ಆನ್‌ಲೈನ್‌ ಉತ್ಪನ್ನ ಮಾರಾಟಕ್ಕೆ ಹಾಪ್‌ಕಾಮ್ಸ್‌ ಸಿದ್ಧ


Team Udayavani, Mar 16, 2020, 3:08 AM IST

online-hop

ಬೆಂಗಳೂರು: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್‌ ಕಾಮ್ಸ್‌), ರೈತರನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್‌ ಮಾರುಕಟ್ಟೆ ಸೃಷ್ಟಿಸಲು ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿಯೇ ಈಗ ಕಾರ್ಯತಂತ್ರ ರೂಪಿಸುತ್ತಿದೆ.

ಈ ಹಿಂದೆ ಮಾವು ಅಭಿವೃದ್ಧಿ ನಿಗಮವೂ ಆನ್‌ಲೈನ್‌ ಹಾಗೂ ಅಂಚೆ ಮೂಲಕ ತಾಜಾ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡಿ, ಮಾವು ಬೆಳೆಗಾರರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಲ್ಲದೆ, ಗ್ರಾಹಕ-ರೈತರ ನಡುವೆ ನೇರ ಮಾರುಕಟ್ಟೆಯನ್ನೂ ಸೃಷ್ಟಿ ಮಾಡಿಕೊಟ್ಟಿತ್ತು. ಆ ರೀತಿಯಲ್ಲಿಯೇ ಆಲೋಚನೆ ಮಾಡಿರುವ ಹಾಪ್‌ಕಾಮ್ಸ್‌, ಈಗ ರೈತರಿಂದ ಖರೀದಿಸಿದ ಉತ್ಪನ್ನಗಳನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡುವ ಚಿಂತನೆ ನಡೆಸಿದೆ. ಈ ಸಂಬಂಧ ಖಾಸಗಿ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಇರಾದೆಯಲ್ಲಿದೆ.

ರೈತರಿಂದ ನೇರವಾಗಿ ಪಡೆದ ಉತ್ಪನ್ನಗಳನ್ನು ಆನ್‌ಲೈನ್‌ ಮೂಲಕ ಗ್ರಾಹಕರಿಗೆ ನೇರವಾಗಿ ತಲುಪಿಸಬೇಕಾದರೆ ಸಾಕಷ್ಟು ಖರ್ಚು, ವೆಚ್ಚ ಬರಲಿವೆ. ಹೀಗಾಗಿ, ಈ ಅನುದಾನ ತರುವುದು ಹೇಗೆ ಎಂಬ ಪ್ರಶ್ನೆ ಹಾಪ್‌ಕಾಮ್ಸ್‌ನ ಮುಂದಿದೆ. ಅನುದಾನ ಹೊಂದಿಸುವ ಬಗ್ಗೆಯೂ ಹಾಪ್‌ಕಾಮ್ಸ್‌ನ ಆಡಳಿತ ಮಂಡಳಿ ಸಮಾಲೋಚನೆ ನಡೆಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಹಲವು ಕಂಪನಿಗಳು ಮುಂದೆ ಬಂದಿವೆ: ಹಾಪ್‌ಕಾಮ್ಸ್‌ನ ಉತ್ಪನ್ನಗಳಿಗೆ ಆನ್‌ಲೈನ್‌ನಲ್ಲಿ ಮಾರುಕಟ್ಟೆ ಸೃಷ್ಟಿಸಿಕೊಡುವ ಸಂಬಂಧ ಈಗಾಗಲೇ ಹಲವು ಕಂಪನಿಗಳು ಹಾಪ್‌ಕಾಮ್ಸ್‌ನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿವೆ. ಅದರಲ್ಲಿ “ಬಿಗ್‌ ಮಾರ್ಕೆಟ್‌’ ಸಂಸ್ಥೆಯೂ ಹಾಪ್‌ಕಾಮ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. ಹಾಪ್‌ಕಾಮ್ಸ್‌ “ಬಿಗ್‌ ಮಾರ್ಕೆಟ್‌’ನೊಂದಿಗೆ ಕೈ ಜೋಡಿಸುವ ಉತ್ಸಾಹದಲ್ಲಿದೆ. ಆ ಹಿನ್ನೆಲೆಯಲ್ಲಿಯೇ ಪ್ರಾಯೋಗಿಕ ಮಾರಾಟ ಕೂಡ “ಬಿಗ್‌ ಮಾರ್ಕೆಟ್‌’ನ ಆನ್‌ಲೈನ್‌ನಲ್ಲಿ ನಡೆದಿದೆ ಎಂದು ಹಾಪ್‌ಕಾಮ್ಸ್‌ ಅಧಿಕಾರಿಗಳು ಹೇಳಿದ್ದಾರೆ.

ಈಗಿನ ಪ್ರಾಯೋಗಿಕ ಮಾರಾಟದಲ್ಲಿ ನಿರೀಕ್ಷೆಯಷ್ಟು ಹಾಪ್‌ಕಾಮ್ಸ್‌ ಉತ್ಪನ್ನಗಳು ಮಾರಾಟವಾಗುತ್ತಿಲ್ಲ. ಒಮ್ಮೇಲೆ ನಾವು ಲಾಭ ನಿರೀಕ್ಷೆ ಮಾಡುವುದೂ ಒಳ್ಳೆಯದಲ್ಲ. ಕೆಲವು ಸಲ ತರಕಾರಿ ಮತ್ತು ಹಣ್ಣಿನ ಉತ್ಪನ್ನ ಮಾರಾಟವಾಗದೆ ಹೋದರೆ ಸಮಸ್ಯೆಗಳು ಉಂಟಾಗುತ್ತವೆ. ಆ ಬಗೆಗಿನ ನಷ್ಟದ ಬಗ್ಗೆಯೂ ಹಾಪ್‌ಕಾಮ್ಸ್‌ ಆಲೋಚನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ತಿಂಗಳಿಗೆ 4-5 ಲಕ್ಷ ರೂ. ವಹಿವಾಟು: ಮಾರಾಟ ವಿಸ್ತರಣೆಗೆ ಮಹತ್ವ ನೀಡಿರುವ ಹಾಪ್‌ಕಾಮ್ಸ್‌, ಇದೀಗ ಬೆಂಗಳೂರಿನ ದೊಡ್ಡ, ದೊಡ್ಡ ಅಪಾರ್ಟ್‌ಮೆಂಟ್‌ಗಳಲ್ಲಿ ತನ್ನ ವಾಹನಗಳ ಮೂಲಕ ಹಣ್ಣು ಮತ್ತು ತರಕಾರಿ ಮಾರಾಟ ಮಾಡುತ್ತಿದೆ. ತಿಂಗಳಿಗೆ ಸುಮಾರು 4 ರಿಂದ 5 ಲಕ್ಷ ರೂ.ವ್ಯಾಪಾರ ವಹಿವಾಟು ನಡೆಸುತ್ತಿದೆ. ಕಮ್ಮನಹಳ್ಳಿ ವ್ಯಾಪ್ತಿಯ ನಂದಿ ಸೆಕ್ಟರ್, ಶಿವಾಜಿನಗರದ ಎಂಬೆಸಿಸ್‌ ಅಪಾರ್ಟ್‌ಮೆಂಟ್‌, ಜಯನಗರದ ಮಂತ್ರಿ ಗಾರ್ಡನ್‌, ಕೊಡಿಗೇಹಳ್ಳಿಯ ಶ್ರೀರಾಮ್‌, ಪ್ರಸ್ಟೀಜ್‌, ಶೋಭಾ ಸೇರಿದಂತೆ ಹಲವು ಅಪಾರ್ಟ್‌ಮೆಂಟ್‌ಗಳಿಗೆ ಹಾಪ್‌ಕಾಮ್ಸ್‌ ವಾಹನಗಳು ತೆರಳಲಿವೆ.

ಎರಡು ದಿನಕ್ಕೆ ಒಂದು ಬಾರಿ ಹಾಪ್‌ಕಾಮ್ಸ್‌ ವಾಹನಗಳು ತೆರಳಲಿದ್ದು, ದಿನಕ್ಕೆ 10 ಸಾವಿರ ರೂ.ದಿಂದ 15 ಸಾವಿರ ರೂ.ವರೆಗೆ ವ್ಯಾಪಾರ ವಹಿವಾಟು ನಡೆಯುತ್ತದೆ ಎಂದು ಹಾಪ್‌ಕಾಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿಂದೆ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತದ ಅಧಿಕಾರಿಗಳು ಅಪಾರ್ಟ್‌ಮೆಂಟ್‌ ಕೇಂದ್ರೀಕರಿಸಿ ಹಾಪ್‌ಕಾಮ್ಸ್‌ ಮಳಿಗೆಗಳನ್ನು ತೆರೆಯುವ ಆಲೋಚನೆ ಮಾಡಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ನಂತರ ವಾಹನಗಳ ಮೂಲಕ ಹಣ್ಣು-ತರಕಾರಿಗಳ ಮಾರಾಟಕ್ಕೆ ಹಾಪ್‌ಕಾಮ್ಸ್‌ ಮುಂದಾಗಿತ್ತು.

ಹಾಪ್‌ಕಾಮ್ಸ್‌ ತನ್ನ ಮಾರುಕಟ್ಟೆ ವಿಸ್ತರಣೆಯತ್ತ ಚಿಂತನೆ ಹರಿಸಿದೆ. ಆ ನಿಟ್ಟಿನಲ್ಲಿಯೇ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಇದರಲ್ಲಿ ಆನ್‌ಲೈನ್‌ ಮಾರುಕಟ್ಟೆ ಕೂಡ ಸೇರಿದೆ. ಆನ್‌ಲೈನ್‌ ಮಾರುಕಟ್ಟೆ ಲಾಭ-ನಷ್ಟ ನೋಡಿಕೊಂಡು ಮುಂದುವರಿಯಲಾಗುವುದು.
-ಡಾ. ಬಿ.ಎನ್‌.ಪ್ರಸಾದ್‌, ವ್ಯವಸ್ಥಾಪಕ ನಿರ್ದೇಶಕ, ಹಾಪ್‌ಕಾಮ್ಸ್‌

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.