ಹುಣಸೂರು: ಸುಡಾನ್‌ನಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕ್ರಮ

ಸಮಸ್ಯೆಗೆ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಿ: ಡಿ.ಸಿ.ರಾಜೇಂದ್ರ

Team Udayavani, Apr 22, 2023, 1:06 PM IST

6–hunsur

ಹುಣಸೂರು: ಯುದ್ದ ಪೀಡಿತ ಸುಡಾನ್ ದೇಶದಲ್ಲಿ ಸಿಲುಕಿಕೊಂಡಿರುವ ಹಕ್ಕಿಪಿಕ್ಕಿ ಸಮುದಾಯದವರನ್ನು ಸುರಕ್ಷಿತವಾಗಿ ಕರೆತರಲು ಸರಕಾರ ಎಲ್ಲಾ ಕ್ರಮ ವಹಿಸಿದ್ದು, ಧೃತಿಗೆಡಬೇಡಿ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಗ್ರಾಮಸ್ಥರಿಗೆ ಅಭಯ ನೀಡಿದರು.

ಹುಣಸೂರು ತಾಲೂಕು ಒಂದನೇ ಪಕ್ಷಿರಾಜಪುರಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡದೊಂದಿಗೆ ಅವರು ಸುಡಾನ್‌ನಲ್ಲಿ ಸಿಲುಕಿಕೊಂಡಿರುವ ಕುಟುಂಬದವರು ಹಾಗೂ ಸಮುದಾಯದ ಮುಖಂಡರಿಂದ ಮಾಹಿತಿ ಪಡೆದರಲ್ಲದೆ, ಸುಡಾನ್‌ನಲ್ಲಿರುವವರೊಂದಿಗೆ ವಿಡೀಯೋ ಕಾಲ್ ಮೂಲಕ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ನಂತರ ಸ್ಥಳೀಯ ಮುಂಡರು, ಸಂಪಕ್ಟದಲ್ಲಿ ಸಿಲುಕಿರುವವರ ಕುಟುಂಬದವರೊಂದಿಗೆ ಚರ್ಚಿಸಿದರು.

ಹುಣಸೂರು-ಕೋಟೆಯಿಂದ 116 ಮಂದಿ:

ಈ ವೇಳೆ ಗ್ರಾಮದ ಮುಖಂಡರಾದ ನಂಜುಂಡ ಸ್ವಾಮಿ, ಗೋಪಿ, ಸ್ಯಾಂಡಿ, ವಿಜೇಶ್, ಧರ್ಮ, ಪ್ರತಾಪ್ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ಸಮಸ್ಯೆ ಕುರಿತು ವಿವರಿಸಿದರು.

ಆಯುರ್ವೇದ ಔಷಧ, ಮಸಾಜ್, ಗಿಡಮೂಲಿಕೆಗಳ ವ್ಯಾಪಾರಕ್ಕಾಗಿ ಹುಣಸೂರು ತಾಲೂಕಿನ ಒಟ್ಟು 116 ಮಂದಿ ಹಕ್ಕಿಪಿಕ್ಕಿ ಸಮುದಾಯದ ಹಲವರು ಡಿಸೆಂಬರ್ 2022ರ ಮೊದಲ ವಾರದಲ್ಲಿ ಸುಡಾನ್‌ಗೆ ತೆರಳಿದ್ದಾರೆಂದು ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ಗಾಳಿ ಸುದ್ದಿಗೆ ಮಹತ್ವ ನೀಡಬೇಡಿ, ಧೈರ್ಯದಿಂದ ಅಲ್ಲೇ ಉಳಿಯುವವರು ಮತ್ತು ವಾಪಸ್ ಬರುವವರ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ ವೇಳೆ ಎಲ್ಲರೂ ವಾಪಸ್ ಬರಲು ಇಚ್ಚಿಸಿದ್ದಾರೆಂದು ಮುಖಂಡ ನಂಜುಂಡಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸಿ:

ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ, ಸರಕಾರ ಅಲ್ಲಿನ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಆತಂಕ ಪಡಬೇಡಿ. ಏನೇ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು.

ಈ ವೇಳೆ ತಹಶೀಲ್ದಾರ್ ಡಾ.ಅಶೋಕ್. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮುನಿರಾಜು, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ್, ವಾರ್ಡನ್ ಲಕ್ಷಣ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.