ಮಕ್ಕಳಿಗೆ ರಜೆಯ ಮಜಾ; ಜಿಲ್ಲೆಯ ಗ್ರಂಥಾಲಯಗಳಲ್ಲಿ ಡಿಜಿಟಲ್ ಜ್ಞಾನ
Team Udayavani, May 28, 2023, 3:34 PM IST
ಉಡುಪಿ: ವಿದ್ಯಾರ್ಥಿಗಳು ರಜೆಯನ್ನು ಮಜಾದಿಂದ ಕಳೆಯಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಬೇಸಗೆ ಶಿಬಿರವನ್ನು ಆಯ್ದ ಗ್ರಾ.ಪಂ. ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಡಿಜಿಟಲ್ ಜ್ಞಾನ ನೀಡುವ ಜತೆಗೆ ಸಾಂಸ್ಕೃತಿಕ, ರಂಗೋಲಿ ಸ್ಪರ್ಧೆ, ವ್ಯಕ್ತಿತ್ವ ವಿಕಸನ ನಾಯಕತ್ವ ರೂಢಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.
ಗ್ರಾಮ ಡಿಜಿ ವಿಕಸನ ಕಾರ್ಯಕ್ರಮವನ್ನು ಶಿಕ್ಷಣ ಫೌಂಡೇಶನ್ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಹಭಾಗಿತ್ವದಲ್ಲಿ ಮತ್ತು ಡೆಲ್ ಸಂಸ್ಥೆಯ ಸಹಯೋಗದೊಂದಿಗೆ ಉಡುಪಿ ಜಿÇÉೆಯಲ್ಲಿ 40 ಗ್ರಾ.ಪಂ. ಮಟ್ಟದ ಗ್ರಂಥಾಲಯದ ಮೂಲಕ ಪ್ರಾಯೋಗಿಕವಾಗಿ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ.
ಮೊದಲ ಹಂತದಲ್ಲಿ 22 ಗ್ರಾ.ಪಂ.ನ ಗ್ರಂಥಾಲಯ ಗಳು ಆಯ್ಕೆಯಾಗಿವೆ. ಎರಡನೇ ಹಂತದಲ್ಲಿ 16 ಗ್ರಾ.ಪಂ.ಆಯ್ಕೆಯಾಗಿವೆ. ಮೊದಲ ಹಂತದಲ್ಲಿ ಆಯ್ಕೆಯಾದ ಗ್ರಾ.ಪಂ.ಗಳಲ್ಲಿ ಎರಡು ಗ್ರಾ.ಪಂ. ಗ್ರಂಥಾಲಯಗಳನ್ನು ಆಯ್ಕೆ ಮಾಡಿ ಶಿಕ್ಷಣ ಯುವ ಕೌಶಲ ತರಬೇತಿ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ.
ಸಂಖ್ಯೆ ಹೆಚ್ಚಳ
ಡಿವೈಸ್ಗಳನ್ನು ನೀಡಿದ್ದರಿಂದ ಗ್ರಂಥಾಲಯಕ್ಕೆ ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಗ್ರಂಥಪಾಲಕರು ಗ್ರಂಥಾಲಯಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹಲವಾರು ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ಮಾಡುತ್ತಾ ಪುಸ್ತಕಗಳ ಪ್ರಾಮುಖ್ಯತೆಯನ್ನು ಕೂಡ ತಿಳಿಸಲಾಗುತ್ತಿದೆ. ಶಿಕ್ಷಣ ಫೌಂಡೇಶನ್ ನೀಡಿರುವ ಡಿವೈಸ್ಗಳಲ್ಲಿ sikshanapedia Appಗಳನ್ನು ಹಾಕಲಾಗಿದೆ ಎನ್ನುತ್ತಾರೆ ಸಂಯೋಜಕಿ ಆಶಾ ಶೆಟ್ಟಿ.
ವಿವಿಧ ಸೌಲಭ್ಯ
ಜಿಲ್ಲೆಯಲ್ಲಿ ಆಯ್ಕೆಯಾದ ಗ್ರಾ.ಪಂ. ಗ್ರಂಥಾಲಯಗಳಿಗೆ ಡಿಜಿಟಲ್ ಸ್ಪರ್ಶ ನೀಡುವ ಉದ್ದೇಶದಿಂದ ಸ್ಮಾರ್ಟ್ ಟಿವಿ ಹಾಗೂ 4 ಆ್ಯಂಡ್ರಾಯ್ಡ ಸ್ಮಾಟ್ಫೋನ್ಗಳನ್ನು ನೀಡಲಾಗಿದೆ. ಈಗಾಗಲೇ 32 ಗ್ರಂಥಾಲಯಗಳಿಗೆ ಡಿವೈಸ್ಗಳನ್ನು ನೀಡಲಾಗಿದೆ. ಉಳಿದ 6 ಗ್ರಂಥಾಲಯಗಳಿಗೆ ಡೆಲ್ ಸಂಸ್ಥೆ ಕಡೆಯಿಂದ ಮೊನಿಟರ್ ಹಾಗೂ ಕ್ರೋಮ ಬುಕ್ ಗಳನ್ನೂ ನೀಡಲಾಗುತ್ತಿದೆ.
ಗ್ರಾಮ ಡಿಜಿ ವಿಕಸನದಡಿಯಲ್ಲಿ ಉಡುಪಿ ಜಿಲ್ಲೆ ಯಲ್ಲಿ ಇಲ್ಲಿಯವರೆಗೆ 38,539 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಜನವರಿಯಿಂದ ಮೇ ತಿಂಗಳವರೆಗೆ 154 ಡಿವೈಸ್ಗಳಿಂದ 5,933 ಗಂಟೆ ಶಿಕ್ಷಣ ಪೀಡಿಯ ಬಳಕೆಯಾಗಿದೆ. ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾ.ಪಂ.ಸಂಪೂರ್ಣ ಡಿಜಿಟಲ್ ಸಾಕ್ಷರತಾ ಅಭಿಯಾನಕ್ಕೆ ಆಯ್ಕೆಯಾಗಿದೆ. ಕೋಟತಟ್ಟು ಗ್ರಾ.ಪಂ.ವ್ಯಾಪ್ತಿಯ 16ರಿಂದ 60 ವರ್ಷದ ಎಲ್ಲ ಜನತೆಗೆ ಡಿಜಿಟಲ್ ಬಳಕೆ ಕುರಿತು ಮಾಹಿತಿ ನೀಡುವ ಯೋಜನೆ ಹಾಕಿಕೊಂಡಿದ್ದೇವೆ.
-ರೀನಾ ಎಸ್. ಹೆಗ್ಡೆ
ಜಿಲ್ಲಾ ಸಂಯೋಜಕರು, ಶಿಕ್ಷಣ ಫೌಂಡೇಶನ್
-ಪುನೀತ್ ಸಾಲ್ಯಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ