I.N.D.I.A: ಯಾರಾದರೂ ಪ್ರಧಾನಿ ಅಭ್ಯರ್ಥಿ ಆಗಲಿ ಬೇಜಾರಿಲ್ಲ: ನಿತೀಶ್
ಮೈತ್ರಿಕೂಟದ ಗೆಲುವು ಮುಖ್ಯ - ಯಾರ ಮೇಲೂ ಬೇಜಾರಿಲ್ಲ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಚ್ಚರಿಯ ಹೇಳಿಕೆ
Team Udayavani, Dec 25, 2023, 11:22 PM IST
ಪಟ್ನಾ: ಐ.ಎನ್.ಡಿ.ಐ.ಎ. ಒಕ್ಕೂಟದಿಂದ ಪ್ರಧಾನಮಂತ್ರಿ ಹುದ್ದೆಗೆ ಯಾರನ್ನು ಬೇಕಾದರೂ ಆಯ್ಕೆ ಮಾಡಲಿ. ನನಗೇನೂ ಬೇಸರವಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ವಿರುದ್ಧ ಜಯಗಳಿಸುವುದೇ ಪ್ರಧಾನ ಆದ್ಯತೆ”
ಹೀಗೆಂದು ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದಿದ್ದ ಇಂಡಿಯಾ ಒಕ್ಕೂಟದ ಸಭೆಯಲ್ಲಿ ತಮಗೆ ಅಸಮಾಧಾನವಾಗಿದೆ ಎಂಬ ವರದಿಗಳನ್ನು ಅವರು ಖಂಡತುಂಡವಾಗಿ ತಿರಸ್ಕರಿಸಿದ್ದಾರೆ.
“ನನಗೆ ಯಾರ ವಿರುದ್ಧ ಕೋಪವೂ ಇಲ್ಲ ಮತ್ತು ಯಾವುದರ ವಿರುದ್ಧವೂ ಅಸಂತೃಪ್ತಿಯೂ ಇಲ್ಲ. ಮಲ್ಲಿ ಕಾರ್ಜುನ ಖರ್ಗೆ ಅವರನ್ನು ಐ.ಎನ್.ಡಿ.ಐ.ಎ. ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿ ಸಲು ನನಗೆ ಯಾವುದೇ ತಕರಾರು ಇಲ್ಲ. ಜತೆಗೆ ಯಾರನ್ನು ಬೇಕಾದರೂ ಪ್ರಧಾನಮಂತ್ರಿ ಹುದ್ದೆಗೆ ಆಯ್ಕೆ ಮಾಡಬಹುದು” ಎಂದಿದ್ದಾರೆ.ಸೀಟು ಹಂಚಿಕೆ ಶೀಘ್ರವಾಗಲಿ ಎಂದಿದ್ದೆ: ಶೀಘ್ರವಾಗಿ ಸೀಟು ಹಂಚಿಕೆ ಕುರಿತು ನಿರ್ಧಾರ ತಾಳುವಂತೆ ಸಭೆಯಲ್ಲಿ ನಾನು ತಿಳಿಸಿದ್ದೇನೆ. ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ. ಒಕ್ಕೂಟದ ಸದಸ್ಯರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ನಿತೀಶ್ ಕುಮಾರ್ ಹೇಳಿದರು.
ಕೆಲವು ದಿನಗಳ ಹಿಂದೆ ನಡೆದ ಐ.ಎನ್.ಡಿ.ಐ.ಎ. ಒಕ್ಕೂಟದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಪ್ರಸ್ತಾವ ಮುಂದಿಟ್ಟರು. ಇದಕ್ಕೆ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ