ಲಾಕ್‌ಡೌನ್‌ ಮಧ್ಯೆಯೂ ಇವರ ಬೆಳೆಗೆ ಬೆಲೆ ಸಿಕ್ಕಿತು!

ಕೈಹಿಡಿದ ಗ್ರಾಹಕರು; ರೈತಸೇತುವಿನಿಂದಾಗಿ ನಿರುಮ್ಮಳ

Team Udayavani, Apr 16, 2020, 6:36 AM IST

ಲಾಕ್‌ಡೌನ್‌ ಮಧ್ಯೆಯೂ ಇವರ ಬೆಳೆಗೆ ಬೆಲೆ ಸಿಕ್ಕಿತು!

ಮಂಗಳೂರು/ ಉಡುಪಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳ ಮಾರಾಟಕ್ಕೆ ಅನುಕೂಲವಾಗುವಂತೆ ರೈತ ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಲು “ಉದಯವಾಣಿ’ ಆರಂಭಿಸಿದ “ರೈತಸೇತು’ ಅಂಕಣಕ್ಕೆ ಸಾಕಷ್ಟು ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಈ ಅಂಕಣವು ಹಲವು ರೀತಿಯಲ್ಲಿ ಬೆಳೆ ಗಾರರಿಗೂ ಮತ್ತು ಗ್ರಾಹಕರಿಗೂ ಸಂಪರ್ಕ ಕಲ್ಪಿಸುತ್ತಿದೆ. ಇದುವರೆಗೆ ಬೆಳೆಗಾರ ನಿರ್ದಿಷ್ಟ ಗ್ರಾಹಕ, ವ್ಯಾಪಾರಿಯನ್ನೇ ಅವಲಂಬಿಸಬೇಕಿತ್ತು. ಆದರೆ ಈಗ ಸಾಕಷ್ಟು ಗ್ರಾಹಕರು ದೂರವಾಣಿ ಕರೆ ಮಾಡುತ್ತಿರುವುದರಿಂದ ರೈತರಿಗೆ ಆಯ್ಕೆಗೆ ಅವಕಾಶ ಸಿಗುತ್ತಿದೆ.

ಮಂಗಳೂರಿನ ಮೇರಿಹಿಲ್‌ ಸಚಿನ್‌ ಖಾಸಗಿ ಕಂಪೆನಿ ಉದ್ಯೋಗಿ. ತಮ್ಮ ಮನೆಯ ಸುತ್ತಲೂ 60 ತೆಂಗಿನಮರಗಳನ್ನು ಹಾಕಿಕೊಂಡು, ಪ್ರತಿ ವರ್ಷವೂ ತೆಂಗಿನಕಾಯಿಗಳನ್ನು ಹತ್ತಿರದ ಮಾರುಕಟ್ಟೆಯಲ್ಲಿ ಮಾರುತ್ತಿದ್ದರು. ಈ ಬಾರಿ ಲಾಕ್‌ಡೌನ್‌ ಕಾರಣದಿಂದ ಅದು ಸಾಧ್ಯವಾಗಲಿಲ್ಲ. ಸುಮಾರು 1,600 ತೆಂಗಿನ ಕಾಯಿಗಳನ್ನು ಮಾರುವ ಬಗ್ಗೆ ಯೋಚಿಸುತ್ತಿದ್ದರು. ಈ ಸಂದರ್ಭದಲ್ಲಿ ರೈತಸೇತುವಿಗೆ ಮಾಹಿತಿ ಕಳಿಸಿ ಎ. 9 ರಂದು ಪ್ರಕಟವಾಯಿತು. ಆ ಬೆನ್ನಲ್ಲೆ ಹಲವಾರು ಮಂದಿ ದೂರವಾಣಿ ಕರೆ ಮಾಡಿ ಚರ್ಚಿಸಿ ಖರೀದಿಸಿ ದರು. ಇದುವರೆಗೆ ಸುಮಾರು 800ಕ್ಕೂ ಹೆಚ್ಚು ತೆಂಗಿನಕಾಯಿಗಳು ಮಾರಾಟವಾಗಿವೆ.

ಮಾರಾಟ ಸುಲಭ
ಸಚಿನ್‌ ಅವರಿಗೆ ಮಾಹಿತಿಗಾಗಿ ವಿವಿಧ ಭಾಗಗಳಿಂದ ಕರೆಗಳು ಬರುತ್ತಿವೆ. ಅಲ್ಲದೆ, ಹತ್ತಿರದ ಮನೆ ಮಂದಿಯೂ ತೆಂಗಿನಕಾಯಿ ಖರೀದಿ ಮಾಡುತ್ತಿದ್ದಾರೆ. ತೆಂಗಿನಕಾಯಿಯನ್ನು ಗ್ರಾಹಕರ ಆಯ್ಕೆಯಂತೆ ಸುಲಿದು ಮತ್ತು ಸುಲಿಯದೆ ನೀಡುತ್ತಿದ್ದಾರೆ.

ಕೈಹಿಡಿದ ಗ್ರಾಹಕರು
ಇದೇ ರೀತಿಯ ಅನುಭವ ಉಡುಪಿ ಕಿನ್ನಿಮೂಲ್ಕಿಯ ಎ. ಡಿ’ಸಿಲ್ವಾ ಅವರದ್ದು. ತಮ್ಮ 25 ಸೆಂಟ್ಸ್‌ ಜಾಗದಲ್ಲಿ 30ರಿಂದ 40 ತೆಂಗಿನ ಮರ ಗಳನ್ನು ಹಾಕಿಕೊಂಡಿರುವ ಇವರು, ನಗರದ ಸಗಟು ವ್ಯಾಪಾರಿಗಳಿಗೆ ಮಾರುತ್ತಿದ್ದರು. ಲಾಕ್‌ಡೌನ್‌ ಕಾರಣದಿಂದ ಈ ಬಾರಿ ಅದು ಸಾಧ್ಯವಾಗಲಿಲ್ಲ. ಸುಮಾರು 400 ತೆಂಗಿನಕಾಯಿಗಳನ್ನು ಮಾರಾಟ ಮಾಡಲು ಮಾರ್ಗ ಹುಡುಕುತ್ತಿದ್ದರು. ಯಾವುದಕ್ಕೂ ಇರಲಿ ಎಂದು ರೈತಸೇತು ಅಂಕಣಕ್ಕೆ ಮಾಹಿತಿ ಕಳಿಸಿದರು. ಅದು ಎ. 12ರಂದು ಪ್ರಕಟವಾಯಿತು. ಪ್ರಕಟವಾದ ಬೆನ್ನಲ್ಲೇ ಹಲವಾರು ದೂರವಾಣಿ ಕರೆಗಳು ಬಂದವು. ಹಿರಿಯಡ್ಕದ ಒರ್ವ ಗ್ರಾಹಕರು ಎಲ್ಲ ತೆಂಗಿನಕಾಯಿಗಳನ್ನು ಖರೀದಿಸಿದ್ದಾರೆ.

ಅನುಕೂಲವಾಗಿದೆ
ನನಗೆ ಇದರಿಂದ ಅನುಕೂಲವಾಗಿದೆ. ಹಿಂದಿಗಿಂತ ಹೆಚ್ಚಿನ ದರ ಸಿಕ್ಕಿದೆ. 50ಕ್ಕೂ ಹೆಚ್ಚು ಮಂದಿ ಕರೆಮಾಡಿ ವಿಚಾರಿಸಿದ್ದರು. ರೈತಸೇತು ಅಂಕಣದಿಂದ ತುಂಬಾ ಸಹಾಯವಾಗಿದ್ದು, ಬೆಳೆಗಾರರು ತಮ್ಮ ಬೆಳೆಯ ಮೊತ್ತವನ್ನು ನಿಗದಿ ಮಾಡಲು ಸಾಧ್ಯವಾಗಲಿದೆ.
-ಎ. ಡಿ’ಸಿಲ್ವಾ ತೆಂಗು ಬೆಳೆಗಾರರು

ಮತ್ತಷ್ಟು ಬೇಡಿಕೆ
ತೆಂಗಿನಕಾಯಿಗಳನ್ನು ಹೇಗೆ ಮಾರಾಟ ಮಾಡುವುದೆಂಬ ಯೋಚನೆಯಲ್ಲಿದ್ದೆ. ಅದು ಬಗೆಹರಿದಿದೆ. ರೈತಸೇತು ಅಂಕಣದಿಂದ ಅನುಕೂಲವಾಗಿದ್ದು, ಶೇ. 50ರಷ್ಟು ತೆಂಗಿನಕಾಯಿ ಮಾರಾಟವಾಗಿದೆ. ಮತ್ತಷ್ಟು ಬೇಡಿಕೆ ಬರುತ್ತಿದೆ.
-ಸಚಿನ್‌ ತೆಂಗು ಬೆಳೆಗಾರರು

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ : 76187 74529

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.