ಹೊರರಾಜ್ಯದವರಿಗೆ ಹೋಂ ಕ್ವಾರಂಟೈನ್‌, ವಿದೇಶದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ


Team Udayavani, Jun 11, 2020, 7:01 AM IST

ಹೊರರಾಜ್ಯದವರಿಗೆ ಹೋಂ ಕ್ವಾರಂಟೈನ್‌, ವಿದೇಶದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಉಡುಪಿ: ಇನ್ನು ಮುಂದೆ ಹೊರರಾಜ್ಯಗಳಿಂದ ಬರುವವರನ್ನು 14 ದಿನ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗುವುದು. ವಿದೇಶದಿಂದ ಬರುವವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಿ ಅವರ ಪರೀಕ್ಷಾ ವರದಿ ಬಂದ ಬಳಿಕ ಆಸ್ಪತ್ರೆಗೋ ಮನೆಗೋ ಎಂದು ತೀರ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹೊರರಾಜ್ಯದವರು ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದರೆ ಅದಾಗಿಯೇ ಮಾನ್ಯವಾಗುತ್ತದೆ. ಮಹಾರಾಷ್ಟ್ರದವರು ಅರ್ಜಿ ಸಲ್ಲಿಸಿದರೆ ಜಿಲ್ಲಾಧಿಕಾರಿ ಕಚೇರಿಯಿಂದ ಅನುಮತಿ ನೀಡಲಾಗುತ್ತದೆ. ಅವರು ಜಿಲ್ಲೆಗೆ ಪ್ರವೇಶಿಸುವಲ್ಲಿ ಆರೋಗ್ಯ ತಪಾಸಣೆ ಮಾಡಿ ಕೊರೊನಾ ಲಕ್ಷಣಗಳಿದ್ದರೆ ಚಿಕಿತ್ಸೆ ನೀಡಲಾಗುವುದು ಎಂದರು.

ನೆರೆಮನೆಯವರೂ ಹೊಣೆ
ಕ್ವಾರಂಟೈನ್‌ಗೆ ಒಳಪಟ್ಟವರ ಮನೆ ಹೊರಗೆ ಸ್ಟಿಕ್ಕರ್‌ ಅಂಟಿಸಲಾಗುತ್ತದೆ. ಅಕ್ಕಪಕ್ಕದ ಎರಡು ಮನೆಯವರಿಗೆ ಸೂಚನೆ ನೀಡಲಾಗುತ್ತದೆ. ಅವರು ಮನೆಯಿಂದ ಹೊರಗೆ ಬಂದರೆ ಪಕ್ಕದ ಮನೆಯವರು ಹೇಳಬೇಕು. ಅಂಥವರ ಮೇಲೆ ಎಫ್ಐಆರ್‌ ದಾಖಲಿಸಲಾಗುತ್ತದೆ. ಹೇಳದೆ ಇದ್ದರೆ ಅದು ಕೂಡ ಕಾಯಿದೆಯ ಉಲ್ಲಂಘನೆಯಾಗುತ್ತದೆ ಎಂದರು.

ಗ್ರಾಮೀಣ ಭಾಗದಲ್ಲಿ ಆಯಾ ಗ್ರಾ.ಪಂ.ಗೆ ಹೊಣೆ ವಹಿಸಿದ್ದು ಕಾರ್ಯಪಡೆ ನಿಗಾ ವಹಿಸಲಿದೆ. ನಗರ ಭಾಗದಲ್ಲಿ ವಾರ್ಡ್‌ವಾರು ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

ಉಡುಪಿಯಲ್ಲಿ ಮಾತ್ರ ರೈಲು ನಿಲುಗಡೆ
ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರೈಲು ಉಡುಪಿ ನಿಲ್ದಾಣದಲ್ಲಿ ಮಾತ್ರ ಜೂ. 11ರಿಂದ ನಿಲುಗಡೆಯಾಗಲಿದೆ.
ಜಿಲ್ಲೆಯಲ್ಲಿ ಹಾದು ಹೋಗುವ ರೈಲುಗಳಿಗೆ ಒಂದು ಕಡೆ ನಿಲುಗಡೆ ಮಾತ್ರ ಕೊಡಬೇಕೆಂದು ಜಿಲ್ಲಾಧಿಕಾರಿಯವರು ಕೋರಿದಂತೆ ಉಡುಪಿ ಜಿಲ್ಲೆಯಲ್ಲಿ ಉಡುಪಿ ನಿಲ್ದಾಣದಲ್ಲಿ ಮಾತ್ರ ನಿಲುಗಡೆ ಕೊಡಲಾಗುತ್ತದೆ. ಉಡುಪಿ ನಿಲ್ದಾಣದಲ್ಲಿ ಜಿಲ್ಲಾಡಳಿತ ಕೌಂಟರ್‌ ಒಂದನ್ನು ತೆರೆದು ಅಲ್ಲಿ ಬಂದವರಿಗೆ ಕ್ವಾರಂಟೈನ್‌ಗೆ ಕಳುಹಿಸಲಿದೆ.

ಯಾರು ಬರಬಾರದು?
ಮನೆಯಲ್ಲಿ ಪ್ರತ್ಯೇಕ ಇರುವ ವ್ಯವಸ್ಥೆ ಇರುವವರು ಮಾತ್ರ ಹೊರರಾಜ್ಯಗಳಿಂದ ಬರಬೇಕು. ಆ ಮನೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿದ್ದರೆ ಅವಕಾಶ ಕೊಡುತ್ತೇವೆ. ಅನಿವಾರ್ಯ ಸಂದರ್ಭ ಹೊರತು ಬಾರದೆ ಇರುವುದು ಉತ್ತಮ. ಬಂದರೆ 14 ದಿನ ಮನೆಯ ಇತರ ಸದಸ್ಯರ ಜತೆ ಮನೆಯೊಳಗೆ ಇರಬೇಕು ಎಂದರು.

ಆಧಾರರಹಿತ ಆರೋಪ: ಎಚ್ಚರಿಕೆ
ಇಷ್ಟರವರೆಗೆ 900ಕ್ಕೂ ಹೆಚ್ಚು ಪ್ರಕರಣದವರಿಗೆ ಚಿಕಿತ್ಸೆ ನೀಡಲಾಗಿದೆ. ಡಾ| ಟಿಎಂಎ ಪೈ ಆಸ್ಪತ್ರೆಯವರು ಉಚಿತವಾಗಿ ಇಡೀ ಆಸ್ಪತ್ರೆಯನ್ನು ನೀಡಿದ್ದಾರೆ. ಜಾಲತಾಣಗಳಲ್ಲಿ ಹಣ ಪಡೆಯುತ್ತಾರೆಂದು ಆಧಾರರಹಿತ ಆರೋಪ ಮಾಡುವುದು ತಪ್ಪು. ಅವರ ವಿರುದ್ಧ ಕಠಿನ ಕ್ರಮ ಜರಗಿಸುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದೂರು ನೀಡಿ
ಹೋಂ ಕ್ವಾರಂಟೈನ್‌ನಲ್ಲಿರುವವರು ಮನೆಯಿಂದ ಹೊರಗೆ ಓಡಾಡಿದರೆ 100 ದೂರವಾಣಿ ಸಂಖ್ಯೆಗೆ ತಿಳಿಸಬಹುದು. ಕೂಡಲೇ ಪೊಲೀಸರು ಗಮನ ಹರಿಸುತ್ತಾರೆ.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಸಹಾಯವಾಣಿ
ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸ ಲಾಗಿದೆ. ಜನರು ದೂರವಾಣಿ ಮೂಲಕ ಅಥವಾ ವಾಟ್ಸ್‌ ಆ್ಯಪ್‌ ಮೂಲಕ ತಮ್ಮ ಕಡತ, ಮನವಿ ಮತ್ತು ಅರ್ಜಿಗಳ ಪ್ರಸ್ತುತ ಸ್ಥಿತಿಯನ್ನು ಪಡೆಯಬಹುದು. ತೀರಾ ಅಗತ್ಯವಿದ್ದರೆ ಕಚೇರಿಗೆ ಬನ್ನಿ ಎಂದು ಡಿಸಿ ತಿಳಿಸಿದ್ದಾರೆ.

ದೂರವಾಣಿ: 0820 2574931, 2571500
ವಾಟ್ಸ್‌ ಆ್ಯಪ್‌: 9880831516
ಇಮೇಲ್‌ ವಿಳಾಸ: [email protected]

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.