ವಿಮಾನ ನಿಲ್ದಾಣ: ಕಳೆದುಹೋದ ವಜ್ರದ ಬಳೆ ಮರಳಿ ಕೈಸೇರಿತು!
Team Udayavani, Feb 3, 2022, 7:32 AM IST
ಮಂಗಳೂರು: ಕಳೆದುಹೋಗಿದ್ದ ವಜ್ರದ ಬಳೆ ಟ್ರಾಲಿ ರಿಟ್ರೀವರ್ ಸಿಬಂದಿಯ ಮೂಲಕ ವಾರಸುದಾರರಿಗೆ ದೊರಕಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಅಶ್ರಫ್ ಮೊಯ್ದಿನ್ ವಿಮಾನ ನಿಲ್ದಾಣದ ಭದ್ರತಾ ತಂಡದ ಮೂಲಕ ಬಳೆ ಮರಳಿಸಿದ ಸಿಬಂದಿ.
ಬೆಂಗಳೂರಿನಿಂದ ಬಂದಿದ್ದ ಸಂಬಂಧಿ ಯನ್ನು ಕರೆದೊಯ್ಯಲು ಬಂದಿದ್ದ ಮಹಿಳೆ ಬಳೆಯನ್ನು ಕಳೆದುಕೊಂಡಿದ್ದರು. ವಿಮಾನ ನಿಲ್ದಾಣದಿಂದ ತೆರಳಿದ ಬಳಿಕ ಬಳೆ ಕಳೆದು ಹೋಗಿರುವುದು ಅರಿವಿಗೆ ಬಂದಿದ್ದು ಬೆಂಗಳೂರಿನಿಂದ ಆಗಮಿಸಿದ್ದ ಪ್ರಯಾಣಿಕರ ಬಳಿ ವಿಷಯ ತಿಳಿಸಿದ್ದರು. ಅವರು ತತ್ಕ್ಷಣ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ಗೆ ಮಾಹಿತಿ ನೀಡಿ ಪತ್ತೆಹಚ್ಚುವಂತೆ ಕೋರಿದ್ದರು.
ನಿಲ್ದಾಣದಲ್ಲಿ ಟ್ರಾಲಿ ರಿಟ್ರೀವರ್ ಸಿಬಂದಿ ಅಶ್ರಫ್ ಮೊಯ್ದಿàನ್ ಅವರಿಗೆ ಟರ್ಮಿನಲ್ ಕೆಳ ಮಹಡಿಯ ನಿರ್ಗಮನ ಭಾಗದಲ್ಲಿ ಈ ಬಳೆ ದೊರಕಿದ್ದು, ಅದನ್ನು ಭದ್ರತಾ ತಂಡಕ್ಕೆ ಹಸ್ತಾಂತರಿಸಿದ್ದರು. ಪ್ರಯಾಣಿಕರ ಕೋರಿಕೆಯಂತೆ ಕಾರ್ಯಪ್ರವೃತ್ತರಾದ ಟರ್ಮಿನಲ್ ಮ್ಯಾನೇಜರ್ಗೆ ಭದ್ರತಾ ತಂಡಕ್ಕೆ ಅದಾಗಲೇ ಅಶ್ರಫ್ ಹಸ್ತಾಂತರಿಸಿದ್ದ ಬಳೆಯೇ ಅದು ಎಂಬುದು ಖಚಿತಗೊಂಡಿತ್ತು.
ಇದನ್ನೂ ಓದಿ:ಗೋವಾದಲ್ಲಿ ಬಿಜೆಪಿ 30 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ : ಪ್ರಭು ಚವ್ಹಾಣ್
ಅಶ್ರಫ್ ಅವರು ಪ್ರಯಾಣಿಕರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ಸಂಬಂಧಪಟ್ಟ ಅಧಿಕಾರಿಗೆ ಹಸ್ತಾಂತರಿಸಿದ ಎರಡನೇ ಉದಾಹರಣೆ ಇದಾಗಿದ್ದು ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಮೂಲ್ಯವಾದ ಬಳೆಯನ್ನು ಮರಳಿ ಪಡೆದ ಮಹಿಳೆಯ ಮುಖದಲ್ಲಿನ ಸಂತೋಷವೇ ನನ್ನಲ್ಲಿ ಅತ್ಯಂತ ಧನ್ಯತಾ ಭಾವ ಮೂಡಿಸಿತು ಎಂದು ಅಶ್ರಫ್ ಹೇಳಿದ್ದಾರೆ. ಮಹಿಳೆಯು ಅಶ್ರಫ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?