ಚೆಕ್ ಪೋಸ್ಟ್, ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿ ಪರಿಶೀಲಿಸಿದ ಡಿ.ಸಿ. ಡಾ.ರಾಜೇಂದ್ರ
Team Udayavani, Apr 1, 2023, 9:54 AM IST
ಹುಣಸೂರು: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಇಲ್ಲಿನ ಸ್ಟಾಂಗ್ ರೂಂ, ಕಂಟ್ರೋಲ್ ರೂಂ, ಚೆಕ್ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಚುನಾವಣಾ ಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮಾ. 31ರ ಶುಕ್ರವಾರ ಬೆಳಗ್ಗೆ ತಾಲೂಕಿನ ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿ, ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ನಗರದ ಸಂತ ಜೋಸೆಫರ ಶಾಲೆಯ ಮಸ್ಟರಿಂಗ್-ಡಿಮಸ್ಟರಿಂಗ್, ಸ್ಟಾಂಗ್ ರೂಂನ ಸ್ಥಳ ಪರಿಶೀಲಿಸಿ, ಕೆಲ ಸಲಹೆ ನೀಡಿದರು.
ತಾಲೂಕು ಕಚೇರಿಯ ಕಂಟ್ರೋಲ್ ರೂಂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಿಸಿದ ನಂತರ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದರು.
ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾಧಿಕಾರಿ ರುಚಿ ಬಿಂದಾಲ್, ನೋಡಲ್ ಅಧಿಕಾರಿ ಬಿ.ಕೆ.ಮನು, ಉಪ ಚುನಾವಣಾಧಿಕಾರಿ ಡಾ.ಅಶೋಕ್, ಪ್ರೊಬೇಷನರಿ ತಹಸೀಲ್ದಾರ್ ನೂರಲ್ ಹುಧಾ, ಚುನಾವಣಾ ಶಿರಸ್ತೆದಾರ್ ಕಿರಣ್ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು