ರಂಗೋಲಿಯಲ್ಲಿ ಅರಳಿತು ಹೃದಯ, ಮೆದುಳು : ಇದು ಸರಕಾರಿ ಶಾಲೆಯ ವಿಜ್ಞಾನ ದಿನಾಚರಣೆಯ ವಿಶೇಷ
Team Udayavani, Mar 9, 2022, 3:54 PM IST
ಹುಣಸೂರು : ತಾಲೂಕಿನ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯಗಳ ನಾನಾ ಮಾದರಿಗಳನ್ನು ರಚಿಸಿ, ಪ್ರದರ್ಶನ ಮಾಡುವ ಮೂಲಕ ವಿಜ್ಞಾನ ದಿನಾಚರಣೆ ಆಚರಿಸಿದರು.
ಶಾಲಾ ಆವರಣದಲ್ಲಿ ನಡೆದ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾಮುಖ್ಯ ಶಿಕ್ಷಕ ಕುಮಾರಸ್ವಾಮಿ, ಇಂದು ಜಗತ್ತಿಗೆ ವಿಜ್ಞಾನ ಅನಿವಾರ್ಯವಾಗಿದ್ದು, ಅತೀ ವೇಗದಲ್ಲಿ ಬಲಾಢ್ಯವಾಗಿ ಬೆಳೆಯುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯ ನಿತ್ಯದ ಜೀವನದಲ್ಲಿ ವಿಜ್ಞಾನಕ್ಕೆ ಜೋತು ಬಿದ್ದಿರುವುದರಿಂದಾಗಿ ವಿಜ್ಞಾನ ಅತೀ ವೇಗವಾಗಿ ಬೆಳೆಯುತ್ತಿದೆ ಎಂದು ತಿಳಿಸಿದರು.
ವಿಜ್ಞಾನ ಮಾದರಿಗಳ ಪ್ರದರ್ಶನ;
ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಉಮಾಕುಮಾರಿ ಹಾಗೂ ಪ್ರೀತಿ ಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಂಗೋಲಿಯಲ್ಲಿ ಜೀವಶಾಸ್ತ್ರ, ರಸಾಯನ ಶಾಸ್ತ್ರ ಹಾಗೂ ಭೌತಶಾಸ್ತ್ರಕ್ಕೆ ಸಂಬಂಧಿಸಿದ ಚಿತ್ರಗಳನ್ನು ಶಾಲೆಯ ಕಾರಿಡಾರ್ನಲ್ಲಿ ಬಿಡಿಸಿ, ಅದಕ್ಕೆ ಬಣ್ಣ ತುಂಬಿ ಪ್ರತಿಯೊಂದು ರಂಗೋಲಿಯ ಚಿತ್ತಾರಕ್ಕೂ ವಿಜ್ಞಾನದ ವಿವರಣೆಗಳನ್ನು ನೀಡಿದರು.
ರಂಗೋಲಿಯಲ್ಲಿ ಹೃದಯ, ಮೆದುಳು, ಅಮಿಬಾ, ಜೀರ್ಣಾಂಗ ವ್ಯೂಹ, ವಿಸರ್ಜನಾಂಗ ವ್ಯೂಹ, ಹೆಣ್ಣು ಭ್ರೂಣ ಹತ್ಯೆ, ಶ್ವಾಸಕೋಶ, ಮೀನು, ತಾಪದಿಂದ ಘನವಸ್ತುಗಳ ಹಿಗ್ಗುವಿಕೆ, ದ್ರವ್ಯದ ಮೂರು ಸ್ಥಿತಿಗಳು ಹಾಗೂ ಟಾರ್ಚ್, ಸೌರಮಂಡಲ, ಬಲ್ಬು, ಬೆಳಕು ಸರಳರೇಖೆಯಲ್ಲಿ ಚಲಿಸುವಿಕೆಯ ಬಗ್ಗೆ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಶಾಲೆಯ ಶಿಕ್ಷಕರಾದ ಸಿದ್ದೇಶ್, ಲಕ್ಷಣ್, ಉಮೇಶ್ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ : ಕೇಂದ್ರ ಸಚಿವ ಶೇಖಾವತ್ ಹೇಳಿಕೆ ಖಂಡಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ