BJP ರಾಜ್ಯಾಧ್ಯಕ್ಷನಾದರೆ ಡಿಕೆಶಿಗಿಂಥ ಸ್ಪೀಡ್ ಕೆಲಸ ಮಾಡುವೆ ತೋರಿಸುವೆ: ಸೋಮಣ್ಣ
ವರಿಷ್ಠರು ಅವಕಾಶ ನೀಡಿದರೆ ಅದರ ಮಜಾವೇ ಬೇರೆ: ಸೋಮಣ್ಣ
Team Udayavani, Aug 12, 2023, 9:37 PM IST
ಬೆಂಗಳೂರು: ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ಮಾಡಿಕೊಟ್ಟರೆ ಡಿ.ಕೆ.ಶಿವಕುಮಾರ್ಗಿಂಥ ಸ್ಪೀಡ್ ಆಗಿ ಕೆಲಸ ಮಾಡಿ ತೋರಿಸುತ್ತೇನೆ. ವರಿಷ್ಠರು ನನಗೇನಾದರೂ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಅದರ ಮಜಾವೇ ಬೇರೆ ಇರುತ್ತದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಮತ್ತೂಮ್ಮೆ ರಾಜ್ಯಾಧ್ಯಕ್ಷ ಸ್ಥಾನದ ಬಯಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಾಯಕರ ಅಂಗಳದಲ್ಲಿ ಬಾಲ್ ಇದೆ. ಕಾಂಗ್ರೆಸ್ ನಲ್ಲಿ ನೂರಾರು ಲೀಡರ್ ಇದ್ದಾರೆ. ಕಾರ್ಯಾಧ್ಯಕ್ಷ ಸ್ಥಾನದ ಮೂಲಕ ಅವರು ಕೆಲಸ ಮಾಡುತ್ತಾರೆ. ನಮ್ಮಲ್ಲೂ ಹಾಗೆ ಮಾಡಬಹುದು. ಬಿಜೆಪಿಯಲ್ಲೂ ಎರಡು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿ ಮಾಡಬಹುದು. ನನ್ನ ಅನುಭವ ಬಳಸಿಕೊಳ್ಳುವುದು, ಬಿಡುವುದು ಹೈಕಮಾಂಡ್ಗೆ ಸೇರಿದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆಯಲ್ಲಿ ಹಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡೆ. ಕೆಲವು ಕಹಿ ಘಟನೆಯಿಂದ ಸ್ವಯಂಕೃತ ಅಪರಾಧ ಎಸಗಿ ಗೋವಿಂದರಾಜ ನಗರದ ಜನರಿಗೆ ಅಪಚಾರ ಮಾಡಿದೆ ಎಂಬ ನೋವು ನನ್ನನ್ನು ಕಾಡುತ್ತಿದೆ. 1983ರಿಂದ ರಾಜಕಾರಣದಲ್ಲಿ ನಾನು ಬಹಳ ಕೆಲಸ ಮಾಡಿದ್ದೇನೆ. ಆದರೆ ಈಗ ನಾನೇ ನಾನಾಗಿ ಕಾಲಿನ ಮೇಲೆ ಕಲ್ಲು ಹಾಕಿಕೊಂಡಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ
ಹೈಕಮಾಂಡ್ ಕೊಟ್ಟ ಟಾಸ್ಕ್ನ್ ನಾನೋಬ್ಬನೇ ಗಂಭೀರವಾಗಿ ತೆಗೆದುಕೊಂಡೆ. ನನ್ನ ಸೋಲಿಗೆ ನಮ್ಮ ಪಕ್ಷದವರೇ ಕಾರಣ. ಇಷ್ಟರ ನಡುವೆಯೂ ನಾನು ಒಂದು ಕಡೆ ಮೂರು ಸಾವಿರ ಮತಗಳ ಅಂತರದಿಂದ ಸೋತೆ. ಇನ್ನೊಂದು ಕಡೆ ಎಪ್ಪತ್ತು ಸಾವಿರ ಮತಗಳಿಸಿದೆ. ನಾನು ಹೇಗೆ ಸೋತೆ ಅಂತ ಎಲ್ಲರಿಗೂ ಗೊತ್ತು. ಆ ಬಗ್ಗೆ ನನ್ನ ಬಾಯಿ ಬಿಡಿಸಬೇಡಿ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ