ಮೊಟ್ಟೆ ತಿನ್ನಲು ಇಷ್ಟವಿಲ್ಲವೇ? ಸಿಂಪಲ್ ಆಗಿ ಸ್ವಾದಿಷ್ಟಕರ ಪನ್ನೀರ್ ಬುರ್ಜಿ ತಯಾರಿಸಿ


Team Udayavani, Sep 27, 2020, 6:09 PM IST

ಸ್ವಾದಿಷ್ಟಕರ ಪನ್ನೀರ್‌ ಬುರ್ಜಿ ರೆಸಿಪಿ

ಪನ್ನೀರ್‌ ನೋಡಿದ ಕೂಡಲೇ ಬಾಯಿಯಿಂದ ನೀರು ಸುರಿಯುತ್ತದೆ ಅಷ್ಟರ ಮಟ್ಟಿಗೆ ಪ್ರತಿಯೊಬ್ಬರೂ ಕೂಡ ಪನ್ನೀರನ್ನು ಇಷ್ಟಪಟ್ಟು ತಿನ್ನುತ್ತಾರೆ. ಪನ್ನೀರ್‌ ನಿಂದ ತಯಾರಿಸಿದ ಪ್ರತಿಯೊಂದು ಆಹಾರವು ನಾಲಗೆಗೆ ಹೆಚ್ಚು ರುಚಿಯನ್ನು ನೀಡುವುದರ ಜೊತೆಗೆ ಆರೋಗ್ಯಕ್ಕೂ ಸಹ ಒಳ್ಳೆಯದು. ಪನ್ನೀರ್‌ ನಲ್ಲಿ ಅಧಿಕ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳು ಬಲವಾಗುತ್ತದೆ. ಅಲ್ಲದೇ ಸಂಧಿ ನೋವು ಉಂಟಾಗುವುದಿಲ್ಲ ಹಾಗೂ ಇದು ದೇಹದಲ್ಲಿ ಇನ್ಸುಲಿನ್‌ಗಳ ಉತ್ಪತ್ತಿಗೆ ಸಹಕಾರಿಯಾಗುವುದು.

ಮೊಟ್ಟೆ ತಿನ್ನಲು ಇಷ್ಟಪಡದೇ ಇರುವವರು ಪನ್ನೀರ್‌ ಬುರ್ಜಿ ರೆಸಿಪಿಯನ್ನು ಮನೆಯಲ್ಲಿ ಸಿಂಪಲ್‌ ಆಗಿ ಮಾಡಿ ನೋಡಿ. ಪನ್ನೀರ್‌ ಬುರ್ಜಿಯನ್ನು ರೋಟಿ, ನಾನ್‌ ,ಚಪಾತಿ ಅಲ್ಲದೇ ಊಟದ ಜೊತೆಗೆ ತಿನ್ನಲು ತುಂಬಾ ರುಚಿಕರವಾಗಿರುತ್ತದೆ.

ಪನ್ನೀರ್‌ ನಿಂದ ತಯಾರಿಸುವ ತಿನಿಸನ್ನು ತಿನ್ನಲು ಹೋಟೆಲ್‌ಗೆ ಹೋಗಬೇಕೆಂದಿಲ್ಲ ನೀವೇ ಮನೆಯಲ್ಲಿ ಮಾಡಿಕೊಂಡು ತಿನ್ನಬಹುದಾಗಿದೆ. ಹಾಗಿದ್ದರೆ ಇನ್ನೇಕೆ ತಡ ಕೇವಲ ಹತ್ತೇ ನಿಮಿಷದಲ್ಲಿ ಝಟ್‌ಫ‌ಟ್‌ ಅಂತಾ ಇದನ್ನು ತಯಾರಿಸಬಹುದು.

ಪನ್ನೀರ್‌ ಬುರ್ಜಿ ಹಾಗೂ ನಾನ್‌ ರೆಸಿಪಿಯನ್ನು ಮಾಡುವುದು ಹೇಗೆ ಎಂಬುದನ್ನು ನೋಡೋಣ ಬನ್ನಿ…..

ನಾವು ಮೊದಲು ಪನ್ನೀರ್‌ ಬುರ್ಜಿ ತಯಾರಿಸೋಣ…
ಬೇಕಾಗುವ ಸಾಮಗ್ರಿಗಳು
ಪನ್ನೀರ್‌ 2 ಕಪ್‌(ಪುಡಿ ಮಾಡಿಟ್ಟ) ,ಈರುಳ್ಳಿ 2, ಟೊಮೆಟೊ 1, ಜೀರಿಗೆ 1 ಚಮಚ, ತೆಂಗಿನ ಎಣ್ಣೆ 2 ಚಮಚ, ಹಸಿಮೆಣಸಿನ ಕಾಯಿ 4, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ 2 ಚಮಚ, ಅಚ್ಚ ಖಾರದ ಪುಡಿ ಅರ್ಧ ಚಮಚ, ಅರಿಶಿನ ಪುಡಿ ಕಾಲು ಚಮಚ, ಗರಂ ಮಸಾಲ ಪುಡಿ ಅರ್ಧ ಚಮಚ, ಕೊತ್ತಂಬರಿ ಸೊಪ್ಪು ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಒಂದು ದೊಡ್ಡ ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ.ನಂತರ ಅದಕ್ಕೆ ಹೆಚ್ಚಿದ ಈರುಳ್ಳಿ , ಹಸಿಮೆಣಸು, ಜೀರಿಗೆ ಮತ್ತು ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ ಹಾಕಿರಿ. ಈರುಳ್ಳಿ ಸ್ವಲ್ಪ ಕೆಂಪಾಗಾಗುವವರೆಗೆ ಹುರಿಯಿರಿ. ತದನಂತರ ಹಚ್ಚಿದ ಟೊಮೆಟೊ ಹಾಕಿ ಅದು ಮೆತ್ತಗಾಗುವವರೆಗೆ ಹುರಿಯಿರಿ. ಆ ಮೇಲೆ ಅಚ್ಚ ಖಾರದ ಪುಡಿ, ಅರಿಶಿನ ಪುಡಿ, ಗರಂ ಮಸಾಲ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ. ನಂತರ ಸಣ್ಣ ಉರಿಯಲ್ಲಿ 1ರಿಂದ 2 ನಿಮಿಷ ಹಾಗೇ ಮಸಾಲೆಯನ್ನು ಹುರಿಯಿರಿ. ಆ ಮೇಲೆ ಪುಡಿ ಮಾಡಿಟ್ಟುಕೊಂಡ ಪನ್ನೀರ್‌ ಹಾಕಿರಿ. ಪನ್ನೀರ್‌ ಪೂರ್ತಿ ಮೆತ್ತಗಾಗಿ ಹೋಗದಂತೆ ನಿಧಾನವಾಗಿ ಕೈಯ್ನಾಡಿಸಿರಿ. ಸಣ್ಣ ಉರಿಯಲ್ಲಿ 3 ರಿಂದ 4 ನಿಮಿಷ ಹಾಗೇ ಬಿಡಿ.ಪನ್ನೀರನ್ನು ಅತಿಯಾಗಿ ಹುರಿಯಬೇಡಿ ಹಾಗೆ ಮಾಡಿದರೆ ಪನ್ನೀರ್‌ ಗಟ್ಟಿಯಾಗಿ ಬಿಡುತ್ತದೆ. ನಂತರ ಹಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಬೆರೆಸಿದರೆ ರುಚಿಕರವಾದ ಪನ್ನೀರ್‌ ಬುರ್ಜಿ ಸವಿಯಲು ಸಿದ್ಧ.

ಬಟರ್‌ ನಾನ್‌:
ಬೇಕಾಗುವ ಸಾಮಾಗ್ರಿಗಳು:
ಮೈದಾ 1/2 ಕೆ.ಜಿ,ಹಾಲಿನ ಪುಡಿ 2 ಚಮಚ,ಅಡುಗೆ ಸೋಡಾ ಸ್ವಲ್ಪ ,ಮೊಸರು 1ಕಪ್‌ ,ಬೆಣ್ಣೆ , ಉಪ್ಪು ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ:
ಮೈದಾ ಹಿಟ್ಟನ್ನು ಚೆನ್ನಾಗಿ ಜರಡಿ ಇಟ್ಟುಕೊಳ್ಳಿ. ನಂತರ ಒಂದು ಅಗಲವಾದ ಪಾತ್ರೆಯಲ್ಲಿ ಮೈದಾ ಹಿಟ್ಟು, ಹಾಲಿನ ಪುಡಿ, ಅಡುಗೆ ಸೋಡಾ, ಮೊಸರು, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ ಬೇಕಿದ್ದರೆ ಸ್ವಲ್ಪ ನೀರನ್ನು ಹಾಕಿಕೊಳ್ಳಬಹುದು. ಹಿಟ್ಟನ್ನು ಚಪಾತಿ ಹಿಟ್ಟಿನಂತೆ ಕಲಸಿ ಸುಮಾರು 2-3 ಗಂಟೆಗಳ ಕಾಲ ಹಾಗೆ ಇಡಿ. ಆಮೇಲೆ ಹಿಟ್ಟನ್ನು ಉಂಡೆಗಳನ್ನಾಗಿ ಮಾಡಿಕೊಂಡು ಚಪಾತಿಯಂತೆ ಲಟ್ಟಿಸಿ ಬೆಣ್ಣೆಯಿಂದ ಕಾಯಿಸಿದರೆ ಬಿಸಿಬಿಸಿಯಾದ ಮೃದುವಾದ ನಾನ್‌ ಸವಿಯಲು ಸಿದ್ಧ .

ಟಾಪ್ ನ್ಯೂಸ್

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.