ವಸತಿ ರಹಿತರಿಗೆ ಮನೆ, ಕುಡಿಯುವ ನೀರಿಗೆ ಆದ್ಯತೆ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುತ್ತೇವೆ
ನಮ್ಮ ಕನಸಿನ ಕಾಪು ಪ್ರಣಾಳಿಕೆ ಬಿಡುಗಡೆಗೊಳಿಸಿ ವಿನಯ್ ಕುಮಾರ್ ಸೊರಕೆ ಘೋಷಣೆ
Team Udayavani, Apr 30, 2023, 3:50 PM IST
ಕಾಪು: ವಸತಿ ರಹಿತರಿಗೆ ಮನೆ, ಕುಡಿಯುವ ನೀರಿಗೆ ಆದ್ಯತೆ, ಕಾಪು ಕ್ಷೇತ್ರವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗೊಳಿಸುವುದು ನನ್ನ ಗುರಿಯಾಗಿದೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಕಾಪು ರಾಜೀವ ಭವನದಲ್ಲಿ ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಮುನ್ನೋಟ ನಮ್ಮ ಕನಸಿನ ಕಾಪು ಪ್ರಣಾಳಿಕೆ ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಕಾಪು ಕ್ಷೇತ್ರದಲ್ಲಿ ನಿವೇಶನ ರಹಿತ ಬಡವರಿಗೆ 10 ಸಾವಿರ ನಿವೇಶನ ನೀಡುವ ಸಂಕಲ್ಪದ ಗುರಿಯನ್ನು ಹೊಂದಿದ್ದೇನೆ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿರುವ ಕಾಪು ಕ್ಷೇತ್ರದಲ್ಲಿ ಟೂರಿಸಂ ಪಾರ್ಕ್ ನಿರ್ಮಾಣದ ಯೋಜನೆಯ ಜೊತೆಗೆ ಕಾಪು ಲೈಟ್ ಹೌಸ್ ನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ರಾಷ್ಟ್ರಕ್ಕೆ ಮಾದರಿಯಾಗಿ ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ ಹೊಸ ರೂಪ ನೀಡುವುದರ ಜೊತೆಗೆ ಕಾಪುವನ್ನು ಟೆಂಪಲ್ ಸಿಟಿಯನ್ನಾಗಿ ಮಾಡುವ ಗುರಿಯನ್ನು ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಹೆಜಮಾಡಿ ಶಾಂಭವಿ ನದಿ, ಕುರ್ಕಾಲುವಿನ ಪಾಪನಾಶಿನಿ, ಬೈರಂಪಳ್ಳಿ ಸ್ವರ್ಣನದಿಯಿಂದ ನೀರನ್ನೆತ್ತಿ ಶುಧ್ಧಿಕರಣಗೊಳಿಸಿ ಮನೆ ಮನೆಗೆ ನೀರನ್ನು ಒದಗಿಸುವ ಆದ್ಯತೆ ಯ ಯೋಜನೆಯನ್ನು ರೂಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾಪು ಕ್ಷೇತ್ರದಲ್ಲಿ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿದ್ದು, ವಿರೋಧ ಪಕ್ಷದ ತೀವ್ರ ವಿರೋಧದ ನಡುವೆಯೂ ಎಲ್ಲೂರಿನಲ್ಲಿ ಸ್ಥಾಪಿಸಿರುವ ಕಸ ವಿಲೇವಾರಿ ಘಟಕದ ಮೂಲಕ ಕಾಪುವಿನ ಸ್ವಚ್ಛ ಸಂಕಲ್ಪ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಸೊರಕೆ ಹೇಳಿದರು.
ಕಾಪು ಕ್ಷೇತ್ರದ ಮೀನುಗಾರರ ಡೀಸೆಲ್, ಸೀಮೆ ಎಣ್ಣೆ ಸಬ್ಸಿಡಿ ಹೆಚ್ಚಿಸುವುದರೊಂದಿಗೆ ಕಡಲು ಕೊರೆತಕ್ಕೆ ಶಾಶ್ವತ ತಡೆಗೋಡೆ ನಿರ್ಮಾಣ, ಮತ್ಸ್ಯಾಶ್ರಯ ಯೋಜನೆಗೆ ಚಾಲನೆ, ಹೆಜಮಾಡಿ ಬಂದರಿಗೆ ಕಾಯಕಲ್ಪ, ಕ್ಷೇತ್ರದಾದ್ಯಂತ ಹೈಟೆಕ್ ಮೀನು ಮಾರುಕಟ್ಟೆಗಳ ನಿರ್ಮಾಣ, ಎರ್ಮಾಳುವಿನಲ್ಲಿ ಜಟ್ಟಿ ನಿರ್ಮಾಣ, ಮತ್ಸ್ಯೋದ್ಯಮದೊಂದಿಗೆ ಪ್ರವಾಸೋದ್ಯಮ ಉತ್ತೇಜನ ನೀಡಲಾಗುವುದು.
ಧಾರ್ಮಿಕ ಕ್ಷೇತ್ರದಲ್ಲಿ ವಿವಿಧ ಧರ್ಮದ ಧಾರ್ಮಿಕ ಕೇಂದ್ರಗಳಾದ ಮಂದಿರ, ಮಸೀದಿ, ಚರ್ಚ್ಗಳ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಉತ್ತೇಜನ ನೀಡಲಾಗುವುದು ಎಂದು ಸೊರಕೆ ಹೇಳಿದರು.
ದಲಿತ ಶ್ರೇಯಾಭಿವೃದ್ಧಿ ಯೋಜನೆ:
ಕಾಪು ಕ್ಷೇತ್ರದಲ್ಲಿ, ದಲಿತ-ಸಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅಭಿವೃದ್ಧಿಗೆ ಹಲವಾರು ಯೋಜನೆಗಳೊಂದಿಗೆ ದಲಿತ ಕಾಲೋನಿಗಳ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾ, ಮೊರಾರ್ಜಿ ಶಾಲೆಗಳ ನಿರ್ಮಾಣ ನನ್ನ ಆಶಯವಾಗಿದೆ ಎಂದರು.
ಯುವಕರಿಗೆ ಉದ್ಯೋಗ ಉದ್ದಿಮೆ,ಬಹುಮಹಡಿ ವಸತಿ ಯೋಜನೆ, ಕ್ರೀಡಾಂಗಣ ನಿರ್ಮಾಣ, ಕಾಪು ಪುರಸಭಾ ವ್ಯಾಪ್ತಿಯಲ್ಲಿ 100 ಬೆಡ್ಡಿನ ಸುಸಜ್ಕಿತ ಆಸ್ಪತ್ರೆ ನಿರ್ಮಾಣ, ರೈತ ಸಂಜೀವಿನಿ ಯೋಜನೆ,ಮತ್ಸ್ಯಾಶ್ರಯ ಯೋಜನೆ, ದಲಿತರ ಶ್ರೇಯೋಭಿವ್ರದ್ಧಿ ಯೋಜನೆ, ಗ್ರಾಮದ ವ್ಯಾಪ್ತಿಯಲ್ಲಿ ಸಿ ಆರ್ ಝಡ್ ನಿಯಮ ಸಡಿಲಿಕೆ, ಸುಸಜ್ಜಿತ ಬಸ್ಸು ನಿಲ್ದಾಣ ದ ನಿರ್ಮಾಣ ಯೋಜನೆಯನ್ನು ಸಾಕಾರಗೊಳಿಸಲು, ಪಾರದರ್ಶಕ ಆಡಳಿತ ನಡೆಸಲು ಕಾಪು ಕ್ಷೇತ್ರ ಮತದಾರರು ಆಶೀರ್ವಾದ ಮಾಡಬೇಕಾಗಿದೆ ಎಂದು ಸೊರಕೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನವೀನ್ಚಂದ್ರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಪ್ರಶಾಂತ್ ಜತ್ತನ್ನ, ಶರ್ಪುದ್ದೀನ್ ಶೇಖ್, ಅಮೀರ್ ಕಾಪು, ದೇವರಾಜ್ ಕೋಟ್ಯಾನ್, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ