ವಿಭಿನ್ನ ಶೀರ್ಷಿಕೆಯ ಹಾರರ್, ಥ್ರಿಲ್ಲರ್ ಚಿತ್ರ
Team Udayavani, Jul 10, 2020, 8:05 AM IST
ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಬರುತ್ತಿರುವ ಸಿನಿಮಾಗಳ ಶೀರ್ಷಿಕೆಗಳೇ ಡಿಫರೆಂಟ್. ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸಿಸುವ ಕಲೆ ಇದೀಗ ಚಂದನವನದಲ್ಲಿದೆ. ಈಗ ಅಂಥದೇ ಮತ್ತೊಂದು ಚಿತ್ರ ಸೆಟ್ಟೇರಲು ರೆಡಿಯಾಗಿದೆ. ಹೌದು! “ಇದು ಆಕಾಶವಾಣಿ ಬೆಂಗಳೂರು ನಿಲಯʼ. ಕಮಲಾನಂದ ಚಿತ್ರಾಲಯ ಸಂಸ್ಥೆಯಡಿ ಶಿವಾನಂದಪ್ಪ ಬಳ್ಳಾರಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ನಡೆಯಿತು.
ಅಲ್ಲದೇ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದ ನಂತರ ಶೂಟಿಂಗ್ ಆರಂಭಿಸುವುದಾಗಿ ನಿರ್ಮಾಪಕ ಶಿವಾನಂದಪ್ಪ ತಿಳಿಸಿದ್ದು, ಈ ಹಿಂದೆ “ನಾವೇ ಭಾಗ್ಯವಂತರುʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಎಂ.ಹರಿಕೃಷ್ಣ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ವಿಭಿನ್ನವಾದ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯಕುಮಾರ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದು ಎ.ಟ. ರವೀಶ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಆಂಟೋನಿ ಎಂ. ಸಾಹಿತ್ಯ, ಪ್ರವೀಣ್ ಶೆಟ್ಟಿ ಛಾಯಾಗ್ರಹಣ, ಪವನ್ಗೌಡ ಅವರ ಸಂಕಲನ, ಕಂಬಿರಾಜು ನೃತ್ಯನಿರ್ದೇಶನ, ಆರ್.ಪ್ರಭಾಕರ್ ಕಲಾನಿರ್ದೇಶನ ಚಿತ್ರಕ್ಕಿದೆ. ಅಲ್ಲದೆ ವಿನೋದ್ ಪಾಟೀಲ್, ನಿಖಿತ ಸ್ವಾಮಿ, ಎಸ್. ನಾರಾಯಣಸ್ವಾಮಿ, ದಿವ್ಯಶ್ರೀ(ಕಾಮಿಡಿ ಕಿಲಾಡಿಗಳು), ವಿಲಾಸ್ಗೌಡ ಮುಂತಾದವರ ತಾರಾಬಳಗವಿರುವ ಈ ಚಿತ್ರದ ಚಿತ್ರೀಕರಣವನ್ನು ಬೆಂಗಳೂರು ಹಾಗೂ ನೊಣವಿನಕೆರೆ ಸುತ್ತಮುತ್ತ ನಡೆಸುವ ಯೋಜನೆ ಚಿತ್ರತಂಡಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು