I.N.D.I.A: ಹೆಚ್ಚುತ್ತಿದೆ ಬಿರುಕು- ಪಂಜಾಬ್ ಬಳಿಕ ದಿಲ್ಲಿಯಲ್ಲೂ ಏಕಾಂಗಿ ಸ್ಪರ್ಧೆ: ಕೇಜ್ರಿ
Team Udayavani, Feb 12, 2024, 12:28 AM IST
ಹೊಸದಿಲ್ಲಿ: ಪಂಜಾಬ್, ಚಂಡೀಗಢದ 14 ಲೋಕಸಭಾ ಕ್ಷೇತ್ರಗಳಲ್ಲಿ ಏಕಾಂಗಿ ಸ್ಪರ್ಧೆ ಬಗ್ಗೆ ಘೋಷಿಸಿದ ಬೆನ್ನಲ್ಲೇ ಆಪ್ ಸಂಚಾಲಕ ಕೇಜ್ರಿವಾಲ್, ಈಗ ದಿಲ್ಲಿಯ 7 ಲೋಕಸಭಾ ಕ್ಷೇತ್ರಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ. ಇದು ವಿಪಕ್ಷಗಳ ಇಂಡಿಯಾ ಒಕ್ಕೂಟವು ದಿನಕಳೆದಂತೆ ಶಕ್ತಿ ಕಳೆದುಕೊಳ್ಳುತ್ತಿದೆಯೇ ಎಂಬ ಪ್ರಶ್ನೆ ಯನ್ನು ಹುಟ್ಟುಹಾಕಿದೆ.
ರವಿವಾರ ಪಂಜಾಬ್ನ ತರಣ್ತಾರಣ್ನಲ್ಲಿ ಮಾತನಾಡಿದ ಅವರು, “ಎಲ್ಲ 7 ಕ್ಷೇತ್ರಗಳಲ್ಲಿ ಆಪ್ ಗೆಲ್ಲಬೇಕು ಎಂದು ದಿಲ್ಲಿ ಯ ಜನರು ಮನಸ್ಸು ಮಾಡಿದ್ದಾರೆ. ಪಂಜಾಬ್ನಲ್ಲಿ 13 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ ಗಳಿಸುವಂತೆ ಮಾಡಬೇಕು. ಇದರಿಂದ ಪಂಜಾಬ್ ಸರಕಾರದ ಶಕ್ತಿ ವರ್ಧನೆಯಾಗಲಿದೆ. ಕೇಂದ್ರ ಸರಕಾರ ರಾಜ್ಯಕ್ಕೆ ನೀಡಬೇಕಾಗಿರುವ ತೆರಿಗೆ ಪಾಲನ್ನು ಕ್ಲಪ್ತವಾಗಿ ನೀಡಲಿದೆ’ ಎಂದಿದ್ದಾರೆ.
ದಿಲ್ಲಿ ಸೀಟು ಹಂಚಿಕೆ ಬಗ್ಗೆ ಆಪ್ ಮತ್ತು ಕಾಂಗ್ರೆಸ್ ನಡುವೆ ಮಾತುಕತೆಗಳು ಪ್ರಗತಿಯಲ್ಲಿ ಇರುವಂತೆಯೇ ಕೇಜ್ರಿವಾಲ್ ಈ ಮಾತನಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್ 4 ಮತ್ತು ಆಪ್ 3 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿತ್ತು.
ಇಂಡಿಯಾ ಒಕ್ಕೂಟ ಬಲಶಾಲಿ ಯಾಗಿದ್ದು, ಮೈತ್ರಿಕೂಟದ ಸದಸ್ಯ ಪಕ್ಷಗಳೆಲ್ಲವೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ. ಹಾಗಾಗಿಯೇ ಬಿಜೆಪಿಯು ತನಿಖಾ ಸಂಸ್ಥೆಗಳ ಮೂಲಕ ವಿಪಕ್ಷ ನಾಯಕರನ್ನು ಬೆದರಿಸಿ ಎನ್ಡಿಎ ಮೈತ್ರಿ ಕೂಟಕ್ಕೆ ಸೇರಿಸಿಕೊಳ್ಳಲು ಯತ್ನಿಸುತ್ತಿದೆ. ಒಂದಿ ಬ್ಬರು ಕೂಟ ತೊರೆದಲ್ಲಿ ನಷ್ಟವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ