ್ ಶೆಟ್ಟಿ
Team Udayavani, Aug 6, 2023, 12:19 AM IST
ಸುರತ್ಕಲ್: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸು ತ್ತಿದೆ. ಆದರೆ ಇದು ಸಾಧ್ಯವಿಲ್ಲ. ಅನ್ಯಾಯ, ದೌರ್ಜನ್ಯದ ವಿರುದ್ಧ ಹಿಂದೂ ಸಮಾಜ ಎದ್ದು ನಿಂತರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಯ ವಾರಂಟಿ ಶೀಘ್ರ ಕೊನೆಗೊಂಡರೂ ಅಚ್ಚರಿಯಿಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ಉಡುಪಿಯ ಹಿಂದೂ ವಿದ್ಯಾ ರ್ಥಿನಿಯರ ವೀಡಿಯೋ ಚಿತ್ರೀ ಕರಣ ಪ್ರಕರಣದ ವಿರುದ್ಧ ಧ್ವನಿ ಎತ್ತಿರುವ ಮುಖಂಡ ಶರಣ್ ಪಂಪ್ವೆಲ್, ದಿನೇಶ್ ಮೆಂಡನ್, ವೀಣಾ ಶೆಟ್ಟಿ ಸೇರಿದಂತೆ ಹಲವರ ಮೇಲೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂ ಡಿದೆ. ಒತ್ತಡ ಹೇರಿ ಪೊಲೀಸ್ ಇಲಾಖೆಯನ್ನು ಸರಕಾರ ದುರ್ಬ ಳಕೆ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.