ಮಹಾರಾಷ್ಟ್ರ ಉಸ್ತುವಾರಿ ಯಶಸ್ವಿಯಾಗಿ ನಿಭಾಯಿಸುವೆ : ಎಚ್‌.ಕೆ. ಪಾಟೀಲ್‌


Team Udayavani, Sep 13, 2020, 3:27 PM IST

ಮಹಾರಾಷ್ಟ್ರ ಉಸ್ತುವಾರಿ ಯಶಸ್ವಿಯಾಗಿ ನಿಭಾಯಿಸುವೆ : ಎಚ್‌.ಕೆ. ಪಾಟೀಲ್‌

ಬೆಂಗಳೂರು: ಪಕ್ಷದ ಹೈಕಮಾಂಡ್‌ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಯಶಸ್ವಿಯಾಗಿ ನಿಭಾಯಿಸುವೆ ಎಂದು ಎಐಸಿಸಿ ನೂತನ ಮಹಾರಾಷ್ಟ್ರ ಉಸ್ತುವಾರಿ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ರಾಷ್ಟ್ರೀಯ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಹಾರಾಷ್ಟ್ರ ಉಸ್ತುವಾರಿ ಹುದ್ದೆ ತಮಗೆ ನೀಡಿರುವುದಕ್ಕೆ ಪಕ್ಷದ ನಾಯಕರಿಗೆ ಅಭಿನಂದನೆಗಳು.
ಪಕ್ಷ ಗಟ್ಟಿಗೊಳಿಸಲು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಮಾರ್ಗದರ್ಶನವಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ದೊಡ್ಡ ರಾಜ್ಯವಷ್ಟೇ ಅಲ್ಲ, ರಾಜಕೀಯವಾಗಿ ದೇಶದಲ್ಲಿಯೇ ಮಹತ್ವದ ರಾಜ್ಯವಾಗಿದೆ.ಮಹಾರಾಷ್ಟ್ರದಲ್ಲಿ ಸಾಕಷ್ಟು ಸವಾಲುಗಳಿವೆ. ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗತವೈಭವ ಸ್ಥಾಪಿಸಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಎಐಸಿಸಿಯಲ್ಲಿ ರಾಜ್ಯಕ್ಕೆ ಹೆಚ್ಚು ಮಹತ್ವ ಸಿಕ್ಕಿದೆ.

ಕರ್ನಾಟಕದ ಐವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಸಿಕ್ಕಿದೆ. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್‌ಗೆ ಬಂದು ಪಕ್ಷದಲ್ಲಿ ಹಲವು ಸ್ಥಾನಮಾನಗಳನ್ನು ಪಡೆದಿರುವ ನನಗೆ ಮಹಾರಾಷ್ಟ್ರದ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅಲ್ಲಿ ಉಸ್ತುವಾರಿಯಾಗಿದ್ದರು. ಹೀಗಾಗಿ ಅದರ ಲಾಭವೂ ಸಿಗಲಿದೆ. ಖರ್ಗೆಯವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುವುದಾಗಿ ಹೇಳಿದರು.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಡ್ರಗ್‌ ಮಾಫಿಯಾದಲ್ಲಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಆರೋಪವನ್ನು ತಳ್ಳಿಹಾಕಿದ ಅವರು, ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧದ ಆರೋಪ ಸಾಬೀತಾದರೆ ಪೂರ್ತಿ ಆಸ್ತಿಯನ್ನೇ ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ ಎಂದು ಜಮೀರ್‌ ಅಹಮದ್‌ ಖಾನರನ್ನು ಸಮರ್ಥಿಸಿಕೊಂಡರು.

ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಬಿಐಇಸಿಯನ್ನು ಮುಚ್ಚುವ ಪ್ರಯತ್ನ ಸರ್ಕಾರ ನಡೆಸಿದೆ.ಇದಕ್ಕೆ ತಾವೇ ಮೊದಲ ದೂರುದಾರನಾಗಿದ್ದು, ಸರ್ಕಾರದ ಕೊರೊನಾ ಹಗರಣ ವಿರುದ್ಧ ದೂರಿದ್ದೇನೆ.

ಕೊರೊನಾದಿಂದ ಮೃತಪಟ್ಟವರನ್ನು ಅಮಾನವೀಯವಾಗಿ ನಡೆದುಕೊಳ್ಳುವುದರ ವಿರುದ್ಧ ಮತ್ತು ಆಸ್ಪತ್ರೆಯಲ್ಲಿ ಕೊರೊನಾ
ಸೋಂಕಿತರೊಂದಿಗೆ ನಡೆದುಕೊಳ್ಳುತ್ತಿರುವ ದುರ್ವರ್ತನೆ ಖಂಡಿಸಿ ಮಾನವ ಹಕ್ಕುಗಳ ಆಯೋಗದ ಗಮನಕ್ಕೂ ತರಲಾಗಿದೆ.
ಕೊರೊನಾದಿಂದ ನಿಜವಾಗಿಯೂ ತಪಟ್ಟವರೆಷ್ಟು ಎಂಬ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಚುರುಕಾಗಿ ಕೆಲಸ ಮಾಡಬೇಕು. ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿಯೇ ಹೆಚ್ಚಾಗಿದೆ.

ರಾಜ್ಯ ಸರ್ಕಾರದ ಕೊರೊನಾ ಅಂಕಿ ಸಂಖ್ಯೆಗಳು ಕುತೂಹಲ ಮೂಡಿಸಿದೆ. ಶ್ವಾಸಕೋಶದ ಸಮಸ್ಯೆಗಳಿಂದಲೇ ಶೇ.8.5 ರಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಆದರೆ, ಸರ್ಕಾರದ ಈ ಅಂಕಿಅಂಶ ಸತ್ಯಕ್ಕೆ ದೂರವಾಗಿದ್ದು, ಸರ್ಕಾರ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.