ಹುಬ್ಬಳ್ಳಿ : ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಘಟಕದಲ್ಲೇ ಬಾಕಿಯಾದ ಬಸ್ಸುಗಳು
Team Udayavani, Dec 12, 2020, 9:32 AM IST
ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಮುಂದುವರೆದ ಹಿನ್ನಲೆಯಲ್ಲಿ ನಗರದಲ್ಲಿ ಬಸ್ಸುಗಳು ರಸ್ತೆಗಿಳಿದಿಲ್ಲ. ನೌಕರರು ಘಟಕಗಳ ಬಳಿಗೆ ಆಗಮಿಸದೆ ತಟಸ್ಥರಾಗಿ ಉಳಿದಿದ್ದಾರೆ.
ಎರಡನೇ ದಿನದ ಮುಷ್ಕರ ಹತ್ತಿಕ್ಕಿ ಬಸ್ಸುಗಳ ಸಂಚಾರಕ್ಕೆ ಸರಕಾರ ಸಿದ್ದತೆ ಮಾಡಿಕೊಂಡಿದೆ. ಇದಕ್ಕಾಗಿ ಪೊಲೀಸರನ್ನು ಘಟಕಗಳ ಮುಂದೆ ನಿಯೋಜಿಸಲಾಗಿದೆ. ಹಾಗಾಗಿ ನೌಕರರು ಘಟಕಗಳಿಗೆ ಆಗಮಿಸದೆ ದೂರ ಉಳಿದಿದ್ದಾರೆ.
ಬೆಳಗ್ಗೆಯಿಂದ ಬಸ್ಸುಗಳನ್ನು ಕಾರ್ಯಚರಣೆಗೊಳಿಸಲು ಘಟಕ, ನಿಲ್ದಾಣಗಳಿಗೆ ಎಡತಾಕುತ್ತಿದ್ದು, ನೌಕರರು ಘಟಕಗಳಿಗೆ ಆಗಮಿಸದ ಹಿನ್ನಲೆಯಲ್ಲಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಒಂದೂ ಬಸ್ಸು ಸಂಚಾರಗೊಂಡಿಲ್ಲ.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದ ಸಾರಿಗೆ ನೌಕರರ ಮುಷ್ಕರ: ಬಾಡಿಗೆ ವಾಹನಗಳಿಗೆ ಭಾರಿ ಬೇಡಿಕೆ
ಹುಬ್ಬಳ್ಳಿ ಗ್ರಾಮೀಣ ವಿಭಾಗದಿಂದ ೧೧೩ ಅನುಸೂಚಿಗಳು ಕಾರ್ಯಾಚರಣೆಗೊಳ್ಳಬೇಕಾಗಿದ್ದು, ನೌಕರರು ಘಟಕಗಳಿಗೆ ಆಗಮಿಸದ ಹಿನ್ನೆಲೆಯಲ್ಲಿ ಒಂದೂ ಬಸ್ಸು ಸಂಚಾರ ಮಾಡಿಲ್ಲ. ಇದರಿಂದಾಗಿ ನಗರದ ಮೂರು ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?