ಅತಿವೃಷ್ಟಿ ಪೀಡಿತ ಪಟ್ಟಿಯಲ್ಲಿ ಹೊಸನಗರವೇ ಇಲ್ಲ!

ಅನುಮಾನಕ್ಕೆ ಕಾರಣವಾದ ಪಟ್ಟಿ ಬಿಡುಗಡೆ ವಿಧಾನ; ಈ ಬಾರಿಯೂ ಅಪಾರ ಮಳೆಹಾನಿ

Team Udayavani, Aug 14, 2021, 6:26 PM IST

ಅತಿವೃಷ್ಟಿ ಪೀಡಿತ ಪಟ್ಟಿಯಲ್ಲಿ ಹೊಸನಗರವೇ ಇಲ್ಲ!

ಹೊಸನಗರ: ಮಲೆನಾಡ ನಡುಮನೆಯಂತಿರುವ ಹೊಸನಗರದಲ್ಲಿ ಈ ಬಾರಿ ವ್ಯಾಪಕ ಮಳೆಯಾಗಿದೆ. ನೆರೆಹಾವಳಿ ಕೂಡ ಕಂಡು ಬಂದಿದ್ದು ಮಹತ್ವದ ಸಂಪರ್ಕ ಸೇತುವೆಗಳು ಸೇರಿದಂತೆ ಭಾರೀ ಹಾನಿ ಸಂಭವಿಸಿದೆ. ಆದರೆ ಸರ್ಕಾರ ಬಿಡುಗಡೆ ಮಾಡಿದ ಅತಿವೃಷ್ಟಿಗೊಳಗಾದ ತಾಲೂಕಿನ ಪಟ್ಟಿಯಲ್ಲಿ ಹೊಸನಗರ ಕಾಣದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬರೋಬ್ಬರಿ ರೂ.39.33 ಕೋಟಿ ಹಾನಿ: ಹೌದು, ಈ ಬಾರಿ ಮಳೆಹಾನಿಯಿಂದ ತಾಲೂಕಿನಲ್ಲಿ ರೂ.39.33 ಕೋಟಿ ಹಾನಿ ಸಂಭವಿಸಿದೆ ಎಂದು ತಾಲೂಕು ಆಡಳಿತವೇ ಸರ್ಕಾರಕ್ಕೆ ವರದಿ ನೀಡಿದೆ.ಜಾನುವಾರು ಜೀವಹಾನಿ 5 ಪ್ರಕರಣದಿಂದ ರೂ.1.5 ಲಕ್ಷ,, ಜಾನುವಾರು ಕೊಟ್ಟಿಗೆ ಹಾನಿ 13 ಪ್ರಕರಣದಿಂದ 0.27ಲಕ್ಷ, ಸಂಪೂರ್ಣ ಮನೆ ಹಾನಿ 6 ಪ್ರಕರಣದಿಂದ 30 ಲಕ್ಷ, ಭಾಗಶಃ ಮನೆಹಾನಿ 5 ಪಕರಣದಿಂದ 5 ಲಕ್ಷ, ಅಲ್ಪಸ್ವಲ್ಪ ಮನೆಹಾನಿ 27 ಪ್ರಕರಣದಿಂದ 13.5 ಲಕ್ಷ, 61 ಹೆಕ್ಟೇರ್‌ ಕೃಷಿ ಬೆಳೆಹಾನಿಯಿಂದ 3.77 ಲಕ್ಷ, 3 ಹೆಕ್ಟೇರ್‌ ಪ್ರದೇಶ ತೋಟಗಾರಿಕಾ ಬೆಳೆಹಾನಿಯಿಂದ 0.40 ಲಕ್ಷ, 244 ಹೆಕ್ಟೇರ್‌ ಜಮೀನಿನಲ್ಲಿ ಮರಳು ತುಂಬಿ ಹಾನಿ 29.28 ಲಕ್ಷ, 72 ಪ್ರಾಥಮಿಕ ಶಾಲಾ ಕಟ್ಟಡಗಳ ಹಾನಿ 359 ಲಕ್ಷ, 35 ಅಂಗನವಾಡಿ ಕಟ್ಟಡಗಳಿಗೆ ಹಾನಿ 70 ಲಕ್ಷ, 9 ಗ್ರಾಪಂ ಕಟ್ಟಡಗಳ ಹಾನಿ 60 ಲಕ್ಷ, 21 ಪಿಎಚ್‌ಸಿ ಕಟ್ಟಡಗಳ ಹಾನಿ 88
ಲಕ್ಷ, 5.45 ಕಿಮೀ ಹೆದ್ದಾರಿ ಹಾನಿ 159 ಲಕ್ಷ, 22.32 ಕಿಮೀ ಜಿಲ್ಲಾ ಹೆದ್ದಾರಿ ಹಾನಿ 975 ಲಕ್ಷ, 217 ಕಿಮೀ ಗ್ರಾಮೀಣ ರಸ್ತೆ ಹಾನಿ 425 ಲಕ್ಷ, 8.5 ಕಿಮೀ ನಗರ ಪ್ರದೇಶದ ರಸ್ತೆ ಹಾನಿ 102 ಲಕ್ಷ, 42 ಸೇತುವೆಗಳ ಹಾನಿ 708 ಲಕ್ಷ, 21 ಆರ್‌ಡಿಪಿಆರ್‌ ಕೆರೆಗಳ ಹಾನಿ 161 ಲಕ್ಷ, 13 ಸಣ್ಣ ನೀರಾವರಿ ಕೆರೆ ಹಾನಿ 645 ಲಕ್ಷ, 1 ಸಣ್ಣ ನೀರಾವರಿ ಎಂಬ್ಯಾಕ್‌ವೆುಂಟ್‌ ಹಾನಿ 20 ಲಕ್ಷ, 350 ವಿದ್ಯುತ್‌ ಕಂಬಗಳ ಹಾನಿ 14 ಲಕ್ಷ,
45 11ಕೆವಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಹಾನಿ 45 ಲಕ್ಷ, 5 ವಿದ್ಯುತ್‌ ಲೈನ್‌ ಹಾನಿಯಿಂದ 2.5 ಲಕ್ಷ ಹಾನಿಯುಂಟಾಗಿದೆ ಎಂದು ತಾಲೂಕು ಆಡಳಿತ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ರವಾನಿಸಿದೆ.

ಇದನ್ನೂ ಓದಿ:ದಕ್ಷಿಣಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ಈ ಹಿಂದಿನ ನಿಯಮಗಳೇ ಮುಂದುವರಿಕೆ : ಹೊಸ ನಿಯಮಗಳಿಲ್ಲ

ಸಚಿವದ್ವಯರೇ ಪ್ರತ್ಯಕ್ಷ ಸಾಕ್ಷಿ: ಜಿಲ್ಲೆಯಲ್ಲಿ ಮಳೆಹಾನಿಗೆ ತುತ್ತಾಗಿದ್ದು ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕು. ಹಾಗಾಗಿ ಜಿಲ್ಲಾಧಿಕಾರಿಗಳೇ
ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದರು. ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ, ಗೃಹಮಂತ್ರಿ ಆರಗ ಜ್ಞಾನೇಂದ್ರ ಇಡೀ ದಿನ ಈ ಭಾಗದಲ್ಲೇ ಸಂಚರಿಸಿ ಹಾನಿಯ ಪ್ರತ್ಯಕ್ಷ ದರ್ಶನ ಮಾಡಿದ್ದರು. ಕೆರೆಹಳ್ಳಿ ಮತ್ತು ಕಸಬಾ ಹೋಬಳಿಯಲ್ಲಿ ಶಾಸಕ ಹಾಲಪ್ಪ ಕೂಡ ಮಳೆಹಾನಿ ಪರಿಶೀಲಿಸಿದ್ದರು. ಹಾನಿಯ ಬಗ್ಗೆ ಜಿಲ್ಲಾ ಧಿಕಾರಿಗಳಿಂದ ವರದಿ ಪಡೆದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ
ಸಚಿವರು ಭರವಸೆ ನೀಡಿದ್ದರು.

ಗಂಜಿ ಕೇಂದ್ರ ಕೂಡ ತೆರೆಯಲಾಗಿತ್ತು:
ಅಂಡಗದೋದೂರು ಗ್ರಾಪಂ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಿಂದ ಪ್ರವಾಹ ಪರಿಸ್ಥಿತಿ ಕಂಡು ಬಂದಿದ್ದು 6 ಕುಟುಂಬಗಳು ನೆಲೆ ಕಳೆದುಕೊಂಡಿದ್ದವು. ಕೂಡಲೇ ರ್ಯಾವೆ ಸರ್ಕಾರಿ ಶಾಲೆಯಲ್ಲಿ ಗಂಜಿಕೇಂದ್ರ ತೆರೆದು ರಕ್ಷಣೆ ನೀಡಲಾಗಿತ್ತು. ಇಲ್ಲಿಗೂ ಕೂಡ ಸಚಿವದ್ವಯರು ಮತ್ತು ಜಿಲ್ಲಾ ಧಿಕಾರಿಗಳು ಭೇಟಿ ನೀಡಿ ಅಹವಾಲು ಸ್ವೀಕರಿಸಿದ್ದರು.

ಮೂರು ಜೀವ ಹಾನಿ: ಹೊಸನಗರ ತಾಲೂಕಿನಲ್ಲಿ ಸುರಿದ ವ್ಯಾಪಕ ಮಳೆಗೆ ಮೂವರು ಮೃತಪಟ್ಟಿದ್ದಾರೆ. ಎರಡು ಕುಟುಂಬಗಳಿಗೆ ರೂ. 5 ಲಕ್ಷ ಪರಿಹಾರ ನೀಡಲಾಗಿದೆ. ಒಂದು ಶವ ನದಿಯಲ್ಲಿ ಪತ್ತೆಯಾದ ಕಾರಣ ಪೊಲೀಸ್‌ ತನಿಖೆ ಮತ್ತು ಮರಣೋತ್ತರ ಪರೀಕ್ಷೆ ವರದಿ ಬಾಕಿ ಇದ್ದು ಪರಿಹಾರ ವಿತರಣೆಯಾಗಿಲ್ಲ.

ಅತಿವೃಷ್ಟಿ ಪಟ್ಟಿಯಲ್ಲಿ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕು ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ವಾಡಿಕೆ ಮಳೆಯಾಧಾರದಲ್ಲಿ ಮಳೆ ಕಡಿಮೆಯಾಗಿರಬಹುದು. ಆದರೆ ಕೇವಲ 12 ಗಂಟೆ ಅವಧಿಯಲ್ಲಿ 15 ದಿನಗಳ ಮಳೆ ಒತ್ತಟ್ಟಿಗೆ ಸುರಿದಿದ್ದು ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ವ್ಯಾಪಕ ಹಾನಿಯಾಗಿದೆ. ಪಟ್ಟಿ ಅವೈಜ್ಞಾನಿಕವಾಗಿದ್ದು ಬಿಟ್ಟು ಹೋದ ತಾಲೂಕುಗಳನ್ನು ಸೇರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು
-ಆರಗ ಜ್ಞಾನೇಂದ್ರ, ಗೃಹಮಂತ್ರಿ

ಹೊಸನಗರ ತಾಲೂಕು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದೆ. ಈ ಬಾರಿ ರಾಜ್ಯದಲ್ಲಿ ಒಂದೇ ದಿನ 401 ಮಿಮೀ ಮಳೆ ದಾಖಲಾದ ಚಕ್ರಾನಗರ ಕೂಡ ಹೊಸನಗರದಲ್ಲೇ ಬರುತ್ತದೆ. ಆದರೆ ಅತಿವೃಷ್ಟಿ ಪೀಡಿತ ಪಟ್ಟಿಯಲ್ಲಿ ಹೊಸನಗರ ಇಲ್ಲದಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಅನ್ಯಾಯವನ್ನು ಸರಿಪಡಿಸಿ ಅತಿವೃಷ್ಟಿ ಪಟ್ಟಿಗೆ ಹೊಸನಗರ ತಾಲೂಕನ್ನು ಸೇರ್ಪಡೆ ಮಾಡಬೇಕು.
-ಬಿ.ಜಿ. ಚಂದ್ರಮೌಳಿ, ಕೋಡೂರು

-ಕುಮುದಾ ನಗರ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.