ಹುಣಸೂರಲ್ಲಿ ಸೆ.27ರ ಬಂದ್ಗೆ ಬೆಂಬಲಿಸುವಂತೆ ವಿವಿಧ ಸಂಘಟನೆಗಳ ಮನವಿ
Team Udayavani, Sep 24, 2021, 9:04 PM IST
ಹುಣಸೂರು : ರೈತ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕೇಂದ್ರದ ಕೃಷಿ ಕಾಯ್ದೆ, ಖಾಸಗಿಕರಣ ವಿರೋಧಿಸಿ ಸೆ.27 ಭಾರತ್ ಬಂದ್ನ್ನು ಹುಣಸೂರಿನಲ್ಲಿ ಯಶಸ್ವಿಯಾಗಿಸಲು ಗುರುವಾರ ನಡೆದ ತಾಲೂಕಿನ ವಿವಿಧ ಸಂಘಟನೆಗಳು ತೀರ್ಮಾನಿಸಿದವು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ರೈತ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಚರ್ಚೆ ನಡೆದು, ತಾಲೂಕು ಹಾಗೂ ಹೋಬಳಿ ಕೇಂದ್ರದಲ್ಲಿನ ಆಟೋ, ವಾಹನ ಚಾಲಕರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳವರು ಬಂದ್ಗೆ ಸಹಕರಿಸುವಂತೆ ಕೋರಿ ವಿಶ್ವಾಸಕ್ಕೆ ಪಡೆದು ಬಂದ್ ಯಶಸ್ವಿಯಾಗಿಸಲು ತೀರ್ಮಾನಿಸಲಾಯಿತೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರುಕುಮಾರ್ ತಿಳಿಸಿದರು.
ಇದೇ ವೇಳೆ ಮುಖಂಡರು ಭಾರತ್ ಬಂದ್ನ ಪೋಸ್ಟರ್ ಬಿಡುಗಡೆಗೊಳಿಸಿ, ತಾಲೂಕಿನ ಜನತೆ ಬಂದ್ಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ರೈತಸಂಘದ ಮುಖಂಡರಾದ ಬೆಂಕಿಪುರಚಿಕ್ಕಣ್ಣ, ಮಂಜುನಾಥ್, ರಾಮೇಗೌಡ, ಕಮ್ಯುನಿಸ್ಟ್ ಪಕ್ಷದ ಬಸವರಾಜು, ಶಿವಣ್ಣ, ದಸಂಸದ ಜೆ.ಮಹದೇವ್, ರತ್ನಪುರಿ ಪುಟ್ಟಸ್ವಾಮಿ,ಅತ್ತಿಕುಪ್ಪೆರಾಮಕೃಷ್ಣ, ರಾಜು,ಕಿರಿಜಾಜಿ ಗಜೇಂದ್ರ ಸೇರಿದಂತೆ ಅನೇಕ ಮುಖಂಡರುಗಳು ಇದ್ದರು.
ಇದನ್ನೂ ಓದಿ :ಬಾಸ್ಕೆಟ್ಬಾಲ್ ಪಟು ಸತ್ನಾಮ್ ವೃತ್ತಿಪರ ಕುಸ್ತಿಗೆ ಹಾಜರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ