ರೈಲಿನಲ್ಲಿ 1.50 ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ : ಉಗಾಂಡ ಮೂಲದ ಮಹಿಳೆ ಸೆರೆ


Team Udayavani, Jan 9, 2022, 2:41 PM IST

ರೈಲಿನಲ್ಲಿ 1.50 ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ : ಉಗಾಂಡ ಮೂಲದ ಮಹಿಳೆ ಸೆರೆ

ಹುಬ್ಬಳ್ಳಿ: ರೈಲಿನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರು ವಲಯದ ಎನ್‌ಸಿಬಿ ಅಧಿಕಾರಿಗಳು ಶುಕ್ರವಾರ ರಾತ್ರಿ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿ, ಅಂದಾಜು 1.50 ಕೋಟಿ ರೂ. ಮೌಲ್ಯದ 995 ಗ್ರಾಂ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ.

ದೆಹಲಿಯಿಂದ ಯಶವಂತಪುರಕ್ಕೆ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯು ಸೆರಾಲಾಕ್‌ ಬೇಬಿ ಫುಡ್‌ನ‌ ಎರಡು ಕಾರ್ಟೂನ್ ಗಳಲ್ಲಿ ಮಾದಕವಸ್ತು
(Methamphetamine) ಇಟ್ಟುಕೊಂಡು ಸಾಗಾಟ ಮಾಡುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ಎನ್‌ಸಿಬಿ ಅಧಿಕಾರಿಗಳು ಆರ್‌ಪಿಎಫ್‌ ಸಿಬ್ಬಂದಿ ಸಹಾಯದಿಂದ ದಾಳಿ ಮಾಡಿ
ಮಹಿಳೆಯನ್ನು ಬಂಧಿಸಿ, 1.5 ಕೋಟಿ ರೂ. ಮೌಲ್ಯದ ಮೆಥಾಂಪೆಟಾಮೈನ್‌ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಉಗಾಂಡ ಮಹಿಳೆಯು ಮಾದಕವಸ್ತುವನ್ನು ರಾಜ್ಯದಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದಳು. ಈ ಡ್ರಗ್ಸ್‌ ತುಂಬಾ ಅಪಾಯಕಾರಿಯಾಗಿದ್ದು, ಇದರ ಸೇವನೆಯಿಂದ ಮೆದುಳಿನ ನರ ದುರ್ಬಲಗೊಳ್ಳುವುದು, ಜ್ಞಾಪಕಶಕ್ತಿ ಕಳೆದುಕೊಳ್ಳುವುದು, ಮಾನಸಿಕ ಅಸ್ವಸ್ಥರಾಗುವುದು, ಬುದ್ಧಿಮಾಂದ್ಯರಾಗುವುದು ಹಾಗೂ ಹೃದಯಾಘಾತ ಸೇರಿದಂತೆ ಮನುಷ್ಯನ ಮೇಲೆ ಇತರೆ ಗಂಭೀರ ಸಮಸ್ಯೆಗಳು ಉಂಟಾಗುತ್ತವೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಾಧೀಶರ ಎದುರು ಹಾಜರು
ಧಾರವಾಡ: ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದ್ದ ಉಗಾಂಡ ದೇಶದ ಮಹಿಳೆಯನ್ನು ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಎದುರು ಅವರ ನಿವಾಸದಲ್ಲಿಯೇ ಶನಿವಾರ ಹಾಜರುಪಡಿಸಲಾಯಿತು. ದೆಹಲಿಯಿಂದ ನಿಜಾಮುದ್ದೀನ್‌ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದ ಈ ಮಹಿಳೆಯು ಮಕ್ಕಳಿಗೆ ನೀಡುವ ಆಹಾರ ಪೊಟ್ಟಣದಲ್ಲಿ ಒಂದೂವರೆ ಕೋಟಿ ಮೌಲ್ಯದ ಮಾದಕದ್ರವ್ಯ ಇಟ್ಟು ಸಾಗಿಸುತ್ತಿದ್ದಳು. ಹುಬ್ಬಳ್ಳಿಯ ರೈಲ್ವೆ ಪೊಲೀಸರ ಸಹಕಾರದೊಂದಿಗೆ ನಾರ್ಕೋಟಿಕ್‌ ಕಂಟ್ರೋಲ್‌ ಬ್ಯುರೋ ಅಧಿಕಾರಿಗಳು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಉಗಾಂಡಾ ದೇಶದ ಮಹಿಳೆಯನ್ನು ಭದ್ರತೆ ಮಧ್ಯೆ ನ್ಯಾಯಾಧೀಶರ ನಿವಾಸಕ್ಕೆ ಕರೆ ತಂದು ಹಾಜರುಪಡಿಸಿ, ತಮ್ಮ ವಶಕ್ಕೆ ಪಡೆಯಲಾಗಿದೆ. ಮಹಿಳೆ ಸೇರಿದಂತೆ ಒಂದೂವರೆ ಕೋಟಿ ರೂ. ಮೌಲ್ಯದ ಡ್ರಗ್ಸ್‌ಅನ್ನು ನಾರ್ಕೋಟಿಕ್‌ ಕಂಟ್ರೋಲ್‌ ಬ್ಯುರೋ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸುFive state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

bjp-jAssembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

Assembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

Mangaluru ವಾಹನ ಕಳವು: ಆರೋಪಿಯ ಬಂಧನ

Mangaluru ವಾಹನ ಕಳವು: ಆರೋಪಿಯ ಬಂಧನ

Missing Case ಬ್ರಹ್ಮಾವರ: ಮಹಿಳೆ ನಾಪತ್ತೆ

Missing Case ಬ್ರಹ್ಮಾವರ: ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

law 1

Chikkamagaluru: ವಕೀಲರು-ಪೊಲೀಸರ ವಿವಾದ; CID ತನಿಖೆಗೆ ಸರಕಾರ ಆದೇಶ

pregnent

Feticide: ಮತ್ತೂಂದು ಹೆಣ್ಣು ಭ್ರೂಣ ಹತ್ಯೆ ತಂಡ ಸಕ್ರಿಯ

bjp-jAssembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

Assembly Election Results ರಾಜ್ಯ ಬಿಜೆಪಿಯಲ್ಲಿ ಉತ್ಸಾಹ; ಕೈ ನಾಯಕರಲ್ಲಿ ಆತ್ಮವಿಶ್ವಾಸ

disabledd

Karnataka: ವಿಕಲಚೇತನರ ಶ್ರೇಯೋಭಿವೃದ್ಧಿಗೆ 284 ಕೋ. ರೂ. ಅನುದಾನ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

D K SHIVAKUMAR

Telangana: ನಮ್ಮ ತೆಲಂಗಾಣ ಮಿಷನ್‌ ಯಶಸ್ವಿ- ಡಿ.ಕೆ. ಶಿವಕುಮಾರ್‌

revanth reddy

Telangana: `ಕಾರು’ಬಾರು ಬಂದ್‌ ಮಾಡಿದ ಕೈ

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸುFive state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Five state elections ಛತ್ತೀಸ್‌ಗಢದಲ್ಲಿ ಬಿಜೆಪಿಗೆ ಗೆಲುವಿನ ಬತ್ತಾಸು

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Assembly election results: ಮತದಾನೋತ್ತರ ಸಮೀಕ್ಷೆಗಳೆಲ್ಲ ಸುಳ್ಳಾದವು!

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Election results ನಾಲ್ಕು ಫ‌ಲಿತಾಂಶ: ಹತ್ತು ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.