ಬ್ರಾಹ್ಮಣರಿಗೆ ಶೇ. 10 ಮೀಸಲು ನೀಡದಿದ್ದರೆ ಹೈಕೋರ್ಟ್ ಮೊರೆ
Team Udayavani, Feb 26, 2023, 6:20 AM IST
ಹಾವೇರಿ: ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ಮೀಸಲಾತಿ (ಇಡಬ್ಲ್ಯೂ ಎಸ್) ವ್ಯವಸ್ಥೆ ಜಾರಿಗೊಳಿಸಿದ್ದರೂ ರಾಜ್ಯ ಸರಕಾರ ಇದನ್ನು ಅನುಷ್ಠಾನಗೊಳಿಸುತ್ತಿಲ್ಲ. 2-3 ವಾರಗಳಲ್ಲಿ ಇಡಬ್ಲ್ಯೂ ಎಸ್ ಪ್ರಮಾಣ ಪತ್ರ ಸೌಲಭ್ಯ ನೀಡದಿದ್ದರೆ, ಈ ಕುರಿತು ಹೈಕೋರ್ಟ್ನಲ್ಲಿ ದಾವೆ ಹೂಡಲಾಗುವುದು ಎಂದು ಬ್ರಾಹ್ಮಣ ಸಮಾಜ (ಎಕೆಬಿಎಂಎಸ್) ರಾಜ್ಯಾಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.
ಅಗಡಿ ಗ್ರಾಮದ ಶ್ರೀಕ್ಷೇತ್ರ ಆನಂದವನದಲ್ಲಿ ಜಿಲ್ಲಾ ಬ್ರಾಹ್ಮಣ ಸಮಾಜ ಏರ್ಪಡಿಸಿದ್ದ ಹಾವೇರಿ ಜಿಲ್ಲಾ ಪ್ರಥಮ ಬ್ರಾಹ್ಮಣ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನಾತ್ಮಕವಾಗಿ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಕೊಟ್ಟಿದೆ. ಇದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೂ, ರಾಜ್ಯ ಸರಕಾರ ಮೀಸಲಾತಿ ಕೊಟ್ಟಿಲ್ಲ. ಬ್ರಾಹ್ಮಣರಿಗೆ ಅನುಕೂಲ ಮಾಡಿಕೊಟ್ಟರೆ ಬೇರೆ ಸಮುದಾಯದರು ಬೇಸರ ಮಾಡಿಕೊಳ್ಳುತ್ತಾರೆಂಬ ಕಾರಣದಿಂದ ಮೀಸಲಾತಿ ಜಾರಿಗೊಳಿಸುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ